Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 15 ವರ್ಷ ಏರೋಸ್ಪೇಸ್‌ನಲ್ಲಿ ತಯಾರಾಗಿದ್ದ ರಕ್ಷಣಾ ಸಾಮಾಗ್ರಿಗಳ 5 ಪಟ್ಟು ಕಳೆದ 8 ವರ್ಷಗಳಲ್ಲಿ ತಯಾರಾಗಿದೆ: ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | 15 ವರ್ಷ ಏರೋಸ್ಪೇಸ್‌ನಲ್ಲಿ ತಯಾರಾಗಿದ್ದ ರಕ್ಷಣಾ ಸಾಮಾಗ್ರಿಗಳ 5 ಪಟ್ಟು ಕಳೆದ 8 ವರ್ಷಗಳಲ್ಲಿ ತಯಾರಾಗಿದೆ: ಮೋದಿ

Karnataka

15 ವರ್ಷ ಏರೋಸ್ಪೇಸ್‌ನಲ್ಲಿ ತಯಾರಾಗಿದ್ದ ರಕ್ಷಣಾ ಸಾಮಾಗ್ರಿಗಳ 5 ಪಟ್ಟು ಕಳೆದ 8 ವರ್ಷಗಳಲ್ಲಿ ತಯಾರಾಗಿದೆ: ಮೋದಿ

Public TV
Last updated: February 6, 2023 5:49 pm
Public TV
Share
3 Min Read
PM Narendra Modi inaugurates HALs Helicopter Factory in Tumakuru unveils Light Utility Helicopter
SHARE

ತುಮಕೂರು: ಡಬಲ್ ಇಂಜಿನ್ ಸರ್ಕಾರ ಹೇಗೆ ಕೆಲಸ ಮಾಡುತ್ತಿದೆ ಎನ್ನುವುದಕ್ಕೆ ಹೆಲಿಕಾಪ್ಟರ್ (Helicopter) ಉತ್ಪಾದನಾ ಘಟಕವೂ ಒಂದು ನಿದರ್ಶನ. 15 ವರ್ಷ ಏರೋಸ್ಪೇಸ್‌ನಲ್ಲಿ ತಯಾರಾಗಿದ್ದ ರಕ್ಷಣಾ ಸಾಮಾಗ್ರಿಗಳ ಐದು ಪಟ್ಟು ಸಾಮಾಗ್ರಿಗಳು ಕಳೆದ ಎಂಟು ವರ್ಷಗಳಲ್ಲಿ ತಯಾರಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹೇಳಿದ್ದಾರೆ.

ಗುಬ್ಬಿ ತಾಲೂಕಿನ ಬಿದರಹಳ್ಳ ಕಾವಲ್‌ನಲ್ಲಿ ತಲೆ ಎತ್ತಿರುವ ಎಷ್ಯಾ ಅತಿ ದೊಡ್ಡ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ (HAL) ಹೆಲಿಕಾಪ್ಟರ್‌ ನಿರ್ಮಾಣ ಘಟಕವನ್ನು ಲೋಕಾರ್ಪಣೆ ಮಾಡಿ ಮೋದಿ ಮಾತನಾಡಿದರು.

2014ಕ್ಕೂ ಮೊದಲು ಹೇಗಿತ್ತು ಅಂತ ನೆನಪಿದೆಯಾ? 2014ಕ್ಕೂ ಮುಂಚಿನ 15 ವರ್ಷ ಏರೋಸ್ಪೇಸ್‌ನಲ್ಲಿ ತಯಾರಾಗಿದ್ದ ರಕ್ಷಣಾ ಸಾಮಾಗ್ರಿಗಳ ಐದು ಪಟ್ಟು ಕಳೆದ ಎಂಟು ವರ್ಷಗಳಲ್ಲಿ ತಯಾರಾಗಿದೆ. ಈ ಎಚ್‌ಎಎಲ್‌ ಘಟಕದಲ್ಲಿ ಯುದ್ಧ ಹೆಲಿಕಾಪ್ಟರ್‌ಗಳ ತಯಾರಿಕೆಯೂ ಆಗಲಿದೆ. ನಮ್ಮ ಸೇನೆಗೆ ಮತ್ತಷ್ಟು ಬಲವನ್ನು ಈ ಘಟಕ ತುಂಬಲಿದೆ ಎಂದು ಸರ್ಕಾರದ ಸಾಧನೆಯನ್ನು ಕೊಂಡಾಡಿದರು.

ಖಾಸಗಿ ವಲಯಕ್ಕೂ ರಕ್ಷಣಾ ವಲಯದಲ್ಲಿ ಅವಕಾಶ ಕೊಡಲಾಗಿದೆ. ಇದನ್ನು ನೆಪ ಮಾಡಿ ನಮ್ಮ ಸರ್ಕಾರದ ಮೇಲೆ ತರಹೇವಾರಿ ಆರೋಪ ಮಾಡಲಾಯಿತು. ಇದೇ ಎಚ್‌ಎಎಲ್ ನೆಪ ಮಾಡಿ ಜನರಿಗೆ ಸುಳ್ಳು ಹೇಳಲಾಯಿತು. ಸುಳ್ಳು ಎಷ್ಟೇ ಪ್ರಬಲವಾಗಿದ್ದರೂ ಎಷ್ಟು ಜನಕ್ಕೆ ಹೇಳಿದರೂ ಒಂದು ದಿನ ಸುಳ್ಳು ಸತ್ಯದ ಎದುರು ಸೋಲಲೇಬೇಕು. ಇಂದು ಎಚ್‌ಎಎಲ್‌ನ ಶಕ್ತಿ ವೃದ್ಧಿಯಿಂದ ಸುಳ್ಳುಕೋರರ ವೇಷ ಕಳಚಿದೆ. ಭಾರತೀಯ ಸೇನೆಗೆ ಎಚ್‌ಎಎಲ್ ಆಧುನಿಕ ತೇಜಸ್ ತಯಾರಿಸುತ್ತಿದೆ. ರಕ್ಷಣಾ ವಲಯದಲ್ಲಿ ಎಚ್ಎಎಲ್ ಭಾರತದ ಆತ್ಮ ನಿರ್ಭರಕ್ಕೆ ಬಲ ಕೊಡುತ್ತಿದೆ ಎಂದರು.

ಕರ್ನಾಟಕ (Karnataka) ಯುವ ಟ್ಯಾಲೆಂಟ್‌, ಯುವ ಅನ್ವೇಷಣೆಯ ನೆಲ. ಡ್ರೋನ್‌ನಿಂದ ನಿಂದ ತೇಜಸ್ ನಿರ್ಮಾಣದವರೆಗೆ ರಾಜ್ಯದ ಪ್ರತಿಭೆಯನ್ನು ಜಗತ್ತು ನೋಡುತ್ತಿದೆ. ಡಬಲ್ ಇಂಜಿನ್ ಸರ್ಕಾರ ಹೇಗೆ ಕೆಲಸ ಮಾಡುತ್ತಿದೆ ಎನ್ನುವುದಕ್ಕೆ ಹೆಲಿಕಾಪ್ಟರ್ ಉತ್ಪಾದನಾ ಘಟಕವೂ ಒಂದು ನಿದರ್ಶನ. ಈ ಘಟಕದ ಶಿಲಾನ್ಯಾಸ ಮಾಡುವ ಸೌಭಾಗ್ಯ ನನ್ನದಾಗಿತ್ತು. ಹೆಲಿಕಾಪ್ಟರ್‌, ಯುದ್ಧ ನೌಕೆ, ಯುದ್ಧ ವಿಮಾನ ಸೇರಿದಂತೆ ಹಲವಷ್ಟು ರಕ್ಷಣಾ ಸಾಮಾಗ್ರಿಗಳು ಭಾರತದಲ್ಲೇ ತಯಾರಾಗುತ್ತಿದ್ದು ಈಗ ಡಬಲ್‌ ಎಂಜಿನ್‌ ಸರ್ಕಾರದ ಅವಧಿಯಲ್ಲಿ ಉದ್ಘಾಟನೆ ಮಾಡಲಾಗಿದೆ ಎಂದು ಹೇಳಿದರು.

ಶಂಕುಸ್ಥಾಪನೆಗೊಂಡ ತುಮಕೂರು ಕೈಗಾರಿಕಾ ಟೌನ್ ಶಿಪ್ (Tumakuru Industrial Township) ಉದ್ಯೋಗಗಳ ಬಾಗಿಲು ತೆರೆಯಲಿದೆ. ಟೌನ್ ಶಿಪ್‌ ನಿರ್ಮಾಣ ಪಿಎಂ ಗತಿ ಶಕ್ತಿ ನ್ಯಾಷನಲ್ ಮಾಸ್ಟರ್ ಪ್ಲಾನ್ ಪ್ರಕಾರ ಆಗುತ್ತಿದೆ. ಈ ಟೌನ್ ಶಿಪ್‌ಗೆ ಮಲ್ಟಿ ಮೋಡಲ್ ಕನೆಕ್ಟಿವಿಟಿ ಮಾಡಲಾಗುತ್ತಿದೆ. ಡಬಲ್‌ ಎಂಜಿನ್‌ ಸರ್ಕಾರ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಹೇಳಿದರು.

ಭೌತಿಕ ಮೂಲಸೌಕರ್ಯದಷ್ಟೇ ಸಾಮಾಜಿಕ ಮೂಲಸೌಕರ್ಯ ಒದಗಿಸಲು ನಾವು ಬದ್ಧರಾಗಿದ್ದೇವೆ. ಕೃಷಿ ನೀರಾವರಿ, ಮನೆಗಳಿಗೆ ನೀರು ಸಂಪರ್ಕ ಜಲಜೀವನಮಿಷನ್ ಯೋಜನೆಗೆ ಈ ಬಜೆಟ್ ನಲ್ಲಿ 20 ಸಾವಿರ ಕೋಟಿ ಹೆಚ್ಚುವರಿ ಅನುದಾನ ಕೊಡಲಾಗಿದೆ. ಮನೆಗಳಿಗೆ ನೀರು ಸಿಗುವ ಮೂಲಕ ಬಡ ಮಹಿಳೆಯರಿಗೆ ಅನುಕೂಲವಾಗಲಿದೆ. ನೀರಿಗಾಗಿ ಕಿಲೋಮೀಟರ್‌ಗಟ್ಟಲೇ ನಡೆಯುವುದು ತಪ್ಪಲಿದೆ. ದೇಶದಲ್ಲಿ 11 ಕೋಟಿ ಮನೆಗಳಿಗೆ ನೀರಿನ ಸಂಪರ್ಕ ಕೊಡಲಾಗಿದೆ ಎಂದು ವಿವರಿಸಿದರು.

ಭದ್ರಾ ಮೇಲ್ಡಂಡೆ ಯೋಜನೆಯನ್ನು (Upper Bhadra Project) ಪ್ರಸ್ತಾಪಿಸಿದ ಮೋದಿ, ಕೃಷಿ ನೀರಾವರಿಗೆ ಆದ್ಯತೆ ನೀಡಲಾಗಿದ್ದು ಈ ಬಾರಿಯ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆಗೆ 5,300 ಕೋಟಿ ರೂ ಅನುದಾನ ಕೊಡಲಾಗಿದೆ. ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಗಳಿಗೆ ಕುಡಿಯುವ ನೀರು ಇದರಿಂದ ಸಿಗಲಿದೆ. ಸಣ್ಣ ರೈತರ ಕೃಷಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಬಜೆಟ್‌ನಲ್ಲಿ(Budget) ಸಹಕಾರ ವಲಯಕ್ಕೆ ಹೆಚ್ಚಿನ ಒತ್ತು ನೀಡಿದ್ದು, ಕಬ್ಬು ಬೆಳೆಗಾರರಿಗೂ ಬಜೆಟ್ ನಿಂದ ಅನುಕೂಲ. ಕರ್ನಾಟಕದಲ್ಲಿ ಸಿರಿಧಾನ್ಯಗಳ ಮಹತ್ವ ಎಲ್ಲರಿಗೂ ಗೊತ್ತಿದೆ. ರಾಜ್ಯದಲ್ಲಿ ಸಿರಿಧಾನ್ಯ ಬೆಳೆಗಳಿಗೆ ಪ್ರೋತ್ಸಾಹ ಕೊಡಲಾಗಿದೆ. ಕರ್ನಾಟಕದ ರಾಗಿಮುದ್ದೆ, ರಾಗಿ ರೊಟ್ಟಿ ಮರೆಯಲು ಸಾಧ್ಯವೇ ಇಲ್ಲ. ಸಿರಿಧಾನ್ಯ ಬೆಳೆಗಳಿಂದ ಸಣ್ಣ ರೈತರಿಗೆ ಅನುಕೂಲವಾಗಿದ್ದು ಡಬಲ್ ಇಂಜಿನ್ ಸರ್ಕಾರದ ಪ್ರಾಮಾಣಿಕ ಪ್ರಯತ್ನಗಳಿಂದ ಜನರ ವಿಶ್ವಾಸ ಹೆಚ್ಚಾಗಿದೆ ಎಂದು ತಿಳಿಸದರು.

ಈ ಮೊದಲು ತಳಮಟ್ಟದ ವರೆಗೂ ಸರ್ಕಾರಿ ಯೋಜನೆಗಳು ಸಿಗುತ್ತಿರಲಿಲ್ಲ. ನಾವು ಸಮಾಜದ ಕಟ್ಟಕಟೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳ ಲಾಭ ಮುಟ್ಟುವಂತೆ ನಿಗಾ ಇಟ್ಟಿದ್ದೇವೆ. ನಮ್ಮ ಅವಧಿಯಲ್ಲಿ ಸರ್ಕಾರದ ಎಲ್ಲ ಯೋಜನೆಗಳ ಲಾಭ ಎಲ್ಲರಿಗೂ ಸಿಗುತ್ತಿದೆ. ವಿಶ್ವಕರ್ಮ ಸಮುದಾಯದ ಸಹೋದರ ಸೋದರಿಯರಿಗೂ ಮೊದಲ ಸಲ ವಿಶೇಷ ಕಾರ್ಯಕ್ರಮ ತಂದಿದ್ದೇವೆ. ಕುಂಬಾರ, ಕಮ್ಮಾರ, ಅಕ್ಕಸಾಲಿಗ, ಶಿಲ್ಪಿ, ಬಡಗಿ, ಗಾರೆ ಕೆಲಸದವರಿಗೆ ಪಿಎಂ ಆವಾಸ್ ಯೋಜನೆಯಡಿ ನೆರವು. ಈ ವೃತ್ತಿ ಸಮುದಾಯಗಳ ಕೌಶಲ್ಯ ಹೆಚ್ಚಳಕ್ಕೂ ನೆರವು ಕೊಡಲಾಗಿದೆ. ಕೇಂದ್ರ ಬಜೆಟ್ ಅಭಿವೃದ್ಧಿಗೆ ಮತ್ತಷ್ಟು ಶಕ್ತಿ ಕೊಟ್ಟಿದ್ದು, ಸಮರ್ಥ ಭಾರತ, ಶಕ್ತಿಯುತ ಭಾರತ ನಿರ್ಮಾಣಕ್ಕೆ ಈ ಬಜೆಟ್ ಪೂರಕವಾಗಿದೆ ಎಂದು ಕೊಂಡಾಡಿದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:budgetHALhelicopterindianarendra modiಎಚ್‍ಎಎಲ್ತುಮಕೂರುನರೇಂದ್ರ ಮೋದಿಹೆಲಿಕಾಪ್ಟರ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Bagalkote 4
Bagalkot

ಬಾಗಲಕೋಟೆ | ಕಲ್ಲು ತೂರಾಟ ನಡೆದ ಮಸೀದಿ ಎದುರೇ ಮತ್ತೆ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

Public TV
By Public TV
43 minutes ago
Ahmedabad Modi Stadium
Cricket

ಸತತ 13 ಪಂದ್ಯ ಗೆಲ್ಲುವ ಕನಸು ಭಗ್ನ – ಸೋತರೂ ಮೊದಲ ಸ್ಥಾನದಲ್ಲಿದೆ ಭಾರತ

Public TV
By Public TV
60 minutes ago
Ind vs Sa 2
Cricket

ಕಳಪೆ ಬೌಲಿಂಗ್‌, ಬ್ಯಾಟಿಂಗ್‌ಗೆ ಬೆಲೆತೆತ್ತ ಭಾರತ – ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು

Public TV
By Public TV
1 hour ago
suspicions about his pregnant wife
Bengaluru City

ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Public TV
By Public TV
2 hours ago
Jasprit Bumrah 2
Cricket

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಬೂಮ್​ ಬೂಮ್​ ಬೂಮ್ರಾ

Public TV
By Public TV
3 hours ago
Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?