ಧಾರವಾಡ: ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್ ರೈಲು (Vande Bharat Express Train) ಬರುತ್ತಿದೆ. ಮಂಗಳವಾರದಿಂದ ಧಾರವಾಡ-ಬೆಂಗಳೂರು (Dharwad – Bengaluru) ನಡುವೆ ವಂದೇ ಭಾರತ್ ರೈಲು ಸಂಚಾರ ಶುರು ಮಾಡಲಿದೆ. ಬೆಳಗ್ಗೆ 9 ಗಂಟೆಗೆ ವರ್ಚುವಲ್ ಆಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.
ವಂದೇ ಭಾರತ್ ರೈಲಿಗೆ ಮಂಗಳವಾರ ಬೆಳಗ್ಗೆ 9 ಗಂಟೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅಧಿಕೃತ ಚಾಲನೆ ನೀಡಲಿದ್ದಾರೆ. ಧಾರವಾಡ ರೈಲ್ವೆ ನಿಲ್ದಾಣದಿಂದ ಜೋಶಿ ಚಾಲನೆ ನೀಡಿದರೆ ವರ್ಚುವಲ್ ಮೂಲಕ ಪ್ರಧಾನಿ ಮೋದಿ ಹಾಗೂ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಚಾಲನೆ ನೀಡಲಿದ್ದಾರೆ.
ಇಂದು ದೇಶಾದ್ಯಂತ ಒಟ್ಟು 5 ವಂದೇ ಭಾರತ್ ರೈಲುಗಳು ಹಳಿಯೇರಲಿವೆ. ಮಧ್ಯಪ್ರದೇಶದಲ್ಲಿ 2 ರೈಲುಗಳು, ಕರ್ನಾಟಕ, ಬಿಹಾರ, ಹಾಗೂ ಗೋವಾದಲ್ಲಿ ಒಂದೊಂದು ರೈಲಿಗೆ ಚಾಲನೆ ಸಿಗಲಿದೆ. ಈ ಮೂಲಕ ರೈಲುಗಳ ಸಂಖ್ಯೆ 24ಕ್ಕೆ ಏರಲಿದೆ. ಕರ್ನಾಟಕಕ್ಕೆ ಇದು 2ನೇ ರೈಲಾಗಲಿದೆ. ಬೆಂಗಳೂರು ಮತ್ತು ಹುಬ್ಬಳ್ಳಿ-ಧಾರವಾಡ ನಡುವಿನ ಸುಮಾರು 490 ಕಿ.ಮೀ ದೂರವನ್ನು 6 ಗಂಟೆ 13 ನಿಮಿಷಗಳಲ್ಲಿ ಈ ರೈಲು ಕ್ರಮಿಸಲಿದೆ. ಇದನ್ನೂ ಓದಿ: ಬಿಟ್ ಕಾಯಿನ್ ಹಗರಣ ಮರು ತನಿಖೆಗೆ ಇನ್ನೆರಡು ದಿನದಲ್ಲಿ ಆದೇಶ
ಪ್ರತಿ ದಿನ ಬೆಂಗಳೂರು-ಧಾರವಾಡ ನಡುವೆ ಓಡಾಡಲಿರುವ ವಂದೇ ಭಾರತ್ ರೈಲು ಬೆಳಗ್ಗೆ 5:45ಕ್ಕೆ ಬೆಂಗಳೂರು ಬಿಡುತ್ತದೆ. ಧಾರವಾಡಕ್ಕೆ 12:10ಕ್ಕೆ ಆಗಮಿಸಿ ಬಳಿಕ ಧಾರವಾಡದಿಂದ 1:15ಕ್ಕೆ ರವಾನೆಯಾಗುತ್ತದೆ. ಇಂದು ಎಲ್ಲಾ ಜಿಲ್ಲೆಗಳ ರೈಲ್ವೆ ನಿಲ್ದಾಣದಲ್ಲಿ ರೈಲು ನಿಂತು ಸಂಚರಿಸಲಿದೆ. ಬುಧವಾರದಿಂದ ಕೇವಲ 4 ನಿಲ್ದಾಣಗಳಲ್ಲಿ ಮಾತ್ರವೇ ನಿಲ್ಲಲಿದೆ. ಇದನ್ನೂ ಓದಿ: ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಗೆ ಜಯದೇವ ಹೃದ್ರೋಗ ಆಸ್ಪತ್ರೆ ಆಯ್ಕೆ
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]