Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ರೈತರ ಶೇ.85ರಷ್ಟು ಹಣವನ್ನ ಕಾಂಗ್ರೆಸ್ಸಿನವರೇ ನುಂಗಿ ನೀರು ಕುಡಿದಿದ್ದಾರೆ – ಮೋದಿ ಸಿಡಿಮಿಡಿ

Public TV
Last updated: April 30, 2023 2:09 pm
Public TV
Share
3 Min Read
Narendra Modi 8
SHARE

– ಜನರಿಗಾಗಿ ನಾನು ಸರ್ಪ ಆಗಲೂ ಸಿದ್ಧ ಎಂದ ಮೋದಿ
– ಲೂಟಿ ಮಾಡಿದ್ದ 1 ಲಕ್ಷ ಕೋಟಿ ವಸೂಲಿ ಮಾಡಿದ್ದೇವೆ
– 9 ವರ್ಷಗಳಲ್ಲಿ 29 ಲಕ್ಷ ಕೋಟಿ ರೂ. ನೆರವು ಕೊಟ್ಟಿದ್ದೇವೆ

ಕೋಲಾರ: ಕಾಂಗ್ರೆಸ್ (Congress) ಪರಿವಾರದವರು ಜನರ ವಿಶ್ವಾಸಕ್ಕೆ ದ್ರೋಹ ಮಾಡಿದ್ದಾರೆ. ರೈತರಿಗೆ (Farmers)  ಕೊಡಬೇಕಾದ ಶೇ.85 ಹಣವನ್ನ ತಾವೇ ನುಂಗಿ ನೀರುಕುಡಿದಿದ್ದಾರೆ. ಕಾಂಗ್ರೆಸ್ ಸಚಿವರೊಬ್ಬರೇ ಹಿಂದೆ ಹೇಳಿದ್ದರು. ಅಂದ್ರೆ 85 ಪರ್ಸೆಂಟ್ ಕಮಿಷನ್ ತಿನ್ನುವ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ, ಇದು ಯಾವತ್ತಿಗೂ ಅಭಿವೃದ್ಧಿಮಾಡಲು ಸಾಧ್ಯವಿಲ್ಲ. ಆದ್ರೆ ಬಿಜೆಪಿ ಸರ್ಕಾರ ಡಿಜಿಟಲ್ ಇಂಡಿಯಾ ಮೂಲಕ ಕೇಂದ್ರದಿಂದ ಕಳುಹಿಸಿದ ಹಣ ನೇರವಾಗಿ ಜನರ ಖಾತೆಗೆ ಜಮೆ ಆಗುತ್ತಿದೆ. ಕಳೆದ 9 ವರ್ಷಗಳಲ್ಲಿ 29 ಲಕ್ಷ ಕೋಟಿ ರೂಪಾಯಿಗಳನ್ನ ಜಮೆ ಮಾಡಿದ್ದೇವೆ. ಹಿಂದಿನ ಸರ್ಕಾರ ಆಗಿದ್ರೆ 15 ಪರ್ಸೆಂಟ್ ಹಣ ಅಷ್ಟೇ ತಲುಪುತ್ತಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಗುಡುಗಿದರು.

BJP Programme

ಕೋಲಾರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನವರು ಭ್ರಷ್ಟಾಚಾರದ (Corruption) ವಿರುದ್ಧ ಹೋರಾಡಿಲ್ಲ. ಏಕೆಂದರೆ ಮಾಡುವ ಎಲ್ಲಾ ಯೋಜನೆಗಳಲ್ಲೂ ಭ್ರಷ್ಟಾಚಾರ ಇದೆ. 2009ಕ್ಕೂ ಮುನ್ನ ಅವರ ಸರ್ಕಾರ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ಆಗಿತ್ತು. ಅಂತಹವರ ಬಳಿಯಿದ್ದ 1 ಲಕ್ಷ ಕೋಟಿ ರೂ. ವಸೂಲಿ ಮಾಡಿದ್ದೇವೆ. ನಾನು ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದು, ಅದರಲ್ಲಿ ನೊಂದಿರೋರು ಕಾಂಗ್ರೆಸ್ಸಿನವರೇ. ಅದಕ್ಕಾಗಿ ನನಗೆ ಎಚ್ಚರಿಕೆಗಳನ್ನ ನೀಡುತ್ತಿದ್ದಾರೆ ಎಂದರು. ಇದನ್ನೂ ಓದಿ: ‘ಮನ್ ಕಿ ಬಾತ್’ ದೇಶದ ಭಾವನೆ ಅಭಿವ್ಯಕ್ತಪಡಿಸುವ ವೇದಿಕೆಯಾಗಿದೆ: ಬೊಮ್ಮಾಯಿ

Narendra Modi 7

ಕರ್ನಾಟಕದ ಜನತೆ `ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ’ ಅಂತಾ ಜನ ತೀರ್ಮಾನ ಮಾಡಿದ್ದಾರೆ. ಮುಂಬರುವ 25 ವರ್ಷಗಳ ಕರ್ನಾಟಕ ಅಭಿವೃದ್ಧಿಯ ಚಿತ್ರಣದ ಚುನಾವಣೆ ಇದು. ಅಸ್ಥಿರವಾದ ಸರ್ಕಾರ ಬಂದ್ರೆ ಅಭಿವೃದ್ಧಿ ಸಾಧ್ಯವಿಲ್ಲ. ಕರ್ನಾಟಕವನ್ನ ಕಾಂಗ್ರೆಸ್, ಜೆಡಿಎಸ್‌ನಂತಹ ಭ್ರಷ್ಟಾಚಾರದ ಕಪಿಮುಷ್ಟಿಯಿಂದ ಬಚಾವ್ ಮಾಡಬೇಕಿದೆ. ಹಾಗಾಗಿ ಈ ಬಾರಿ ರಾಜ್ಯದ ಜನತೆ ಡಬಲ್ ಎಂಜಿನ್ ಸರ್ಕಾರಕ್ಕೆ ಬಹುಮತ ನೀಡಿ ಎಂದು ಮನವಿ ಮಾಡಿದರು.

ಕಾಂಗ್ರೆಸ್ ಸರ್ಕಾರದಿಂದ ಅತ್ಯಂತ ಹೆಚ್ಚು ವಂಚನೆಗೆ ಒಳಗಾದವರು ಎಸ್ಸಿ, ಎಸ್ಟಿ, ಒಬಿಸಿ ಸಮಾಜ ಹಾಗೂ ಮಹಿಳಾ ವರ್ಗದವರು. ನಮ್ಮ ಸರ್ಕಾರ ಬಂದ ನಂತರ, ಕೋಟ್ಯಂತರ ಪಕ್ಕಾ ಮನೆಗಳನ್ನ ನೀಡಿದ್ದೇವೆ. 10 ಕೋಟಿಗೂ ಹೆಚ್ಚು ಮನೆಗಳಿಗೆ ಶೌಚಾಲಯ ಕಟ್ಟಿಸಿಕೊಟ್ಟಿದ್ದೇವೆ. 9 ಕೋಟಿ ಮಹಿಳೆಯರಿಗೆ ಉಚಿತವಾಗಿ ಅಡುಗೆ ಅನಿಲ ಸೌಲಭ್ಯ ಕಲ್ಪಿಸಿದ್ದೇವೆ. 2.5 ಕೋಟಿ ಮನೆಗಳಿಗೆ ನೇರ ವಿದ್ಯುತ್ ಸರಬರಾಜು ಮಾಡುವ ವ್ಯವಸ್ಥೆ ಮಾಡಿದ್ದೇವೆ ಎಂದು ತಮ್ಮ ಸರ್ಕಾರದ ಸಾಧನೆಗಳನ್ನ ತಿಳಿಸಿದರು. ಇದನ್ನೂ ಓದಿ: ನಾನು ಶಿವನ ಕೊರಳಿನಲ್ಲಿರುವ ಹಾವಿನಂತೆ – ಖರ್ಗೆ ಹೇಳಿಕೆಗೆ ಮೋದಿ ಕೌಂಟರ್‌

ಭಾರತವನ್ನ ಹೊಳೆಯುವ ನಕ್ಷತ್ರ ಮಾಡ್ತೀವಿ: ರಾಜ್ಯದಲ್ಲಿ ಸ್ಥಿರ ಸರ್ಕಾರ ಬಂದ್ರೆ ಅದರ ಲಾಭ ಏನು ಅನ್ನೋದು ಜನರಿಗೆ ತಿಳಿದಿದೆ. ಕಾಂಗ್ರೆಸ್ ಸರ್ಕಾರ ಕಾಲಘಟ್ಟದಲ್ಲಿ ಏನೆಲ್ಲಾ ಭ್ರಷ್ಟಾಚಾರ ನಡೀತು ಅಂತಾ ಜನರಿಗೆ ಗೊತ್ತಿದೆ. ಕರ್ನಾಟಕದ ಎರಡು ಪಕ್ಷಗಳು ರಾಜ್ಯಕ್ಕೆ ಕಂಟಕಪ್ರಾಯವಾಗಿದೆ. 2014ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇಡೀ ಭಾರತದ ಚಿತ್ರಣವನ್ನೇ ಬದಲಾವಣೆ ಮಾಡಿದ್ದನ್ನ ನೀವು ನೋಡಿದ್ದೀರಿ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ್ರೆ, ಭಾರತವನ್ನ ಹೊಳೆಯುವ ನಕ್ಷತ್ರವಾಗಿ ನೋಡ್ತೀರಿ ಎಂದು ಹೇಳಿದರು.

ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸಾರಿಗೆ ಸಂಪರ್ಕಕ್ಕೆ ಹೆಚ್ಚು ಹೊತ್ತು ನೀಡುತ್ತಿದ್ದೇವೆ. ಬೆಂಗಳೂರು-ಚನ್ನೈ ಎಕ್ಸ್‌ಪ್ರೆಸ್‌ ವೇ ಮಾಡಲಾಗುತ್ತಿದೆ. ಈ ಹೆದ್ದಾರಿಯಲ್ಲಿ ಬರುವ ಮುಳಬಾಗಲು ದೋಸೆಯೂ ಫೇಮಸ್ ಆಗುತ್ತಿದೆ. ಇತ್ತೀಚೆಗೆ ಕಾಂಗ್ರೆಸ್‌ನವರು ಸುಳ್ಳು ಗ್ಯಾರಂಟಿ ಕಾರ್ಡ್ಗಳನ್ನು ಕೊಡುತ್ತಿದ್ದಾರೆ. 2005ರಲ್ಲಿ ಉಚಿತ ವಿದ್ಯುತ್ ಕೊಡುವುದಾಗಿ ಗ್ಯಾರಂಟಿ ಕೊಟ್ಟರು. ಆದ್ರೆ ಆಶ್ವಾಸನೆ ಈಡೇರಿಲ್ಲ. ಆದ್ರೆ ಕಾಂಗ್ರೆಸ್ ಹೇಳಿಕೆಯನ್ನ ಸಾಕಾರಗೊಳಿಸಿದ್ದು ನಾವು. ಸಾಕಷ್ಟು ಹಳ್ಳಿಗಳಿಗೆ ಮನೆ ಮನೆಗೆ ವಿದ್ಯುತ್ ಕಲ್ಪಿಸಿದ್ದು ನಾವು ಎಂದು ಹೇಳಿದರು.

TAGGED:bjpcongresscorruptionelection campaignfarmersKarnataka Election 2023Kolarnarendra modiಕರ್ನಾಟಕ ಎಲೆಕ್ಷನ್ಕಾಂಗ್ರೆಸ್ಕೋಲಾರಚುನಾವಣಾ ಪ್ರಚಾರನರೇಂದ್ರ ಮೋದಿಭ್ರಷ್ಟಾಚಾರರೈತರು
Share This Article
Facebook Whatsapp Whatsapp Telegram

Cinema Updates

Shankar Mahadevan
IPL 2025 ಸಮಾರೋಪ ಸಮಾರಂಭದಲ್ಲಿ ʻಆಪರೇಷನ್ ಸಿಂಧೂರʼ ವಿಜಯೋತ್ಸವ – ಏನೆಲ್ಲಾ ವಿಶೇಷತೆ ಇರಲಿದೆ?
8 hours ago
anant nag
ಹಿರಿಯ ನಟ ಅನಂತ್ ನಾಗ್‌ಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ
5 hours ago
shine shetty
ಯಶಸ್ಸಿಗಾಗಿ ‘ವಿಲನ್’ ಆದ ‘ಬಿಗ್ ಬಾಸ್’ ಶೈನ್ ಶೆಟ್ಟಿ
10 hours ago
Kamal Haasan
ತಮಿಳಿನಿಂದ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕನ್ನಡಿಗರ ಆಕ್ರೋಶ
11 hours ago

You Might Also Like

RCB 1
Cricket

9 ವರ್ಷಗಳ ಬಳಿಕ ಕ್ವಾಲಿಫೈಯರ್‌ 1ಗೆ ಲಗ್ಗೆಯಿಟ್ಟ ಆರ್‌ಸಿಬಿ

Public TV
By Public TV
3 hours ago
Jitesh Sharma 2
Cricket

IPL 2025 | ಪಂದ್ಯ ಸೋತು ಹೃದಯ ಗೆದ್ದ ಪಂತ್‌

Public TV
By Public TV
4 hours ago
padma awards
Latest

ಪದ್ಮ ಪ್ರಶಸ್ತಿ; ಕನ್ನಡದ ಹಿರಿಯ ನಟ ಅನಂತ್‌ ನಾಗ್‌, ರಿಕಿ ಕೇಜ್‌ ಸೇರಿ 68 ಸಾಧಕರಿಗೆ ಪದ್ಮ ಪುರಸ್ಕಾರ ಪ್ರದಾನ

Public TV
By Public TV
4 hours ago
Jitesh Sharma
Cricket

IPL 2025 | ಜಿತೇಶ್‌ ನಾಯಕನ ಆಟಕ್ಕೆ ಲಕ್ನೋ ಧೂಳಿಪಟ – ಕ್ವಾಲಿಫೈಯರ್-1ಗೆ ಲಗ್ಗೆಯಿಟ್ಟ ಆರ್‌ಸಿಬಿ

Public TV
By Public TV
4 hours ago
mangaluru murder
Crime

ಮಂಗಳೂರು| ತಲ್ವಾರ್‌ನಿಂದ ದಾಳಿ ನಡೆಸಿ ಯುವಕನ ಬರ್ಬರ ಹತ್ಯೆ

Public TV
By Public TV
4 hours ago
Amandeep Kaur
Crime

ಮಹಿಂದ್ರಾ ಥಾರ್‌, ರಾಯಲ್‌ ಎನ್‌ಫೀಲ್ಡ್‌, ರೋಲೆಕ್ಸ್ ವಾಚ್‌, 1 ಕೋಟಿ ಮೌಲ್ಯದ ಫ್ಲಾಟ್‌ ಹೊಂದಿದ್ದ ಲೇಡಿ ಕಾನ್‌ಸ್ಟೇಬಲ್‌ ಅರೆಸ್ಟ್‌!

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?