Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ ಮುದ್ರೆ ಹೊಂದಿದೆ, ಎಡಪಂಥೀಯರ ಪ್ರಾಬಲ್ಯವಿದೆ – ಮೋದಿ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ ಮುದ್ರೆ ಹೊಂದಿದೆ, ಎಡಪಂಥೀಯರ ಪ್ರಾಬಲ್ಯವಿದೆ – ಮೋದಿ ಆರೋಪ

Latest

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ ಮುದ್ರೆ ಹೊಂದಿದೆ, ಎಡಪಂಥೀಯರ ಪ್ರಾಬಲ್ಯವಿದೆ – ಮೋದಿ ಆರೋಪ

Public TV
Last updated: April 6, 2024 3:12 pm
Public TV
Share
3 Min Read
NARENDRA MODI 2
SHARE

ನವದೆಹಲಿ: ಕಾಂಗ್ರೆಸ್‌ ಬಿಡುಗಡೆ ಮಾಡಿರುವ ಪ್ರಣಾಳಿಕೆಯು ಮುಸ್ಲಿಂ ಲೀಗ್‌ನ (Muslim League) ಮುದ್ರೆಯನ್ನು ಹೊಂದಿದೆ, ಅದರಲ್ಲಿ ಎಡಪಂಥೀಯರ ಪ್ರಾಬಲ್ಯ ಕಾಣುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಆರೋಪಿಸಿದ್ದಾರೆ.

ಸಹರಾನ್‌ಪುರದಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್‌ ಪ್ರಣಾಳಿಕೆಯು (Congress Manifesto) ಸ್ವಾತಂತ್ರ್ಯದ ಸಮಯದಲ್ಲಿ ಮುಸ್ಲಿಂ ಲೀಗ್‌ನಲ್ಲಿ ಪ್ರಚಲಿತದಲ್ಲಿದ್ದ ಚಿಂತನೆಗಳನ್ನೇ ಪ್ರತಿಬಿಂಬಿಸುತ್ತದೆ. ಪ್ರಣಾಳಿಕೆಯು ಸಂಪೂರ್ಣವಾಗಿ ಮುಸ್ಲಿಂ ಲೀಗ್‌ನ ಮುದ್ರೆ ಹೊಂದಿದೆ ಮತ್ತು ಪ್ರಣಾಳಿಕೆಯ ಉಳಿದ ಭಾಗವು ಎಡಪಂಥೀಯರ ಪ್ರಾಬಲ್ಯ ಹೊಂದಿದೆ ಎಂದು ದೂರಿದ್ದಾರೆ. ಇದನ್ನೂ ಓದಿ: ದೇಶಾದ್ಯಂತ ಜಾತಿಗಣತಿ, ಯುವಕರಿಗೆ ಉದ್ಯೋಗದ ಜೊತೆ 1 ಲಕ್ಷ ವೇತನ – ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆ ಬಿಡುಗಡೆ

Congress Party manifesto 2024

ಕಾಂಗ್ರೆಸ್ ತನ್ನ ಆಡಳಿತದ ಅವಧಿಯಲ್ಲಿ ಕಮಿಷನ್ ಗಳಿಸುವುದರ ಮೇಲೆ ಕೇಂದ್ರೀಕೃತವಾಗಿತ್ತು. I.N.D.I.A ಮೈತ್ರಿಕೂಟವೂ ಅಧಿಕಾರಕ್ಕೆ ಬಂದ ನಂತರ ಕಮಿಷನ್ ಗಳಿಸುವ ಗುರಿ ಹೊಂದಿದೆ. ಆದರೆ NDA ಮತ್ತು ಮೋದಿ ಸರ್ಕಾರವು ಮಿಷನ್‌ನಲ್ಲಿದೆ. ಬಿಜೆಪಿ 370ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದನ್ನು ತಡೆಯಲು ಪ್ರತಿಪಕ್ಷಗಳು ಹೋರಾಡುತ್ತಿವೆ. ಸಮಾಜವಾದಿ ಪಕ್ಷವು ಪ್ರತಿ ಗಂಟೆಗೆ ಅಭ್ಯರ್ಥಿಗಳನ್ನು ಬದಲಾಯಿಸುತ್ತಿದೆ. ಮತ್ತೊಂದು ಕಡೆ ಕಾಂಗ್ರೆಸ್‌ನಲ್ಲಿ (Congress) ಅಭ್ಯರ್ಥಿಗಳೇ ಸಿಗುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ತನ್ನ ಭದ್ರಕೋಟೆ ಎಂದು ಪರಿಗಣಿಸಲಾದ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ನಿಲ್ಲಿಸುವ ಧೈರ್ಯ ಮಾಡುತ್ತಿಲ್ಲ. I.N.D.I.A ಒಕ್ಕೂಟವು ಅಸ್ಥಿರತೆ ಮತ್ತು ಅನಿಶ್ಚಿತತೆಗೆ ಸಮಾನಾರ್ಥಕವಾಗಿದೆ ಮತ್ತು ದೇಶದ ಜನರು ಅದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಶಕ್ತಿ ವಿರುದ್ಧ ಹೋರಾಡುವ ಬಗ್ಗೆ ವಿರೋಧ ಪಕ್ಷಗಳ ಒಕ್ಕೂಟ ಮಾತನಾಡುತ್ತಿರುವುದು ದೇಶದ ದೌರ್ಭಾಗ್ಯ. ಶಕ್ತಿಯನ್ನು ಆರಾಧಿಸುವುದು ನಮ್ಮ ನೈಸರ್ಗಿಕ ಆಧ್ಯಾತ್ಮಿಕ ಜೀವನದ ಒಂದು ಭಾಗವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇವಿಎಂನಲ್ಲೇ ಚುನಾವಣೆ, ಸ್ಲಿಪ್‌ ಮತದಾರನ ಕೈಗೆ ಸಿಗಬೇಕು : ಕಾಂಗ್ರೆಸ್‌ ಪ್ರಣಾಳಿಕೆ

ಏಪ್ರಿಲ್ 19 ರಂದು ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಉತ್ತರ ಪ್ರದೇಶದ 8 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಸಹರಾನ್‌ಪುರ್, ಕೈರಾನಾ, ಮುಜಾಫರ್‌ನಗರ, ಬಿಜ್ನೋರ್, ನಗೀನಾ, ಮೊರಾದಾಬಾದ್, ರಾಂಪುರ್ ಮತ್ತು ಪಿಲಿಭಿತ್ ನಲ್ಲಿ ಚುನಾವಣೆ ನಡೆಯಲಿದೆ. ಇದನ್ನೂ ಓದಿ: ಬೆಳಗ್ಗೆದ್ದು ಸೆಲ್‌ ಕ್ಲೀನ್‌, ಯೋಗ ನಂತ್ರ 2 ಪೀಸ್‌ ಬ್ರೆಡ್-‌ ಜೈಲಲ್ಲಿರೋ ಕೇಜ್ರಿವಾಲ್‌ ದಿನಚರಿ ಹೇಗಿದೆ?

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿರುವ ಪ್ರಮುಖ ಅಂಶಗಳು
– ದೇಶಾದ್ಯಂತ ಜಾತಿ ಗಣತಿ, ಹಿರಿಯ ನಾಗರಿಕರಿಗೆ ಸಾರ್ವಜನಿಕ ಸಾರಿಗೆ (ರೈಲು ಮತ್ತು ರಸ್ತೆ) ಯಲ್ಲಿ ರಿಯಾಯಿತಿ ದರದಲ್ಲಿ ಪ್ರಯಾಣ ಮರುಜಾರಿ
– ಜಿಲ್ಲೆಗೊಂದು ಸರ್ಕಾರಿ ಮೆಡಿಕಲ್‌ ಕಾಲೇಜು/ಆಸ್ಪತ್ರೆ
– ಆಶಾ,ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರ ಕೇಂದ್ರದ ಪಾಲು ದ್ವಿಗುಣ
– 2500ಕ್ಕಿಂತ ಜನಸಂಖ್ಯೆ ಜಾಸ್ತಿ ಇರುವ ಹಳ್ಳಿಗಳಲ್ಲಿ ಎರಡನೇ ಆಶಾ ಕಾರ್ಯಕರ್ತೆ ನೇಮಕ
– 12ನೇ ತರಗತಿಯವರೆಗೆ ಮಧ್ಯಾಹ್ನದ ಬಿಸಿಯೂಟ
– ರಾಜ್ಯಗಳ ಜೊತೆ ಚರ್ಚಿಸಿ ರಾಷ್ಟ್ರೀಯ ಶಿಕ್ಷಣ ನೀತಿ (NEP) ಬದಲಾವಣೆ
– ಪಬ್ಲಿಕ್ ಶಾಲೆಗಳಲ್ಲಿ ಸ್ಪೆಷಲ್‌ ಫೀಸ್ ಗಳು ರದ್ದು
– ಶಿಕ್ಷಕರನ್ನು ಶಿಕ್ಷಣೇತರ ಚಟುವಟಿಕೆಗಳಿಗೆ ಬಳಸಲ್ಲ
– ಕೇಂದ್ರೀಯ ವಿದ್ಯಾಲಯ, ನವೋದಯ ವಿದ್ಯಾಲಯಗಳ ಸಂಖ್ಯೆ ರಾಜ್ಯಗಳ ಜೊತೆ ಚರ್ಚಿಸಿ ಹೆಚ್ಚಳ
– ಪ್ರತಿ ತಾಲೂಕಿನಲ್ಲಿ ಸರ್ಕಾರಿ ಕಮ್ಯುನಿಟಿ ಕಾಲೇಜು (ಹಾಸ್ಪಿಟಾಲಿಟಿ, ಪ್ರವಾಸೋದ್ಯಮ, ಡಿಜಿಟಲ್ ಮಾರ್ಕೆಟಿಂಗ್ ಕೋರ್ಸ್ ಇತ್ಯಾದಿ ಕಲಿಕೆ)
– 9 ರಿಂದ 12ನೇ ತರಗತಿಯ ಮಕ್ಕಳಿಗೆ ಮೊಬೈಲ್ ಫೋನ್ (ಶಾಲೆ, ಕಾಲೇಜು ಕ್ಯಾಂಪಸ್‌ನಲ್ಲಿ ಉಚಿತ ಅನ್ ಲಿಮಿಟೆಡ್ ಇಂಟರ್‌ನೆಟ್)
– 21 ವರ್ಷದೊಳಗಿನ ಕ್ರೀಡಾ ಪ್ರತಿಭೆಗಳಿಗೆ ಪ್ರತಿ ತಿಂಗಳು 10 ಸಾವಿರ ರೂ.ಗಳ ಕ್ರೀಡಾ ಸ್ಕಾಲರ್ ಶಿಪ್
– ಮಹಾಲಕ್ಷ್ಮಿ ಯೋಜನೆಯಡಿ ಬಡ ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ ರೂ.
– ಕುಟುಂಬದ ಹಿರಿಯ ಮಹಿಳೆಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ
– ಮಹಿಳೆಯರು ಇಲ್ಲದಿದ್ದರೆ ಕುಟುಂಬದ ಅತಿ ಹಿರಿಯ ವ್ಯಕ್ತಿಯ ಖಾತೆಗೆ ಹಣ ವರ್ಗಾವಣೆ
– ವಿವಿಧ ಹಂತಗಳಲ್ಲಿ ಮಹಾಲಕ್ಷ್ಮಿ ಯೋಜನೆ ಜಾರಿ. ಬಡತನ ನಿರ್ಮೂಲನೆಗೆ ಸಹಾಯವಾಗಿದೆಯಾ ಎಂದು ಕಾಲಕಾಲಕ್ಕೆ ಯೋಜನೆಯ ಅವಲೋಕನ
– ಮಹಿಳಾ ಮೀಸಲಾತಿ 2025ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲೇ ಜಾರಿ
– 2025ರಿಂದ ಕೇಂದ್ರ ಸರ್ಕಾರದ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.50 ಮೀಸಲಾತಿ ಜಾರಿ
– ಒಂದು ದೇಶ, ಒಂದು ಚುನಾವಣೆ ತಿರಸ್ಕಾರ
– ಇವಿಎಂ ಮೂಲಕವೇ ಮತದಾನ ನಡೆಯಬೇಕು. ಆದರೆ ಬ್ಯಾಲಟ್ ಪೇಪರ್ ನಲ್ಲಿ ಪಾರದರ್ಶಕತೆ. ಮತದಾರನೇ ತನ್ನ ಕೈಯಾರೆ ಇವಿಎಂ ಮತದಾನದ ಬಳಿಕ ಯಂತ್ರವು ನೀಡುವ ವೋಟರ್ ಸ್ಲಿಪ್ ವಿವಿಪ್ಯಾಟ್ ಯೂನಿಟ್ ಗೆ ಹಾಕಲು ವ್ಯವಸ್ಥೆ. ಎಲೆಕ್ಟ್ರಾನಿಕ್ ವೋಟ್ ಮತ್ತು ವಿವಿಪ್ಯಾಟ್ ಸ್ಲಿಪ್ ಟ್ಯಾಲಿ ಆಗಲೇಬೇಕು.
– ಶಾಸಕ ಅಥವಾ ಸಂಸದ ಪಕ್ಷ ಬದಲಾಯಿಸಿದರೆ (ಗೆದ್ದ ಪಕ್ಷ ಬಿಟ್ಟು ಬೇರೆ ಪಕ್ಷಕ್ಕೆ ಹೋದರೆ) ಆಟೋಮ್ಯಾಟಿಕ್ ಆಗಿ ಶಾಸಕ ಅಥವಾ ಸಂಸದನ ಸ್ಥಾನ ಅನರ್ಹತೆ. ಇದಕ್ಕಾಗಿ 10ನೇ ಶೆಡ್ಯೂಲ್‌ಗೆ ತಿದ್ದುಪಡಿ.

TAGGED:Congress Manifestomallikarjun khargeMuslim LeaguePM ModiRahul Gandhiಕಾಂಗ್ರೆಸ್ನರೇಂದ್ರ ಮೋದಿಪ್ರಣಾಳಿಕೆಮಲ್ಲಿಕಾರ್ಜುನ ಖರ್ಗೆರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Gangavathi Inscription
Districts

ಗಂಗಾವತಿಯಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ಶಿಲಾಶಾಸನ ಪತ್ತೆ

Public TV
By Public TV
4 minutes ago
Donald Trump 2
Latest

ಆಕ್ರಮಿಸಿಕೊಳ್ತೇನೆ, ಇಲ್ಲವೇ ಸ್ವತಂತ್ರಗೊಳಿಸುತ್ತೇನೆ – ವೆನೆಜುವೆಲಾ, ಇರಾನ್‌ ಬಳಿಕ ಮತ್ತೊಂದು ದೇಶದ ಮೇಲೆ ಟ್ರಂಪ್‌ ಕಣ್ಣು

Public TV
By Public TV
5 minutes ago
chinnaswamy stadium
Bengaluru City

ಬೆಂಗಳೂರಲ್ಲಿ ಇಂದು ಐಪಿಎಲ್‌ ಉದ್ಘಾಟನೆ – ಚಿನ್ನಸ್ವಾಮಿ‌ ಕ್ರೀಡಾಂಗಣಕ್ಕೆ 2,000 ಪೊಲೀಸರ ಭದ್ರತೆ

Public TV
By Public TV
31 minutes ago
Chinnaswamy Stadium
Bengaluru City

ಇಂದು IPL ಉದ್ಘಾಟನಾ ಪಂದ್ಯ: ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್, ಎಲ್ಲಿ ಪಾರ್ಕ್ ಮಾಡ್ಬೋದು?

Public TV
By Public TV
39 minutes ago
Vairamudi Utsava
Districts

ಇಂದು ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಉತ್ಸವ

Public TV
By Public TV
55 minutes ago
SRH 01
Cricket

IPl 2026 | ರನ್‌ ಹೊಳೆ, ದಾಖಲೆಗಳ ಸುರಿಮಳೆ – ಇಲ್ಲಿದೆ ಐತಿಹಾಸಿಕ ದಾಖಲೆಗಳ ಪಟ್ಟಿ

Public TV
By Public TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?