Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ರೈತರ ಶೇ.85ರಷ್ಟು ಹಣವನ್ನ ಕಾಂಗ್ರೆಸ್ಸಿನವರೇ ನುಂಗಿ ನೀರು ಕುಡಿದಿದ್ದಾರೆ – ಮೋದಿ ಸಿಡಿಮಿಡಿ

Public TV
Last updated: April 30, 2023 2:09 pm
Public TV
Share
3 Min Read
Narendra Modi 8
SHARE

– ಜನರಿಗಾಗಿ ನಾನು ಸರ್ಪ ಆಗಲೂ ಸಿದ್ಧ ಎಂದ ಮೋದಿ
– ಲೂಟಿ ಮಾಡಿದ್ದ 1 ಲಕ್ಷ ಕೋಟಿ ವಸೂಲಿ ಮಾಡಿದ್ದೇವೆ
– 9 ವರ್ಷಗಳಲ್ಲಿ 29 ಲಕ್ಷ ಕೋಟಿ ರೂ. ನೆರವು ಕೊಟ್ಟಿದ್ದೇವೆ

ಕೋಲಾರ: ಕಾಂಗ್ರೆಸ್ (Congress) ಪರಿವಾರದವರು ಜನರ ವಿಶ್ವಾಸಕ್ಕೆ ದ್ರೋಹ ಮಾಡಿದ್ದಾರೆ. ರೈತರಿಗೆ (Farmers)  ಕೊಡಬೇಕಾದ ಶೇ.85 ಹಣವನ್ನ ತಾವೇ ನುಂಗಿ ನೀರುಕುಡಿದಿದ್ದಾರೆ. ಕಾಂಗ್ರೆಸ್ ಸಚಿವರೊಬ್ಬರೇ ಹಿಂದೆ ಹೇಳಿದ್ದರು. ಅಂದ್ರೆ 85 ಪರ್ಸೆಂಟ್ ಕಮಿಷನ್ ತಿನ್ನುವ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ, ಇದು ಯಾವತ್ತಿಗೂ ಅಭಿವೃದ್ಧಿಮಾಡಲು ಸಾಧ್ಯವಿಲ್ಲ. ಆದ್ರೆ ಬಿಜೆಪಿ ಸರ್ಕಾರ ಡಿಜಿಟಲ್ ಇಂಡಿಯಾ ಮೂಲಕ ಕೇಂದ್ರದಿಂದ ಕಳುಹಿಸಿದ ಹಣ ನೇರವಾಗಿ ಜನರ ಖಾತೆಗೆ ಜಮೆ ಆಗುತ್ತಿದೆ. ಕಳೆದ 9 ವರ್ಷಗಳಲ್ಲಿ 29 ಲಕ್ಷ ಕೋಟಿ ರೂಪಾಯಿಗಳನ್ನ ಜಮೆ ಮಾಡಿದ್ದೇವೆ. ಹಿಂದಿನ ಸರ್ಕಾರ ಆಗಿದ್ರೆ 15 ಪರ್ಸೆಂಟ್ ಹಣ ಅಷ್ಟೇ ತಲುಪುತ್ತಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಗುಡುಗಿದರು.

BJP Programme

ಕೋಲಾರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನವರು ಭ್ರಷ್ಟಾಚಾರದ (Corruption) ವಿರುದ್ಧ ಹೋರಾಡಿಲ್ಲ. ಏಕೆಂದರೆ ಮಾಡುವ ಎಲ್ಲಾ ಯೋಜನೆಗಳಲ್ಲೂ ಭ್ರಷ್ಟಾಚಾರ ಇದೆ. 2009ಕ್ಕೂ ಮುನ್ನ ಅವರ ಸರ್ಕಾರ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ಆಗಿತ್ತು. ಅಂತಹವರ ಬಳಿಯಿದ್ದ 1 ಲಕ್ಷ ಕೋಟಿ ರೂ. ವಸೂಲಿ ಮಾಡಿದ್ದೇವೆ. ನಾನು ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದು, ಅದರಲ್ಲಿ ನೊಂದಿರೋರು ಕಾಂಗ್ರೆಸ್ಸಿನವರೇ. ಅದಕ್ಕಾಗಿ ನನಗೆ ಎಚ್ಚರಿಕೆಗಳನ್ನ ನೀಡುತ್ತಿದ್ದಾರೆ ಎಂದರು. ಇದನ್ನೂ ಓದಿ: ‘ಮನ್ ಕಿ ಬಾತ್’ ದೇಶದ ಭಾವನೆ ಅಭಿವ್ಯಕ್ತಪಡಿಸುವ ವೇದಿಕೆಯಾಗಿದೆ: ಬೊಮ್ಮಾಯಿ

Narendra Modi 7

ಕರ್ನಾಟಕದ ಜನತೆ `ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ’ ಅಂತಾ ಜನ ತೀರ್ಮಾನ ಮಾಡಿದ್ದಾರೆ. ಮುಂಬರುವ 25 ವರ್ಷಗಳ ಕರ್ನಾಟಕ ಅಭಿವೃದ್ಧಿಯ ಚಿತ್ರಣದ ಚುನಾವಣೆ ಇದು. ಅಸ್ಥಿರವಾದ ಸರ್ಕಾರ ಬಂದ್ರೆ ಅಭಿವೃದ್ಧಿ ಸಾಧ್ಯವಿಲ್ಲ. ಕರ್ನಾಟಕವನ್ನ ಕಾಂಗ್ರೆಸ್, ಜೆಡಿಎಸ್‌ನಂತಹ ಭ್ರಷ್ಟಾಚಾರದ ಕಪಿಮುಷ್ಟಿಯಿಂದ ಬಚಾವ್ ಮಾಡಬೇಕಿದೆ. ಹಾಗಾಗಿ ಈ ಬಾರಿ ರಾಜ್ಯದ ಜನತೆ ಡಬಲ್ ಎಂಜಿನ್ ಸರ್ಕಾರಕ್ಕೆ ಬಹುಮತ ನೀಡಿ ಎಂದು ಮನವಿ ಮಾಡಿದರು.

ಕಾಂಗ್ರೆಸ್ ಸರ್ಕಾರದಿಂದ ಅತ್ಯಂತ ಹೆಚ್ಚು ವಂಚನೆಗೆ ಒಳಗಾದವರು ಎಸ್ಸಿ, ಎಸ್ಟಿ, ಒಬಿಸಿ ಸಮಾಜ ಹಾಗೂ ಮಹಿಳಾ ವರ್ಗದವರು. ನಮ್ಮ ಸರ್ಕಾರ ಬಂದ ನಂತರ, ಕೋಟ್ಯಂತರ ಪಕ್ಕಾ ಮನೆಗಳನ್ನ ನೀಡಿದ್ದೇವೆ. 10 ಕೋಟಿಗೂ ಹೆಚ್ಚು ಮನೆಗಳಿಗೆ ಶೌಚಾಲಯ ಕಟ್ಟಿಸಿಕೊಟ್ಟಿದ್ದೇವೆ. 9 ಕೋಟಿ ಮಹಿಳೆಯರಿಗೆ ಉಚಿತವಾಗಿ ಅಡುಗೆ ಅನಿಲ ಸೌಲಭ್ಯ ಕಲ್ಪಿಸಿದ್ದೇವೆ. 2.5 ಕೋಟಿ ಮನೆಗಳಿಗೆ ನೇರ ವಿದ್ಯುತ್ ಸರಬರಾಜು ಮಾಡುವ ವ್ಯವಸ್ಥೆ ಮಾಡಿದ್ದೇವೆ ಎಂದು ತಮ್ಮ ಸರ್ಕಾರದ ಸಾಧನೆಗಳನ್ನ ತಿಳಿಸಿದರು. ಇದನ್ನೂ ಓದಿ: ನಾನು ಶಿವನ ಕೊರಳಿನಲ್ಲಿರುವ ಹಾವಿನಂತೆ – ಖರ್ಗೆ ಹೇಳಿಕೆಗೆ ಮೋದಿ ಕೌಂಟರ್‌

ಭಾರತವನ್ನ ಹೊಳೆಯುವ ನಕ್ಷತ್ರ ಮಾಡ್ತೀವಿ: ರಾಜ್ಯದಲ್ಲಿ ಸ್ಥಿರ ಸರ್ಕಾರ ಬಂದ್ರೆ ಅದರ ಲಾಭ ಏನು ಅನ್ನೋದು ಜನರಿಗೆ ತಿಳಿದಿದೆ. ಕಾಂಗ್ರೆಸ್ ಸರ್ಕಾರ ಕಾಲಘಟ್ಟದಲ್ಲಿ ಏನೆಲ್ಲಾ ಭ್ರಷ್ಟಾಚಾರ ನಡೀತು ಅಂತಾ ಜನರಿಗೆ ಗೊತ್ತಿದೆ. ಕರ್ನಾಟಕದ ಎರಡು ಪಕ್ಷಗಳು ರಾಜ್ಯಕ್ಕೆ ಕಂಟಕಪ್ರಾಯವಾಗಿದೆ. 2014ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇಡೀ ಭಾರತದ ಚಿತ್ರಣವನ್ನೇ ಬದಲಾವಣೆ ಮಾಡಿದ್ದನ್ನ ನೀವು ನೋಡಿದ್ದೀರಿ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ್ರೆ, ಭಾರತವನ್ನ ಹೊಳೆಯುವ ನಕ್ಷತ್ರವಾಗಿ ನೋಡ್ತೀರಿ ಎಂದು ಹೇಳಿದರು.

ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸಾರಿಗೆ ಸಂಪರ್ಕಕ್ಕೆ ಹೆಚ್ಚು ಹೊತ್ತು ನೀಡುತ್ತಿದ್ದೇವೆ. ಬೆಂಗಳೂರು-ಚನ್ನೈ ಎಕ್ಸ್‌ಪ್ರೆಸ್‌ ವೇ ಮಾಡಲಾಗುತ್ತಿದೆ. ಈ ಹೆದ್ದಾರಿಯಲ್ಲಿ ಬರುವ ಮುಳಬಾಗಲು ದೋಸೆಯೂ ಫೇಮಸ್ ಆಗುತ್ತಿದೆ. ಇತ್ತೀಚೆಗೆ ಕಾಂಗ್ರೆಸ್‌ನವರು ಸುಳ್ಳು ಗ್ಯಾರಂಟಿ ಕಾರ್ಡ್ಗಳನ್ನು ಕೊಡುತ್ತಿದ್ದಾರೆ. 2005ರಲ್ಲಿ ಉಚಿತ ವಿದ್ಯುತ್ ಕೊಡುವುದಾಗಿ ಗ್ಯಾರಂಟಿ ಕೊಟ್ಟರು. ಆದ್ರೆ ಆಶ್ವಾಸನೆ ಈಡೇರಿಲ್ಲ. ಆದ್ರೆ ಕಾಂಗ್ರೆಸ್ ಹೇಳಿಕೆಯನ್ನ ಸಾಕಾರಗೊಳಿಸಿದ್ದು ನಾವು. ಸಾಕಷ್ಟು ಹಳ್ಳಿಗಳಿಗೆ ಮನೆ ಮನೆಗೆ ವಿದ್ಯುತ್ ಕಲ್ಪಿಸಿದ್ದು ನಾವು ಎಂದು ಹೇಳಿದರು.

TAGGED:bjpcongresscorruptionelection campaignfarmersKarnataka Election 2023Kolarnarendra modiಕರ್ನಾಟಕ ಎಲೆಕ್ಷನ್ಕಾಂಗ್ರೆಸ್ಕೋಲಾರಚುನಾವಣಾ ಪ್ರಚಾರನರೇಂದ್ರ ಮೋದಿಭ್ರಷ್ಟಾಚಾರರೈತರು
Share This Article
Facebook Whatsapp Whatsapp Telegram

Cinema News

Jaym Ravi Kenisha
ಪ್ರೇಯಸಿ ಜೊತೆ ಜಯಂ ರವಿ ಮ್ಯಾಚಿಂಗ್ ಮ್ಯಾಚಿಂಗ್!
Cinema Latest South cinema Top Stories
jasmin jaffar
ಗುರುವಾಯೂರು ದೇವಾಲಯದ ಕೊಳದಲ್ಲಿ ಕಾಲು ತೊಳೆದ ಜಾಸ್ಮಿನ್ ಜಾಫರ್ – ಭುಗಿಲೆದ್ದ ಆಕ್ರೋಶ
Cinema Latest Top Stories
sudeep 1 4
ಸುದೀಪ್ ಹುಟ್ಟುಹಬ್ಬಕ್ಕೆ `ಬಿಗ್’ ಸರ್‌ಪ್ರೈಸ್
Cinema Latest Sandalwood Top Stories
Farah Khan
ರಿಷಿಕೇಶದಲ್ಲಿ ಗಂಗಾರತಿ ಮಾಡಿದ ಫರ‍್ಹಾ ಖಾನ್
Bollywood Cinema Latest Top Stories
vijayalakshmi darshan 1
ದರ್ಶನ್ ಜೊತೆಗಿನ ಫೋಟೋ ಪೋಸ್ಟ್ ಮಾಡಿರುವ ವಿಜಯಲಕ್ಷ್ಮಿ
Cinema Latest Sandalwood Top Stories

You Might Also Like

Banu Mushtaq
Districts

ಚಾಮುಂಡೇಶ್ವರಿ ತಾಯಿ ನನ್ನನು ಕರಸಿಕೊಳ್ಳುತ್ತಿದ್ದಾರೆ: ಬಾನು ಮುಷ್ತಾಕ್‌

Public TV
By Public TV
1 hour ago
VIJAY NIRANI
Court

ಮಾಜಿ ಸಚಿವ ಮುರುಗೇಶ್‌ ನಿರಾಣಿ ಪುತ್ರನ ವಿರುದ್ಧ ತನಿಖೆಗೆ ಸುಪ್ರೀಂ ಸೂಚನೆ

Public TV
By Public TV
1 hour ago
anna bhagya free rice BPL Card 4
Districts

ಗಂಗಾವತಿ | ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ ಯತ್ನ – ಗೋಡೌನ್‌ನ ಮ್ಯಾನೇಜರ್ ಅಮಾನತು

Public TV
By Public TV
1 hour ago
Tungarathi 1
Districts

ತುಂಗಭದ್ರ ತಟದಲ್ಲಿ ವಿಜೃಂಭಣೆಯಿಂದ ಜರುಗಿದ ಆರತಿ ಮಹೋತ್ಸವ

Public TV
By Public TV
1 hour ago
tigers death case accused chamarajanagara
Chamarajanagar

ಮಲೆ ಮಹದೇಶ್ವರ ವನ್ಯಧಾಮದಲ್ಲಿ ವಿಷವಿಕ್ಕಿ 5 ಹುಲಿಗಳ ಸಾವು ಕೇಸ್:‌ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

Public TV
By Public TV
2 hours ago
veerendra puppy 2 1
Bengaluru City

ತನಿಖೆಗೆ ಅಸಹಕಾರ – ಇಡಿಗೆ ತಲೆ ನೋವಾದ ವೀರೇಂದ್ರ ಪಪ್ಪಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?