Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಔರಂಗಜೇಬ ಅನೇಕರನ್ನು ಕೊಂದಿರ್ಬೋದು ಆದರೆ ನಂಬಿಕೆಯನ್ನು ಅಲುಗಾಡಿಸಲು ಸಾಧ್ಯವಾಗಿಲ್ಲ: ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಔರಂಗಜೇಬ ಅನೇಕರನ್ನು ಕೊಂದಿರ್ಬೋದು ಆದರೆ ನಂಬಿಕೆಯನ್ನು ಅಲುಗಾಡಿಸಲು ಸಾಧ್ಯವಾಗಿಲ್ಲ: ಮೋದಿ

Latest

ಔರಂಗಜೇಬ ಅನೇಕರನ್ನು ಕೊಂದಿರ್ಬೋದು ಆದರೆ ನಂಬಿಕೆಯನ್ನು ಅಲುಗಾಡಿಸಲು ಸಾಧ್ಯವಾಗಿಲ್ಲ: ಮೋದಿ

Public TV
Last updated: April 21, 2022 11:29 pm
Public TV
Share
3 Min Read
NARENDDRA MODI
SHARE

ನವದೆಹಲಿ: ಸಿಖ್ ಗುರು ತೇಗ್ ಬಹುದ್ದೂರ್ 400ನೇ ಜನ್ಮದಿನಾಚರಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ಕೆಂಪುಕೋಟೆಯಲ್ಲಿ ಸ್ಮರಣಾರ್ಥ ನಾಣ್ಯ, ಅಂಚೆ ಚೀಟಿ ಬಿಡುಗಡೆ ಮಾಡಿದರು. ನಂತರ ಗುರುಗಳ ತ್ಯಾಗದಿಂದ ಭಾರತ ಸಂಪ್ರದಾಯಗಳ ಬೀಡಾಗಿದೆ ಎಂದು ಜನರಿಗೆ ಹೇಳುತ್ತಾ, ಭಾರತವನ್ನು ಕಟ್ಟುವುದಕ್ಕೆ ಎಲ್ಲರೂ ಕೈ ಜೋಡಿಸಿ ಎಂದು ಕರೆಕೊಟ್ಟರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಗುರುಗಳ ಆರ್ಶೀವಾದದಿಂದ ಅವರ ಆದರ್ಶನವನ್ನು ದೇಶದ ಜನರು ಮುಂದುವರಿಸುತ್ತಿರುವುದು ತುಂಬಾ ಸಂತೋಷ ತರುತ್ತಿದೆ. ಈ ಶುಭ ಸಮಯದಲ್ಲಿ ನಾನು ಎಲ್ಲ 10 ಗುರುಗಳ ಪಾದಕ್ಕೆ ನಮನವನ್ನು ಸಲ್ಲಿಸುತ್ತಿದ್ದೇನೆ. ಈ ಪ್ರಕಾಶ್ ಪರ್ವ್ ಸಂದರ್ಭದಲ್ಲಿ ನಾನು ನಿಮ್ಮೆಲ್ಲರನ್ನು ಹೃದಯ ತುಂಬಿ ಅಭಿನಂದಿಸುತ್ತಿದ್ದೇನೆ ಎಂದರು. ಇದನ್ನೂ ಓದಿ:  ಧ್ವಂಸಗೊಂಡ ಅಪ್ಪನ ಅಂಗಡಿಯಲ್ಲಿ ಕಾಯಿನ್ ಸಂಗ್ರಸುತ್ತಿದ್ದ ಬಾಲಕ – ಫೋಟೋ ವೈರಲ್ 

modi a

ಮೊಘಲ್ ದೊರೆ ಔರಂಗಜೇಬ್‍ನ ನಿರಂಕುಶ ಚಿಂತೆನೆಗಳಿಗೆ ಎದೆಯೊಡ್ಡಿದ ಗುರು ತೇಜ್ ಬಹಾದ್ದೂರ್, ಭಾರತದ ಆದರ್ಶಗಳ ರಕ್ಷಣೆಗೆ ಬಂಡೆಯಂತೆ ನಿಂತರು. ಔರಂಗಜೇಬ್ ನೂರಾರು ತಲೆಗಳನ್ನು ಕತ್ತರಿಸಿದರೂ, ಗುರು ತೇಜ್ ಬಹಾದ್ದೂರ್ ಅವರ ನಂಬಿಕೆಯನ್ನು ಆತನಿಂದ ಅಲುಗಾಡಿಲು ಸಾಧ್ಯವಾಗಲಿಲ್ಲ. ಆಧುನಿಕ ಭಾರತ ಕೂಡ ಗುರುಗಳ ಆಶೀರ್ವಾದದಿಂದ ಇಂತದ್ದೇ ಛಾತಿಯನ್ನು ಹೊಂದಿದೆ ಎಂದು ಪ್ರಧಾನಿ ಮೋದಿ ಹೇಳಿದರು.

We bow to Sri Guru Tegh Bahadur Ji on his Parkash Purab. https://t.co/c1uRCOSZta

— Narendra Modi (@narendramodi) April 21, 2022

ಅನೇಕ ಹೋರಾಟಗಾರರ ಬಲಿದಾನದಿಂದ ನಾವು ಇಲ್ಲಿದ್ದೇವೆ. ಈಗಿರುವ ನಮ್ಮ ಭಾರತ ಎಲ್ಲ ನಿರ್ಧಾರಗಳನ್ನು ಸ್ವತಃ ತೆಗೆದುಕೊಳ್ಳುತ್ತೆ. ರಾಜತಂತ್ರಗಳ ಬಗ್ಗೆ ಎಲ್ಲಾ ರೀತಿಯ ಮಾಹಿತಿಗಳ ಬಗ್ಗೆ ಭಾರತವೇ ನಿರ್ಧಾರ ಮಾಡುತ್ತೆ. ಪರೋಪಕಾರವನ್ನು ಹೇಳಿಕೊಟ್ಟಿರುವುದು ನಮ್ಮ ಹಿಂದೂಸ್ತಾನ್. ಭಾರತಕ್ಕೆ ಗೌರವ ತಂದುಕೊಂಡಲು ಎಷ್ಟೋ ಜನರು ತಮ್ಮ ಜೀವವನ್ನು ಬಲಿಕೊಟ್ಟಿದ್ದಾರೆ. ಈ ಭಾರತೀಯ ಭೂಮಿ ಕೇವಲ ದೇಶವಲ್ಲ. ಇದು ಶ್ರೇಷ್ಠವಾದ ಸಂಪ್ರದಾಯವನ್ನು ಹೊಂದಿದೆ. ಇದಕ್ಕಾಗಿ ನಮ್ಮ ಹಲವು ಖುಷಿಗಳು, ಸನ್ಯಾಸಿಗಳು ಹಲವು ವರ್ಷಗಳ ತಪಸ್ಸು ಮಾಡಿದ್ದಾರೆ. ಅವರ ವಿಚಾರವನ್ನು ಎಲ್ಲಕಡೆ ತಿಳಿಸಿದ್ದಾರೆ ಎಂದರು.

ಈ ಕಾರ್ಯಕ್ರಮಕ್ಕೆ ಬಂದು ನನಗೆ ಯಾವ ರೀತಿಯ ಶಾಂತಿ ಸಿಕ್ಕಿದೆ ಎಂದು ಹೇಳುವುದಕ್ಕೆ ಸಾಧ್ಯವಾಗುತ್ತಿಲ್ಲ. ಹೊಸ ಚಿಂತನೆ, ನಿರಂತರ ಶ್ರಮ ನಮ್ಮ ಸಿಖ್ ಧರ್ಮದ ಗುರುತು. ಇಂದು ಭಾರತವು ತನ್ನ ಗುರುಗಳ ಆದರ್ಶಗಳೊಂದಿಗೆ ಮುಂದೆ ನಡೆಯುತ್ತಿರುವುದಕ್ಕೆ ಸಂತೋಷವಾಗುತ್ತಿದೆ. ಕೆಂಪು ಕೋಟೆ ವಿಶೇಷ, ಶ್ರೇಷ್ಠ ದಿನಗಳ ಆಚರಣೆಗೆ ಸಾಕ್ಷಿಯಾಗಿದೆ. ಇಂದು ಗುರು ತೇಜ್ ಬಹುದ್ದೂರ್ ಅವರ ಹುತಾತ್ಮತೆಯ ಕಾರ್ಯಕ್ರಮ ಮಾಡುತ್ತಿರುವುದು ನಮಗೆ ಹೆಮ್ಮೆ ತರುತ್ತಿದೆ ಎಂದರು.

modi

ಭಾರತ ಯಾವತ್ತೂ ಬೇರೆ ದೇಶಕ್ಕೆ ತೊಂದರೆ ಕೊಡಲು ಇಷ್ಟಪಡುವುದಿಲ್ಲ. ಬೇರೆ ದೇಶಗಳಿಗೆ ಸಹಾಯ ಮಾಡುತ್ತೇವೆ. ಭಾರತ ವಿಶ್ವದಲ್ಲಿರುವ ರೋಗಿಗಳಿಗೆ ಚಿಕಿತ್ಸೆ ಕೊಡುತ್ತಿದೆ. ನಮ್ಮ ರಾಷ್ಟ್ರ ಶಾಂತಿಯಿಂದ ಎಲ್ಲವನ್ನು ಎದುರಿಸುತ್ತೆ. ನಾವು ತಮ್ಮ ಗುರುತಿನ ಬಗ್ಗೆ ಹೆಮ್ಮೆ ಪಡಬೇಕು. ನಾವು ನಮ್ಮ ಭಾರತವನ್ನು ಮೇಲೆ ತೆಗೆದುಕೊಂಡು ಹೋಗಬೇಕು. ಅದಕ್ಕೆ ಎಲ್ಲರೂ ಕೆಲಸ ಮಾಡಬೇಕು. ಇದಕ್ಕೆ ಗುರುಗಳ ಆರ್ಶೀವಾದಿಂದ ನಮ್ಮ ದೇಶ ಮೇಲೆ ಬರುತ್ತೆ ಎಂದು ಹೇಳಿದರು. ಇದನ್ನೂ ಓದಿ: ಕರ್ಮಭೂಮಿಯಿಂದ ಪುಣ್ಯ ಭೂಮಿವರೆಗೂ ಅಮರ ಜ್ಯೋತಿ ಯಾತ್ರೆ: ಡಾ.ರಾಜ್ ಸಹೋದರಿ ನಾಗಮ್ಮರಿಂದ ಚಾಲನೆ

ನಮ್ಮ ಪ್ರತಿ ಕ್ಷಣವನ್ನು ದೇಶಕ್ಕಾಗಿ ಮೀಸಲಿಡಬೇಕು. ನಮ್ಮ ಪ್ರತಿಯೊಂದು ಯೋಚನೆಯನ್ನು ದೇಶಕ್ಕಾಗಿ ಮೀಸಲಿಡಬೇಕು. ಈ ಶುಭದಿನದಂದು ನಾನು ನಿಮ್ಮೆಲ್ಲರಲ್ಲೂ ಕೇಳಿಕೊಳ್ಳುವುದು ಒಂದೇ ನಾವು ದೇಶಕ್ಕಾಗಿ ಹೋರಾಟ ಮಾಡೋಣ. ದೇಶಕ್ಕಾಗಿ ಒಟ್ಟಿಗೆ ಸೇರಿ ಕೆಲಸ ಮಾಡೋಣ. ಎಲ್ಲರೂ ಸರಿಸಮಾನರು ಎಂದು ಕರೆ ಕೊಟ್ಟರು. ಇದೇ ವೇಳೆ ಭಾರತ ನಮ್ಮ ಗುರುಗಳು ಹಾಕಿಕೊಟ್ಟ ಆದರ್ಶ ಮಾರ್ಗದಲ್ಲಿ ಮುನ್ನಡೆಯಲಿದೆ. ನಾವು ಭಾರತವನ್ನು ವಿಶ್ವ ಭೂಪಟದಲ್ಲಿ ಅತ್ಯಂತ ಬಲಿಷ್ಠ ಹಾಗೂ ಸಮರ್ಥ ರಾಷ್ಟ್ರವನ್ನಾಗಿ ಮಾಡುತ್ತೇವೆ. ಆಧುನಿಕ ಭಾರತದ ನಾಗಾಲೋಟವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ತಿಳಿಸಿದರು.

TAGGED:AurangzebHindustannarendra modiRed Fortsikhಔರಂಗಜೇಬಕೆಂಪು ಕೋಟೆನರೇಂದ್ರ ಮೋದಿಸಿಖ್ಹಿಂದೂಸ್ತಾನ್
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
1 minute ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
13 minutes ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
53 minutes ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
1 hour ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
1 hour ago
Social Media Ban
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?