ಕನ್ನಡದಲ್ಲಿಯೇ ಮಾತು ಆರಂಭಿಸಿದ ಪ್ರಧಾನಿ ಮೋದಿ

Public TV
1 Min Read
DWD MODI speech

-ಕನ್ನಡ ನಾಡಿನ ಗಣ್ಯರನ್ನು ನೆನೆದ ಮೋದಿ

ಹುಬ್ಬಳ್ಳಿ: ನೀವೆಲ್ಲರೂ ಎರಡ್ಮೂರು ಗಂಟೆಯೇ ಮೊದಲೇ ಬಂದು ಕುಳಿತಿದ್ದೀರಿ ಎಂದು ಗೊತ್ತಾಯ್ತು. ಮೊದಲಿಗೆ ಮೈದಾನವನ್ನು ಇಷ್ಟೆ ಅಂತಾ ನಿಗದಿ ಮಾಡಲಾಗಿತ್ತು. ಊಹಿಸಿದಗಿಂತ ಹೆಚ್ಚಿನ ಸಂಖ್ಯೆಯಲ್ಲಿ ನೀವೆಲ್ಲ ಬಂದಿರೋದು ನನ್ನ ಉತ್ಸಾಹವನ್ನು ಹೆಚ್ಚು ಮಾಡಿದೆ. ಇದು ತಿರಂಗದ ಭೂಮಿಯಾಗಿದ್ದು, ವೀರಯೋಧರಿಗೆ ಜನ್ಮ ನೀಡಿದ ಪುಣ್ಯಭೂಮಿ ಇದಾಗಿದೆ.ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ದ.ರಾ.ಬೇಂದ್ರೆ, ಗಂಗೂಬಾಯಿ ಹಾನಗಲ್ ಕರ್ನಾಟಕದಲ್ಲಿ ಮಾತ್ರವಲ್ಲದೇ ಇಡೀ ವಿಶ್ವಕ್ಕೆ ಪರಿಚಿತರು. ಇವರೆಲ್ಲರಿಗೂ ನನ್ನ ನಮನಗಳು ಎಂದು ಮಾತು ಆರಂಭಿಸಿದರು.

ಇದೇ ವೇಳೆ ಇತ್ತೀಚೆಗೆ ಶಿವೈಕ್ಯರಾದ ಸಿದ್ದಗಂಗಾ ಶ್ರೀಗಳನ್ನು ನೆನೆದು ತಮ್ಮ ನಮನ ಸಲ್ಲಿಸಿದರು. ಕೇಂದ್ರ ಸಚಿವರಾಗಿದ್ದ ಕರ್ನಾಟಕದ ಮುತ್ಸದಿ ನಾಯಕ ದಿ. ಅನಂತಕುಮಾರ್ ಅವರನ್ನು ನೆನಪು ಮಾಡಿಕೊಂಡರು. ಇತ್ತೀಚೆಗೆ ಉದ್ಘಾಟಿಸಿರುವ 5 ಸಾವಿರ ಕೋಟಿಯ ಯೋಜನೆಗಳು ಎಲ್ಲವು ನಿಮಗಾಗಿ ಮತ್ತು ದೇಶದ ಅಭಿವೃದ್ಧಿಗಾಗಿ ಮಾಡಲಾಗುತ್ತಿದೆ.

ನಮ್ಮ ಸರ್ಕಾರದ 55 ತಿಂಗಳಲ್ಲಿ 15 ಲಕ್ಷಗಳಷ್ಟು ಮನೆಗಳನ್ನು ನಿರ್ಮಾಣ ಮಾಡಿದ್ದೇವೆ. ಕೆಳ ವರ್ಗದ ಜನತೆಗೆ ಮಾತ್ರ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿತ್ತು. ನಮ್ಮ ಸರ್ಕಾರ ಮಧ್ಯಮ ವರ್ಗದ ಜನತೆಗಾಗಿ ಮನೆಗಳನ್ನು ನೀಡುತ್ತಿದ್ದೇವೆ. ಮಧ್ಯಮ ವರ್ಗದ ಜನರಿಗಾಗಿ ವಿಶೇಷ ತೆರಿಗೆ ರಿಯಾಯ್ತಿಗಳನ್ನು ಬಜೆಟ್ ನಲ್ಲಿ ನೀಡಲಾಗಿದೆ. ಈ ಹಿಂದೆ 40 ವರ್ಷದಲ್ಲಿ ಕೇವಲ 8 ಲಕ್ಷ ಮನೆಗಳನ್ನು ನಿರ್ಮಾಣ ಮಾಡಿದ್ದೇವೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂಬ ಧ್ಯೇಯದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದ್ದೇವೆ ಎಂದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *