ಧಾರವಾಡ: ಪ್ರಧಾನಿ ನರೇಂದ್ರ ಮೋದಿಯವರು ನಡೆಸಿದ ಪರೀಕ್ಷಾ ಪೇ ಚರ್ಚಾ (Pariksha Pe Charcha) ಕಾರ್ಯಕ್ರಮವನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ವಿದ್ಯಾರ್ಥಿಗಳ ನಡುವೆ ಕುಳಿತು ವೀಕ್ಷಿಸಿದರು. ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮೋದಿ (Narendra Modi) ಅವರ ಚರ್ಚೆ ಬಳಿಕ ಹುಬ್ಬಳ್ಳಿಯಲ್ಲಿ ಜೋಶಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಮೋದಿಯವರ ಆಶಯದಂತೆ, ವಿದ್ಯಾರ್ಥಿಗಳು ಪರೀಕ್ಷೆಗಳ ಬಗ್ಗೆ ಭಯಪಡದೇ, ಸಕಾರಾತ್ಮಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಜೋಶಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಉತ್ತಮ ತಯಾರಿ ಹಾಗೂ ಆತ್ಮಸ್ಥೈರ್ಯದಿಂದ ಯಾವುದೇ ಪರೀಕ್ಷೆಯನ್ನು ಕೂಡ ಯಶಸ್ವಿಯಾಗಿ ಎದುರಿಸಬಹುದು ಎಂಬ ಸ್ಪೂರ್ತಿದಾಯಕ ನುಡಿಗಳನ್ನಾಡಿ ವಿದ್ಯಾರ್ಥಿಗಳಲ್ಲಿ ಸ್ಥೈರ್ಯ ತುಂಬಿದರು.
ಕಾರ್ಯಕ್ರಮದ ನಂತರ ಸವಾಯೀ ಗಂಧರ್ವ ಸಭಾಭವನದಲ್ಲಿ ನೆರೆದಿದ್ದ ವಿದ್ಯಾರ್ಥಿಗಳಿಗೆ, ಮೋದಿ ಅವರು ಬರೆದ ಎಕ್ಸಾಮ್ ವಾರಿಯರ್ಸ್ (Exam Warriors) ಪುಸ್ತಕವನ್ನು ಜೋಶಿ ವಿತರಿಸಿದರು. ಭಾರತದ ಭವಿಷ್ಯವಾದ ಈ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಅನುಭವ ತುಂಬಾ ಆನಂದ ನೀಡಿತು. ಈ ಮಕ್ಕಳ ಭವಿಷ್ಯ ಉಜ್ವಲವಾಗಿರಲಿ ಎಂದು ಆಶಿಸಿದರು. ಇದನ್ನೂ ಓದಿ: ಕಾಂಪೌಂಡ್ ಕಟ್ಟೋಕೆ ಹಣ ಕೊಡೋದು ಬಿಡಿ; ಮಕ್ಕಳ ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡಿ – ಬೊಮ್ಮಾಯಿ
ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿಗಳು ಪರೀಕ್ಷೆಗಳ ಬಗ್ಗೆ ಭಯಪಡದೆ ಸಕಾರಾತ್ಮಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು, ಉತ್ತಮ ತಯಾರಿ ಹಾಗೂ ಆತ್ಮಸ್ಥೈರ್ಯದಿಂದ ಯಾವುದೇ ಪರೀಕ್ಷೆಯನ್ನು ಕೂಡ ಯಶಸ್ವಿಯಾಗಿ ಎದುರಿಸಬಹುದು ಎಂಬ ಸ್ಪೂರ್ತಿದಾಯಕ ನುಡಿಗಳನ್ನಾಡಿದರು. (2/3) pic.twitter.com/W8EAyefvrJ
— Pralhad Joshi (@JoshiPralhad) January 27, 2023
ಸುಮಾರು ಐದು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ವೀಕ್ಷಣೆ ಮಾಡಿದರು. ಜೋಶಿಯವರು ವಿದ್ಯಾರ್ಥಿಗಳ ಜೊತೆ ಕುಳಿತು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ವೀಕ್ಷಿಸುವಾಗ ರಾಜ್ಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಸಾಥ್ ನೀಡಿದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k