Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಪೋಕ್ಸೊ ಕೇಸಲ್ಲಿ ಬಿಎಸ್‌ವೈಗೆ ರಿಲೀಫ್‌; ಒತ್ತಾಯದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್‌ ಸೂಚನೆ

Public TV
Last updated: June 14, 2024 5:50 pm
Public TV
Share
3 Min Read
BS YEDIYURAPPA
SHARE

– ಬಂಧನ ಭೀತಿಯಿಂದ ಪಾರಾದ ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪಗೆ (B.S.Yediyurappa) ರಿಲೀಫ್‌ ಸಿಕ್ಕಿದೆ. ಮುಂದಿನ ವಿಚಾರಣೆ ತನಕ ಯಡಿಯೂರಪ್ಪ ವಿರುದ್ಧ ಒತ್ತಾಯದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್‌ ಸೂಚಿಸಿದೆ.

ಒತ್ತಾಯದ ಕ್ರಮ ಕೈಗೊಳ್ಳುವಂತಿಲ್ಲ ಎಂದಿರುವ ನ್ಯಾಯಾಲಯ, ಜೂನ್ 17 ರಂದು ಯಡಿಯೂರಪ್ಪ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚನೆ ನೀಡಿದೆ. ಇದನ್ನೂ ಓದಿ: ಚುನಾವಣೆ ಸೋಲು ಅರಗಿಸಿಕೊಳ್ಳಲಾಗದೇ ಬಿಎಸ್‌ವೈ ಮೇಲೆ ರಾಜಕೀಯ ವೈಷಮ್ಯ: ಜೋಶಿ ಆಕ್ರೋಶ

HIGHCOURT

ಪೋಕ್ಸೊ (POCSO) ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಯಡಿಯೂರಪ್ಪ ಅವರು ನಿರೀಕ್ಷಣಾ ಜಾಮೀನು ಹಾಗೂ ಪ್ರಕರಣ ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು, ಮುಂದಿನ ವಿಚಾರಣೆ ತನಕ ಬಲವಂತದ ಕ್ರಮಕೈಗೊಳ್ಳುವಂತಿಲ್ಲ ಎಂದು ಸೂಚಿಸಿದೆ.

ಯಡಿಯೂರಪ್ಪ ಪರ ವಾದ ಮಂಡಿಸಿದ ವಕೀಲ ನಾಗೇಶ್, ಲೈಂಗಿಕ ದೌರ್ಜನ್ಯ ಪ್ರಕರಣ ಜಾಮೀನು ಸಹಿತ ಪ್ರಕರಣ. ಜಾಮೀನು ನೀಡಬಹುದಾದ ಪ್ರಕರಣ. ಪ್ರಕರಣದಲ್ಲಿ ಆರೋಪಿಗೆ ಪೊಲೀಸ್ ಠಾಣೆಯಲ್ಲಿಯೇ ಜಾಮೀನು ನೀಡಬಹುದು. 7 ವರ್ಷದ ಕೆಳಗೆ ಶಿಕ್ಷೆ ಇರುವ ಪ್ರಕರಣ ಇದು. ಇದರಲ್ಲಿ ಬಂಧನದ ಅನಿವಾರ್ಯತೆ ಇಲ್ಲ. ಬಂಧನ ಮಾಡುವ ಪ್ರಕರಣ ಅಲ್ಲ. ಇಷ್ಟೆಲ್ಲಾ ರಕ್ಷಣೆ ಇದ್ದರೂ ಕೂಡ ಸಿಐಡಿ ಬಂಧನ ಮಾಡಲು ಆತುರದಲ್ಲಿ ಇದೆ. 41(0) ಅಡಿಯಲ್ಲಿ ನೋಟಿಸ್ ನೀಡಿದೆ. 7 ವರ್ಷದ ಶಿಕ್ಷೆ ಇರುವ ಪ್ರಕರಣಕ್ಕೆ ಬಂಧನ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಆದೇಶದಲ್ಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಏನಿದು ಬಿಎಸ್‌ವೈ ವಿರುದ್ಧದ ಪೋಕ್ಸೊ ಕೇಸ್‌? – ಇಲ್ಲಿದೆ ನೋಡಿ ಟೈಮ್‌ಲೈನ್‌..

ಅಡ್ವೊಕೇಟ್ ಜನರಲ್ ಶಶಿಕಿರಣ್, ನೋಟಿಸ್ ನೀಡಿದ ಬಳಿಕ ಯಡಿಯೂರಪ್ಪ ಅವರು ದೆಹಲಿಗೆ ಟಿಕೆಟ್ ಬುಕ್ ಮಾಡಿದ್ರು. ಅವರ ಉದ್ದೇಶ ಬೆಂಗಳೂರು ಬಿಟ್ಟು ಹೋಗುವುದು ಆಗಿತ್ತು. ಮೊದಲು ದೆಹಲಿಗೆ ಹೋಗುವ ಉದ್ದೇಶ ಇರಲಿಲ್ಲ. ನೋಟಿಸ್ ಕೊಟ್ಟ ಕೂಡಲೇ ಟಿಕೆಟ್ ಬುಕ್ ಮಾಡಿದ್ರು. ರಾತ್ರಿ 9:30 ಕ್ಕೆ ಹೋದರು ಎಂದು ವಾದ ಮಂಡಿಸಿದರು.

b.s.yediyurappa POCSO Case

ಅವರು ಎರಡು ಬಾರಿ ಮುಖ್ಯಮಂತ್ರಿ ಆಗಿದ್ರು. ರಾಜಕೀಯ ಕೆಲಸಗಳು ಇರಬಹುದು ಅಲ್ಲವಾ ಎಂದು ನ್ಯಾಯಾಧೀಶರು ಪ್ರಶ್ನಿಸಿದರು. ಸರ್ಕಾರಿ ವಕೀಲ ಜಗದೀಶ್, ಪ್ರಕರಣದ ಸಾಕ್ಷ್ಯವನ್ನು ನಾಶ ಮಾಡಿದ್ದಾರೆ. ಆರೋಪಿಗಳು ಸಂತ್ರಸ್ತೆಯ ಮೇಲೆ ಒತ್ತಡ ಬೀರಿದ್ದಾರೆ ಎಂದು ವಾದ ಮಂಡಿಸಿದರು.

ವಾರೆಂಟ್ ನೋಡಿದರೆ ಅನುಮಾನ ಬರುತ್ತದೆ ಎಂದು ನ್ಯಾಯಾಧೀಶರು ಕೇಳಿದರು. ಅದಕ್ಕೆ ಅಡ್ವೊಕೇಸ್ ಜನರಲ್, ಯಾವುದೇ ಅನುಮಾನಪಡುವ ಅಗತ್ಯವಿಲ್ಲ. ತನಿಖಾಧಿಕಾರಿಗೆ ಬಂಧನ ಅಗತ್ಯವಿದೆ ಎಂದು ಅನಿಸಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಪೋಕ್ಸೋ ಕೇಸ್: ಬಿಎಸ್‌ವೈ ವಿರುದ್ಧ ಅರೆಸ್ಟ್‌ ವಾರಂಟ್‌ ಜಾರಿ – ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ!

ಇದಕ್ಕೆ ನ್ಯಾಯಾಧೀಶರು, ಅವರು ಮಾಜಿ ಮುಖ್ಯಮಂತ್ರಿ. ಕರ್ನಾಟಕಕ್ಕೆ ವಾಪಸ್ ಬರಲೇಬೇಕು ಅಲ್ಲವಾ? ಬಿಎಸ್‌ವೈ ಜೂನ್ 17ರಂದು ಬರುತ್ತೇನೆ ಎಂದಿದ್ದಾರೆ. ಅದಾಗ್ಯೂ, ಅವರನ್ನು ಬಂಧಿಸಬೇಕೆ? ಯಾರನ್ನು ಸಂತುಷ್ಟಗೊಳಿಸಲು ಎಂದು ಪ್ರಶ್ನಿಸಿದರು. ಅದಕ್ಕೆ ಅಡ್ವೊಕೇಟ್ ಜನರಲ್ ಮಾತನಾಡಿ, ಅವರ ವಿರುದ್ಧ ಬಲವಾದ ಸಾಕ್ಷ್ಯಗಳು ಇದ್ದಾವೆ. ಅದಕ್ಕಾಗಿಯೇ ವಾರೆಂಟ್ ಪಡೆದುಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಬಿಎಸ್‌ವೈ ಪರ ವಕೀಲ ನಾಗೇಶ್ ಮಾತನಾಡಿ, ಬಲವಂತದ ಕ್ರಮ ತೆಗೆದುಕೊಳ್ಳದಂತೆ ಸೂಚನೆ ನೀಡಿ. ಈಗಾಗಲೇ ಆರೋಪಿ ವಿರುದ್ಧ ಅರೆಸ್ಟ್ ವಾರೆಂಟ್ ಮಾಡಿಸಿಕೊಂಡಿದ್ದಾರೆ. ಪ್ರಕರಣದ ವಿಚಾರಣೆಯನ್ನೇ ಮಾಡಬಾರದು ಎಂದು ವಾದ ಮಂಡಿಸಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಕೃಷ್ಣ ದೀಕ್ಷಿತ್ ಪೀಠವು, ಮುಂದಿನ ವಿಚಾರಣೆ ತನಕ ಒತ್ತಾಯದ ಕ್ರಮ ಮಾಡುವಂತಿಲ್ಲ. ಜೂನ್ 17ರಂದು ಯಡಿಯೂರಪ್ಪ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿದೆ. ಇದನ್ನೂ ಓದಿ: ಅಗತ್ಯ ಬಿದ್ದರೆ ಬಿಎಸ್‍ವೈ ಅರೆಸ್ಟ್: ಪರಮೇಶ್ವರ್

TAGGED:B. S.Yediyurappahigh courtPOCSOಪೋಕ್ಸೊಬಿ.ಎಸ್.ಯಡಿಯೂರಪ್ಪಹೈಕೋರ್ಟ್
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
16 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
17 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
19 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 day ago

You Might Also Like

UK gay couple
Latest

ಏರ್‌ ಇಂಡಿಯಾ ಪತನ – ಮದುವೆಯಾಗಿದ್ದ Gay Couple ದುರಂತ ಸಾವು

Public TV
By Public TV
16 minutes ago
Bhavik Maheshwari
Crime

ವಿಮಾನ ದುರಂತ – ಮದುವೆಯಾದ ಎರಡೇ ದಿನಕ್ಕೆ ಮಸಣ ಸೇರಿದ ಭವಿಕ್

Public TV
By Public TV
21 minutes ago
Ahmedabad Plane Crash Survivor
Latest

ನಾನು ವಿಮಾನದಿಂದ ಜಂಪ್ ಮಾಡ್ಲಿಲ್ಲ – ದೊಡ್ಡ ಆಪತ್ತಿನಿಂದ ರಮೇಶ್ ವಿಶ್ವಾಸ್ ಕುಮಾರ್ ಪಾರಾಗಿದ್ದು ಹೇಗೆ?

Public TV
By Public TV
32 minutes ago
Ahmedabad Plane Crash 1 2
Latest

ಏರ್ ಇಂಡಿಯಾ ವಿಮಾನ ದುರಂತ – ಅವಶೇಷಗಳ ತೆರವು ಕಾರ್ಯ ಆರಂಭ

Public TV
By Public TV
1 hour ago
Gadag Rain
Districts

ಗದಗ | ವರುಣನ ಆರ್ಭಟಕ್ಕೆ ಕೊಚ್ಚಿಹೋದ ಸೇತುವೆ – ಹರಿಯುವ ನೀರಿನಲ್ಲಿ ಜನರ ಹುಚ್ಚಾಟ

Public TV
By Public TV
1 hour ago
Agumbe Ghat
Districts

ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?