Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಐಶ್ವರ್ಯಾ ಖಾತೆಯಿಂದ 108 ಕೋಟಿ ವರ್ಗಾವಣೆ – ಕೋರ್ಟಿಗೆ ಇಡಿ ಮಾಹಿತಿ

Public TV
Last updated: September 17, 2019 8:28 pm
Public TV
Share
4 Min Read
dk shivakumar aishwarya 1
SHARE

ನವದೆಹಲಿ: ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಖಾತೆಯಿಂದ 108 ಕೋಟಿ ರೂ. ಹಣ ವರ್ಗಾವಣೆಯಾಗಿದೆ ಎನ್ನುವ ಸ್ಫೋಟಕ ವಿಚಾರ ಡಿಕೆಶಿ ಜಾಮೀನು ಅರ್ಜಿಯ ವೇಳೆ ತಿಳಿದು ಬಂದಿದೆ.

ಇಂದು ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ರಾಮ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿವಕುಮಾರ್ ಅವರನ್ನು ಸಂಜೆ 4 ಗಂಟೆಗೆ ಇಡಿ ಅಧಿಕಾರಿಗಳು ರೋಸ್ ಅವೆನ್ಯೂ ನ್ಯಾಯಾಲಯ ಸಮುಚ್ಚಯದ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.

dkshivakumar

ಡಿಕೆ ಶಿವಕುಮಾರ್ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ಮಂಜೂರು ಮಾಡಬೇಕೆಂದು ಅಭಿಷೇಕ್ ಮನು ಸಿಂಘ್ವಿ, ಮುಕುಲ್ ರೋಹ್ಟಗಿ ವಾದ ಮಂಡಿಸಿದ್ದರೆ ಜಾರಿ ನಿರ್ದೇಶನಾಲಯದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ನಟರಾಜ್ ವಾದಿಸಿದರು. ಎರಡು ಕಡೆಯ ವಾದ ಆಲಿಸಿದ ನ್ಯಾ. ಅಜಯ್ ಕುಮಾರ್ ಕುಹಾರ್ ಅ.1ರವರೆಗೆ ನ್ಯಾಯಾಂಗ ಬಂಧನ ವಿಧಿಸಿದರು. ತಮ್ಮ ಆದೇಶದಲ್ಲಿ ಕೂಡಲೇ ಡಿಕೆಶಿಯನ್ನು ಆಸ್ಪತ್ರೆಗೆ ದಾಖಲಿಸಬೇಕು. ಒಂದು ವೇಳೆ ಆರೋಗ್ಯ ಸರಿ ಇದ್ದು ಡಿಸ್ಚಾರ್ಜ್ ಮಾಡಲು ವೈದ್ಯರು ಅನುಮತಿ ನೀಡಿದರೆ ತಿಹಾರ್ ಜೈಲಿಗೆ ಕಳುಹಿಸಬೇಕು ಎಂದು ಸೂಚಿಸಿ ಜಾಮೀನು ಅರ್ಜಿಯ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದರು. ಇದನ್ನು ಓದಿ: ಡಿಕೆಶಿ ಆಪ್ತೆ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​ಗೆ ಇಡಿಯಿಂದ ಸಮನ್ಸ್

DKSHI Daughter Aishwarya Shivakumar 1

ಇಡಿ ವಾದ ಏನಿತ್ತು?
ಐಶ್ವರ್ಯ ಖಾತೆಯಿಂದ 108 ಕೋಟಿ ರೂ. ವರ್ಗಾವಣೆ ಆಗಿದೆ. ಪುತ್ರಿಗೆ 24-25 ವರ್ಷವಾಗಿದ್ದರಿಂದ ಇದು ನಂಬಲೂ ಸಾಧ್ಯವಿಲ್ಲ. ಆದರೂ ಈ ಸತ್ಯವನ್ನು ನಂಬಲೇಬೇಕು. ಚಿಕ್ಕ ವಯಸ್ಸಿನಲ್ಲಿ ಈ ಮಟ್ಟದ ಆರ್ಥಿಕ ವ್ಯವಹಾರ ಹೇಗೆ ಸಾಧ್ಯ? ಇದು ಕೇವಲ ಬರೀ 41 ಲಕ್ಷ ರೂ.ಗೆ ಸಂಬಂಧಿಸಿದಲ್ಲ ಸಾಕಷ್ಟು ಆಳವಾಗಿ ತನಿಖೆ ಮಾಡಬೇಕು. ಬೇರೆ ಬೇರೆ ಖಾತೆಯಿಂದ ಸಾಕಷ್ಟು ದೊಡ್ಡ ಪ್ರಮಾಣದ ಹಣ ವರ್ಗಾವಣೆ ಆಗಿದೆ. 800 ಕೋಟಿ ಅಕ್ರಮ ಹಣ ವರ್ಗಾವಣೆಯಾಗಿದೆ. ಇದು ಅಕ್ರಮ ಹಣ ವರ್ಗಾವಣೆಯ ಕರಳತೆಯನ್ನು ತೋರಿಸುತ್ತದೆ. ಹೀಗಾಗಿ ಜಾಮೀನು ಮಂಜೂರು ಮಾಡಬಾರದು ಎಂದು ನಟರಾಜ್ ವಾದಿಸಿದರು.

143 ಕೋಟಿ ರೂ. ದಾಖಲೆ ಇಲ್ಲದ ನಗದು ಹಣ ಪತ್ತೆಯಾಗಿದೆ. ಇದು ಕಾನೂನು ಬಾಹಿರ ಹಣವಾಗಿದ್ದು ಅಕ್ರಮವಾಗಿ ವರ್ಗಾವಣೆಯಾಗಿದೆ. ಈ ಹಣ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾಗಿದೆ. ಬ್ಯಾಂಕ್ ವಿವರಗಳನ್ನು ಸಂಗ್ರಹಿಸಿದಾಗ 317 ಬ್ಯಾಂಕ್ ಖಾತೆಗಳಲ್ಲಿ ಅವವ್ಯಹಾರ ನಡೆದಿರುವುದು ತಿಳಿಯುತ್ತದೆ ಎಂದಾಗ ಈ ದಾಖಲೆಗಳನ್ನು ನಮಗೆ ನೀಡಿಲ್ಲ ಎಂದು ಸಿಂಘ್ವಿ ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ನಟರಾಜ್ ಅವರು, ಈಗ ಎಲ್ಲ ದಾಖಲೆಗಳು, ವಿವರಗಳನ್ನು ಬಹಿರಂಗಪಡಿಸಲು ಇದು ಟ್ರಯಲ್ ಕೋರ್ಟ್ ಅಲ್ಲ ಎಂದು ಉತ್ತರಿಸಿದರು. ಇದನ್ನು ಓದಿ: ಡಿಕೆಶಿ 317 ಖಾತೆ, 800 ಕೋಟಿ ಆಸ್ತಿ ಪತ್ತೆ

DKSHI Daughter Aishwarya Shivakumar 2 copy

ಈ ಪ್ರಕರಣಕ್ಕೆ ಸಾಕಷ್ಟು ಮಹತ್ವ ಇದ್ದು, ಗಿಫ್ಟ್ ಡಿಡ್ ಮೂಲಕ ಪಡೆದು ಮತ್ತೊಬ್ಬರಿಗೆ ವರ್ಗಾವಣೆಯಾಗಿದೆ. ಒಂದು ಕಡೆಯಿಂದ ಪಡೆದು ಮತ್ತೊಂದು ಕಡೆ ಖಾತೆಗಳ ಮೂಲಕ ಹಣ ವರ್ಗಾವಣೆಯಾಗಿದೆ. ಸೆ.13 ರಂದು ನಾವು 4 ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದೇವು. ನಮ್ಮ ಕಸ್ಟಡಿಗೆ ನೀಡಿದ್ದರೂ ಶಿವಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದರಿಂದ ವಿಚಾರಣೆ ನಡೆಸಿಲ್ಲ. ಹೀಗಾಗಿ ಜಾಮೀನು ಮಂಜೂರು ಮಾಡಬೇಡಿ ಎಂದು ನಟರಾಜ್ ಮನವಿ ಮಾಡಿಕೊಂಡರು.

ಡಿಕೆಶಿ ಪರ ವಕೀಲರ ವಾದ ಹೀಗಿತ್ತು:
15 ಕ್ಕಿಂತ ಹೆಚ್ಚು ದಿನ ಪೋಲಿಸ್ ಕಸ್ಟಡಿಯಲ್ಲಿ ಕೊಡಲು ಸಾಧ್ಯವಿಲ್ಲ. ಅವರ ಆರೋಗ್ಯ ಅಪಾಯದಲ್ಲಿದೆ. ವಿಚಾರಣೆ ಸಾಧ್ಯವಾಗಿಲ್ಲ ಎಂದು ನ್ಯಾಯಾಂಗ ಬಂಧನ ಕೇಳುವುದು ಸರಿಯಲ್ಲ. ಇಡಿ ಕಸ್ಟಡಿಯಲ್ಲಿ ವಿಚಾರಣೆ ನಡೆಸದವರು ನ್ಯಾಯಾಂಗ ಬಂಧನದಲ್ಲಿ ವಿಚಾರಣೆ ನಡೆಸುತ್ತಾರಾ? ಆರೋಗ್ಯ ಸಮಸ್ಯೆ ಆಧಾರದ ಮೇಲೆ ಜಾಮೀನು ನೀಡಬೇಕು. 41 ಲಕ್ಷ ರೂ. ಹಣವನ್ನು ಕಕ್ಷಿದಾರರಿಂದ ವಶ ಪಡಿಸಿಕೊಂಡಿದ್ದು ಇದಕ್ಕೆ ಶಿವಕುಮಾರ್ ಉತ್ತರ ನೀಡಿದ್ದಾರೆ.

DKSHI Daughter Aishwarya Shivakumar 4 copy

ಬೇರೆಯವರ ಬಳಿ ಸಿಕ್ಕ ಹಣಕ್ಕೂ ಡಿಕೆ ಶಿವಕುಮಾರ್ ಅವರನ್ನು ಸೇರಿಸಲಾಗುತ್ತಿದೆ. 8.59 ಕೋಟಿ ಹಣ ಶಿವಕುಮಾರ್ ಅವರದಲ್ಲ. 41 ಲಕ್ಷ ಹೊರತು ಯಾವ ಹಣವೂ ಡಿಕೆ ಶಿವಕುಮಾರ್ ಅವರದ್ದಲ್ಲ. ಇಡಿ ಪೂರ್ವಗ್ರಹ ಪೀಡಿತವಾಗಿ ತನಿಖೆ ನಡೆಸುತ್ತಿದೆ. ನಾಲ್ಕು ಕೋಟಿ ಹೆಚ್ಚುವರಿ ಹಣ ಬಗ್ಗೆ ಹಿಂದೆ ಹೇಳಿರಲಿಲ್ಲ. 50 ಸಾಕ್ಷಿಗಳು ವಿಚಾರಣೆ ನಡೆಸಿದೆ ಎಂದು ಹೇಳಿದೆ. ಆದರೆ ಅವರ ಹೆಸರುಗಳನ್ನು ಬಹಿರಂಗ ಮಾಡುತ್ತಿಲ್ಲ.

ಶಿವಕುಮಾರ್ 317 ಖಾತೆಗಳು ಹೊಂದಿದ್ದಾರೆ ಎಂದು ಇಡಿ ಆರೋಪ ಮಾಡಿದೆ. ಆದರೆ ಕಳೆದ 10 ವರ್ಷದಿಂದ 20 ಖಾತೆಗಳ ಮೂಲಕ 64 ಲಕ್ಷ ರೂ. ಮಾತ್ರ ವ್ಯವಹಾರ ನಡೆದಿದೆ. 3 ಖಾತೆ ಮೂಲಕ 200 ಕೋಟಿ ವ್ಯವಹಾರ ಆರೋಪ ಆಧಾರ ರಹಿತ. ಮಗಳ ಖಾತೆಯಲ್ಲಿ 65 ಸಾವಿರ ಮಾತ್ರ ಇತ್ತು. 10 ವರ್ಷದಲ್ಲಿ 70 ಲಕ್ಷ ಹಣ ಡಿಕೆ ಸುರೇಶ್ ಖಾತೆಯಲ್ಲಿದೆ. ತಂದೆಯಿಂದ ಆಸ್ತಿ ವರ್ಗಾವಣೆಯಾಗಿದೆ. ಹಿಂದೆ ಇದ್ದ ಆಸ್ತಿಯ ಬೆಲೆ ಈಗ ಹೆಚ್ಚಾಗಿದೆ. ಇದನ್ನು ಅಕ್ರಮ ಆಸ್ತಿ ಎಂದು ಕರೆಯುವುದು ಎಷ್ಟು ಸರಿ? ಆಸ್ತಿ ಬೆಲೆ ಏರಿಕೆ ಯಿಂದ ಸಂಪತ್ತು ಹೆಚ್ಚಾಗಿದೆ.

ಎರಡು ವರ್ಷದ ಹಿಂದೆ ನಡೆದ ದಾಳಿ ವೇಳೆ 41 ಲಕ್ಷ ರೂ.ಸಿಕ್ಕಿದ್ದು ಅದಕ್ಕೆ ದಾಖಲೆ ನೀಡಲಾಗಿದೆ. ಈಗ ಜೈಲಿನಲ್ಲಿ ಯಾಕೆ ಕೂರಬೇಕು? ಅನಾರೋಗ್ಯ ಸರಿ ಇಲ್ಲದ ಪರಿಣಾಮ ಜಾಮೀನು ನೀಡಲು ಇದು ಅರ್ಹವಾದ ಪ್ರಕರಣವಾಗಿದೆ. ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಬಹುದು. ಏಳು ಬಾರಿ ಶಾಸಕರಾಗಿರುವ ಶಿವಕುಮಾರ್ ಹಲವು ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿದ್ದು ಒಂದು ಪಕ್ಷದ ಜೊತೆ ಗುರುತಿಸಿಕೊಂಡಿದ್ದಾರೆ. ಅವರ ಟ್ರ್ಯಾಕ್ ರೆಕಾರ್ಡ್ ನೋಡಿದರೆ ಅವರ ಮೇಲೆ ಯಾವುದೇ ಗುರುತರ ಆರೋಪ ಇಲ್ಲ. ಪ್ರತಿ ವರ್ಷವೂ ತೆರಿಗೆ ಕಟ್ಟಿಕೊಂಡು ಬಂದಿದ್ದಾರೆ. ನಾಲ್ಕು ಕೇಸ್ ನಲ್ಲಿ ಮೂರು ಪ್ರಕರಣ ವಜಾಗೊಂಡಿದ್ದು ವ್ಯಕ್ತಿಯು ಅನಾರೋಗ್ಯ ಪೀಡಿತರಾಗಿದ್ದಾರೆ. ಹೀಗಾಗಿ ಯಾವುದೇ ಷರತ್ತುಗಳನ್ನು ಹಾಕಿ ಜಾಮೀನು ನೀಡಬಹುದು ಎಂದು ಸುಪ್ರೀಂಕೋರ್ಟ್ ಆದೇಶವನ್ನು ಉಲ್ಲೇಖಿಸಿದರು.

TAGGED:AishwaryabailcourtDK Shivakumarenforcement directorateSupreme Courtಐಶ್ವರ್ಯಾಕೋರ್ಟ್ಜಾಮೀನುಜಾರಿ ನಿರ್ದೇಶನಾಲಯಡಿಕೆ ಶಿವಕುಮಾರ್ಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

You Might Also Like

R.ASHOK
Bengaluru City

ಈ ಬಾರಿ ದಸರಾ ಸಿದ್ದರಾಮಯ್ಯ ಅಲ್ಲ ನೂತನ ಸಿಎಂ ಮಾಡ್ತಾರೆ: ಆರ್. ಅಶೋಕ್ ಭವಿಷ್ಯ

Public TV
By Public TV
4 minutes ago
KRS
Belgaum

ರಾಜ್ಯದಲ್ಲಿ ಆರಿದ್ರಾ ಮಳೆಯಬ್ಬರ – 93 ವರ್ಷಗಳ ಬಳಿಕ ಜೂನ್‌ನಲ್ಲೇ KRS 123 ಅಡಿ ಭರ್ತಿ

Public TV
By Public TV
6 minutes ago
Hindu activist suhas shetty brutally murdered in Bajpe Mangaluru
Crime

ಮಂಗಳೂರು | ಸುಹಾಸ್ ಶೆಟ್ಟಿ ಕೇಸ್‌ಗೆ ಟ್ವಿಸ್ಟ್ – ಹಂತಕರಿಗೆ ವಿದೇಶದಿಂದ ಲಕ್ಷ ಲಕ್ಷ ಫಂಡಿಗ್

Public TV
By Public TV
33 minutes ago
Stripped Beaten Head Shaved Telangana Woman Missing After Torture Over Adultery
Crime

ಅಕ್ರಮ ಸಂಬಂಧ ಆರೋಪ – ಮಹಿಳೆಯ ವಿವಸ್ತ್ರಗೊಳಿಸಿ, ತಲೆ ಬೋಳಿಸಿ ಚಿತ್ರಹಿಂಸೆ

Public TV
By Public TV
41 minutes ago
Bengaluru Kempegowda International Airport 1
Bengaluru City

ಕೆಂಪೇಗೌಡ ಏರ್‌ಪೋರ್ಟ್ ಬಳಿ ಕೇಂದ್ರ ಸರ್ಕಾರದಿಂದ NIMHANS ಪಾಲಿಟ್ರೌಮಾ ಘಟಕಕ್ಕೆ ಅನುಮೋದನೆ

Public TV
By Public TV
48 minutes ago
Pakistan Flood
Latest

ಪಾಕಿಸ್ತಾನ | ಪ್ರವಾಹದಲ್ಲಿ ಕೊಚ್ಚಿ ಹೋದ 9 ಜನ – 18 ಸದ್ಯಸರ ಕುಟುಂಬದ ದುರಂತ ಪ್ರವಾಸ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?