ಬೆಂಗಳೂರು: ಚಂದ್ರಯಾನ-2 ಕೊನೆ ಕ್ಷಣದಲ್ಲಿ ನಿರಾಸೆಯುಂಟು ಮಾಡಿತು. ಇಂದು ಬೆಳಗ್ಗೆ ಇಸ್ರೋ ಕಚೇರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರು ವಿಜ್ಞಾನಿಗಳು ಮತ್ತು ದೇಶವನ್ನುದ್ದೇಶಿಸಿ ಮಾತನಾಡಿದರು. ಇಸ್ರೋ ಕಚೇರಿಯಿಂದ ಹೊರ ಬರುತ್ತಲೇ ಪ್ರಧಾನಿ ಮೋದಿ ಅವರನ್ನು ಇಸ್ರೋ ಮುಖ್ಯಸ್ಥ ಕೆ.ಶಿವನ್ ಆಲಂಗಿಸಿ ಕಣ್ಣೀರಿಟ್ಟರು.
ಕೆ.ಶಿವನ್ ಅವರನ್ನು ಆಲಂಗಿಸಿಕೊಂಡು ಪ್ರಧಾನಿಗಳು ಧೈರ್ಯ ತುಂಬಿದರು. ತಮ್ಮ ಭಾಷಣದಲ್ಲಿಯೂ ವಿಜ್ಞಾನಿಗಳ ಕೆಲಸಕ್ಕೆ ಮೆಚ್ಚುಗೆ ಸೂಚಿಸಿದ ಪ್ರಧಾನಿಗಳು, ಅಮೃತ ಸಂತಾನಕ್ಕೆ ತಡೆ ಇಲ್ಲ. ನೀವು ಪ್ರೇರಣೆಯ ಚಿಲುಮೆಗಳು. ಹಾಗಾಗಿ ಬೆಳ್ಳಂಬೆಳಗ್ಗೆ ನಿಮ್ಮ ದರ್ಶನದ ಮೂಲಕ ಪ್ರೇರಣೆ ಪಡೆಯಲು ನಾನು ಬಂದಿದ್ದೇನೆ ಎಂದು ವಿಜ್ಞಾನಿಗಳಿಗೆ ಧೈರ್ಯ ತುಂಬಿದರು.
#WATCH PM Narendra Modi hugged and consoled ISRO Chief K Sivan after he(Sivan) broke down. #Chandrayaan2 pic.twitter.com/R1d0C4LjAh
— ANI (@ANI) September 7, 2019
ನಿಮ್ಮ ಕಠಿಣ ಪರಿಶ್ರಮ ಎಲ್ಲರಿಗೂ ಗೊತ್ತಿದೆ. ಹಾಗಾಗಿ ಇಡೀ ಭಾರತ ನಮ್ಮ ಇಸ್ರೋ ವಿಜ್ಞಾನಿಗಳೊಂದಿಗೆ ಇದೆ. ಅಡೆತಡೆಗಳಿಂದ ನಿಮ್ಮ ಉತ್ಸಾಹ ಹೆಚ್ಚಾಗಿದೆ. ತೊಂದರೆಗಳು ಎದುರಾಗಿವೆ ಎಂದು ಧೃತಿಗಡೆಬಾರದು. ಸತತ ಪರಿಶ್ರಮಕ್ಕೆ ಪ್ರತಿಫಲ ಸಿಗಲಿದೆ. ವಿಫಲತೆಗೆ ಎದೆಗುಂದದೆ, ಗುರಿ ತಲುಪವಲ್ಲಿ ನಮ್ಮ ಕೆಲಸ ಆರಂಭವಾಗಬೇಕಿದೆ. ನೀವು ಮಾಡಿದ್ದನ್ನು, ಇದೂವರೆಗೂ ಯಾರು ಮಾಡಿಲ್ಲ. ನಿನ್ನೆ ರಾತ್ರಿಯೂ ಹೇಳಿದಂತೆ ನಾನು ನಿಮ್ಮೊಂದಿಗಿದ್ದೇನೆ ಎಂದು ಹೇಳಲು ಇಷ್ಟಪಡುತ್ತೇನೆ ಎಂದು ಪ್ರಧಾನಿಗಳು ತಮ್ಮ ಭಾಷಣದಲ್ಲಿ ಹೇಳಿದರು.
Watch Live: Honorable Prime Minister Shri. Narendra Modi Addressing the Nation https://t.co/SAGMyi1Nkp
— ISRO (@isro) September 7, 2019