Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಸರ್ಕಾರವಲ್ಲ, ‘ಸೀದಾ ರೂಪಾಯಿ’ ಸರ್ಕಾರ – ಸಿದ್ದುಗೆ ಮೋದಿ ವ್ಯಂಗ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಸಿದ್ದರಾಮಯ್ಯ ಸರ್ಕಾರವಲ್ಲ, ‘ಸೀದಾ ರೂಪಾಯಿ’ ಸರ್ಕಾರ – ಸಿದ್ದುಗೆ ಮೋದಿ ವ್ಯಂಗ್ಯ

Davanagere

ಸಿದ್ದರಾಮಯ್ಯ ಸರ್ಕಾರವಲ್ಲ, ‘ಸೀದಾ ರೂಪಾಯಿ’ ಸರ್ಕಾರ – ಸಿದ್ದುಗೆ ಮೋದಿ ವ್ಯಂಗ್ಯ

Public TV
Last updated: February 28, 2018 10:34 pm
Public TV
Share
3 Min Read
modi siddaramiah 1
SHARE

ದಾವಣಗೆರೆ: ಕರ್ನಾಟಕದಲ್ಲಿರುವುದು ‘ಸಿದ್ದರಾಮಯ್ಯ’ ಸರ್ಕಾರವಲ್ಲ. ಇದು ‘ಸೀದಾ ರೂಪಾಯಿ’ ಸರ್ಕಾರ. ಈ ಸೀದಾ ರೂಪಾಯಿ ಸರ್ಕಾರ ನಿಮಗೆ ಬೇಕಾ..? ಇಲ್ಲಿ ಯಾವುದೇ ಕೆಲಸ ಮಾಡಬೇಕಾದರೂ ‘ರೂಪಾಯಿ’ ಕೊಡದೆ ಕೆಲಸ ಆಗುವುದಿಲ್ಲ. ಕರ್ನಾಟಕಕ್ಕೆ ಇಂತಹ ಸರ್ಕಾರ ಶೋಭೆ ತರುವುದಿಲ್ಲ. ಕರ್ನಾಟಕಕ್ಕೆ ಜವಾಬ್ದಾರಿಯುತ, ಸಂವೇದನಾಶೀಲ, ಪ್ರಾಮಾಣಿಕ ಸರ್ಕಾರದ ಅವಶ್ಯಕತೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

modi in karntaka 1

ದಾವಣಗೆರೆಯಲ್ಲಿ ರೈತ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕರ್ನಾಟಕಕ್ಕೆ ಜನರ ದನಿ ಕೇಳುವ ಸರ್ಕಾರ ಬೇಕು. ಕೇಂದ್ರ ಸರ್ಕಾರ ರಾಜ್ಯಕ್ಕೆ ಸಾಕಷ್ಟು ಹಣ ನೀಡಿದೆ. ಆದರೆ ರಾಜ್ಯ ಸರ್ಕಾರ ಈ ಹಣ ಬಳಕೆ ಮಾಡಿಲ್ಲ ಎಂದು ಉದಾಹರಣೆ ಸಹಿತ ವಿವರಿಸಿದರು. ಈ ಹಿಂದಿನ ಸರ್ಕಾರಗಳಿದ್ದ ವೇಳೆ ಕೇಂದ್ರ ಸರ್ಕಾರ 73 ಸಾವಿರ ಕೋಟಿ ರೂಪಾಯಿ ನೀಡುತ್ತಿತ್ತು. ಆದರೆ ನಮ್ಮ ಸರ್ಕಾರ ಬಂದ ಮೇಲೆ ರಾಜ್ಯಕ್ಕೆ 2 ಲಕ್ಷ ಕೋಟಿ ಸಿಗುತ್ತಿದೆ. ಇಷ್ಟೆಲ್ಲಾ ಆದರೂ ಇಲ್ಲಿನ ಸರ್ಕಾರ ಹಣವನ್ನು ಖರ್ಚು ಮಾಡುವುದೇ ಇಲ್ಲ ಎಂದು ನೇರ ಆರೋಪ ಮಾಡಿದರು.

21,400 ಕೋಟಿ ರೂ.ಗಳ ಯೋಜನೆ ರಾಜ್ಯಕ್ಕೆ ನೀಡಿದ್ದೇವೆ. ದಾವಣಗೆರೆ ಹಾವೇರಿ – 830 ಕೋಟಿ ರೂ. ರಸ್ತೆ, ದಾವಣಗೆರೆ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಗೆ 1,000 ಕೋಟಿ ರೂ. ನೀಡಿದ್ದೇವೆ. ಕರ್ನಾಟಕದ ಜನರು ಒಳ್ಳೆಯವರು. ನಾವು ನಿರಂತರವಾಗಿ ಇಲ್ಲಿನ ಸರ್ಕಾರಕ್ಕೆ ಸಹಾಯ ಮಾಡುತ್ತಾ ಬಂದಿದ್ದೇವೆ. 10 ಪರ್ಸೆಂಟ್ ಸಿಗದಿದ್ದರೆ ರಾಜ್ಯದಲ್ಲಿ ಯಾವುದೇ ಕೆಲಸ ಆಗುತ್ತಿಲ್ಲ. ಕೃಷಿಗೆ ನೀಡಿದ 50-55 ಕೋಟಿ ರೂ. ಖರ್ಚಾಗದೇ ಉಳಿದಿದೆ. ಈ ಸರ್ಕಾರ ರೈತ ಸ್ನೇಹಿಯಾಗಿದ್ದರೆ ಈ ಹಣ ಖರ್ಚಾಗುತ್ತಿತ್ತು. ರಾಷ್ಟ್ರೀಯ ಸ್ವಾಸ್ಥ್ಯ ಮಿಷನ್ ಭಾರತ ಸರ್ಕಾರ ಹಣ ನೀಡಿದರೂ 500 ಕೋಟಿ ಖರ್ಚಾಗದೇ ಉಳಿದಿದೆ. ಜನರ ಆರೋಗ್ಯಕ್ಕೆ ಹಣ ಖರ್ಚು ಮಾಡಲು ಸಾಧ್ಯವಿಲ್ಲದ ಸರ್ಕಾರ ಇಲ್ಲಿದೆ. ಶಿಕ್ಷಣ – 400 ಕೋಟಿ ರೂ., ತಾಂತ್ರಿಕ ಶಿಕ್ಷಣಕ್ಕೆ ನೀಡಿದ 80-90 ಕೋಟಿ ರೂ. ಖರ್ಚಾಗಿಲ್ಲ. ನೀರಾವರಿಯಲ್ಲಿ 100 ಕೋಟಿ ರೂ. ಹಣ ಖರ್ಚಾಗಿಲ್ಲ. ಸ್ಮಾರ್ಟ್ ಸಿಟಿಗೆ ನೀಡಿದ 300 ಕೋಟಿ ಖರ್ಚಾಗಿಲ್ಲ ಸ್ವಚ್ಛ ಭಾರತ ಮಿಷನ್‍ಗೆ ನೀಡಿದ 75 ಕೋಟಿ ಹಾಗೆಯೇ ಉಳಿದಿದೆ ಎಂದರು.

modi in karntaka 4

ಸಚಿವರ ಮನೆಗಳ ಮೇಲೆ ಐಟಿ ದಾಳಿಯಾದ ಉದಾಹರಣೆ ದೇಶದಲ್ಲೇ ಇಲ್ಲ. ಇಲ್ಲಿರುವುದು ಜನತಾ ಸರ್ಕಾರವಲ್ಲ. ಇಲ್ಲಿನ ಹಾಲಿ ಸಚಿವರ ಮನೆಗೆ ದಾಳಿಯಾಗಿದೆ. ಈ ವೇಳೆ ಇಲ್ಲಿ ಡೈರಿ ಸಿಗುತ್ತದೆ, ನೋಟ್‍ಗಳ ಬಂಡಲ್ ಸಿಗುತ್ತದೆ. ಈ ಹಣ ಎಲ್ಲಾ ಎಲ್ಲಿಂದ ಬಂತು. ಈ ಹಣ ಸೀದಾ ರೂಪಾಯಿಯಲ್ಲದೆ ಮತ್ತಿನ್ನೇನು. ಈ ಸರ್ಕಾರವೂ ಒಂದು ನಿಮಿಷವೂ ಇರಲು ಬಿಡಬೇಡಿ. ಕರ್ನಾಟಕದಲ್ಲಿ ನಮ್ಮ ಸರ್ಕಾರ ತನ್ನಿ. ಮುಂದಿನ 5 ವರ್ಷದಲ್ಲಿ ನಾವು ಕರ್ನಾಟಕ ಅಭಿವೃದ್ಧಿ ಮಾಡುತ್ತೇವೆ. ನಾವು ಸಂಕಲ್ಪದ ಅಭಿಯಾನ ಮಾಡುತ್ತಿದ್ದೇವೆ. ಕರ್ನಾಟಕದ ಜನರ ಕನಸನ್ನು ನನಸಾಗಿಸುತ್ತೇವೆ. ಈ ಎಲ್ಲಾ ಕನಸುಗಳನ್ನು ನನಸಾಗಿಸಲು ಬಿಎಸ್‍ವೈ ನೇತೃತ್ವದಲ್ಲಿ ಮುಂದೆ ಸಾಗೋಣ. ಈ ಬಾರಿ ಬಿಜೆಪಿ ಸರ್ಕಾರ, ಬನ್ನಿ ಬಿಜೆಪಿ ಗೆಲ್ಲಿಸಿ ಎಂದು ಜನರ ಬಾಯಲ್ಲೇ ಘೋಷಣೆ ಮೊಳಗಿಸಿದರು.

ರಾಜ್ಯದಲ್ಲಿರುವುದು 'ಸಿದ್ದರಾಮಯ್ಯ' ಸರ್ಕಾರವಲ್ಲ, 'ಸೀದಾ ರುಪಯ್ಯಾ' ಸರ್ಕಾರ. ಇಲ್ಲಿ ಯಾವುದೇ ಕೆಲಸಕ್ಕಾದರೂ 'ರೂಪಾಯಿ' ಕೊಡದೆ ಕೆಲಸ ಆಗುವುದಿಲ್ಲ. ಕರ್ನಾಟಕಕ್ಕೆ ಇಂತಹ ಸರ್ಕಾರ ಶೋಭೆ ತರುವುದಿಲ್ಲ. ಜವಾಬ್ದಾರಿಯುತ, ಪ್ರಾಮಾಣಿಕ ಸರ್ಕಾರದ ಅವಶ್ಯಕತೆ ಕರ್ನಾಟಕಕ್ಕೆ ಇದೆ: ಶ್ರೀ @narendramodi #FarmersWithModi#RaitaBandhuBSY

— BJP Karnataka (@BJP4Karnataka) February 27, 2018

ಭಾಷಣ ಆರಂಭ ಹಾಗೂ ಅಂತ್ಯ ಕನ್ನಡ ಭಾಷೆಯಲ್ಲೇ ನಡೆಯಿತು. ಸಾಗರೋಪಾದಿಯಲ್ಲಿ ಸೇರಿರೋ ಕರ್ನಾಟಕದ ಅನ್ನದಾತ ಮಹಾಜನರೇ ನಿಮಗೆಲ್ಲರಿಗೂ ನನ್ನ ನಮಸ್ಕಾರಗಳು. ಸಂತ ಬಸವೇಶ್ವರ, ಸಂತ ಕನಕದಾಸ, ಪೂಜ್ಯ ಮಾದಾರ ಚನ್ನಯ್ಯ ಸ್ವಾಮೀಜಿ, ವೀರ ಮಹಿಳೆ ಒನಕೆ ಓಬವ್ವ, ವೀರ ಮದಕರಿ ನಾಯಕ, ರೈತ ನಾಯಕ ಶಾಂತವೇರಿ ಗೋಪಾಲ ಗೌಡ, ಮುಂತಾದ ಮಹನೀಯರನ್ನು ಪ್ರಧಾನಿ ನರೇಂದ್ರ ಮೋದಿ ನೆನೆಯುತ್ತಿದ್ದಂತೆ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತ್ತು.

ಕೇಂದ್ರ ನೀಡಿದ ಹಣವನ್ನು ಕರ್ನಾಟಕ ಸರ್ಕಾರ ಖರ್ಚು ಮಾಡೋದಿಲ್ಲ. ಕೇಂದ್ರದ ಯೋಜನೆಗಳನ್ನು ಅಳುವಡಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ : ಶ್ರೀ @narendramodi #FarmersWithModi#RaitaBandhuBSY

— BJP Karnataka (@BJP4Karnataka) February 27, 2018

2022 ರ ಒಳಗೆ ರೈತರ ಆದಾಯ ದುಪ್ಪಟ್ಟು ಮಾಡುವುದು ನಮ್ಮ ಗುರಿಯಾಗಿದೆ. ಈ ಕಾರಣಕ್ಕೆ ಕೃಷಿಯಲ್ಲಿ ವೈಜ್ಞಾನಿಕ ತಂತ್ರಜ್ಞಾನವನ್ನು ಬಳಿಸಲು ಉತ್ತೇಜನ ನೀಡುತ್ತಿದ್ದೇವೆ : ಶ್ರೀ @narendramodi #FarmersWithModi#RaitaBandhuBSY

— BJP Karnataka (@BJP4Karnataka) February 27, 2018

modi in karntaka 2

modi in karntaka 3

 

TAGGED:davanagerekarnatakaprime minister narendra modisiddaramaiahಕರ್ನಾಟಕದಾವಣಗೆರೆಪ್ರಧಾನಿ ನರೇಂದ್ರ ಮೋದಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
55 minutes ago
Praful Hinge 1 1
Cricket

1 ಪಂದ್ಯ, 3 ವಿಕೆಟ್‌, 3 ದಾಖಲೆ – ʻರಾಜʼರನ್ನು ಉರುಳಿಸಿ ಇತಿಹಾಸ ಬರೆದ ಪ್ರಫುಲ್‌ ಹಿಂಗೆ ಯಾರು?

Public TV
By Public TV
1 hour ago
MLAs Meet Mallikarjun Kharge in Delhi
Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
By Public TV
2 hours ago
Strait of Hormuz 1
Latest

1 ದಿನಕ್ಕೆ 4 ಸಾವಿರ ಕೋಟಿ ರೂ. – ನೌಕಾ ದಿಗ್ಬಂಧನದಿಂದ ಇರಾನ್‌ ಆರ್ಥಿಕತೆಗೆ ಭಾರೀ ನಷ್ಟ!

Public TV
By Public TV
3 hours ago
Rohini Sindhuri Supreme Court
Court

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Public TV
By Public TV
3 hours ago
Irans Ambassador to India Mohammad Fathali
Latest

ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?