ಹುಬ್ಬಳ್ಳಿ: ತಲ್ವಾರ್ ನಿಂದ ಕೇಕ್ ಕತ್ತರಿಸಿಕೊಂಡು ಹುಟ್ಟು ಹಬ್ಬ ಆಚರಿಸಿಕೊಂಡ ಶಂಭು ಬಿಜವಾಡ ಎಂಬಾತನನ್ನು ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಸೆಟ್ಲಮೆಂಟ್ ನಿವಾಸಿಯಾಗಿದ್ದು, ಇತ್ತೀಚಿಗೆ ಈತ ಹುಟ್ಟುಹಬ್ಬ ಆಚರಿಸಿಕೊಂಡಿದ್ದನು. ಆಗ ತಲ್ವಾರ್ ನಿಂದ ಕೇಕ್ ಕತ್ತರಿಸಿದ್ದನು. ರೌಡಿ ಚಟುವಟಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಈತನನ್ನು ಬಂಧಿಸಲಾಗಿದೆ.
ಇತ್ತೀಚೆಗೆ ಗಣೇಶಪೇಟಿಯಲ್ಲಿ ಇರ್ಷಾದ್ ಎಂಬಾತ ಸಹ ತನ್ನ ಹುಟ್ಟುಹಬ್ಬ ಆಚರಣೆ ವೇಳೆ ತಲ್ವಾರ್ ನಿಂದ ಕೇಕ್ ಕತ್ತರಿಸಿಕೊಂಡು ಆಚರಿಸಿಕೊಂಡಿದ್ದನು. ಇದನ್ನೂ ಓದಿ: ತಲ್ವಾರ್ ನಿಂದ ಕೇಕ್ ಕತ್ತರಿಸಿ ವಿಚಿತ್ರವಾಗಿ ಹುಟ್ಟುಹಬ್ಬ ಆಚರಿಸಿದ! – ವಿಡಿಯೋ ವೈರಲ್
ತಲ್ವಾರ್ ನಿಂದ ಸ್ನೇಹಿತರಿಗೆ ಕೇಕ್ ತಿನ್ನಿಸಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಪದೇ ಪದೇ ನಗರದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಡುತ್ತಿದೆ. ಹುಟ್ಟು ಹಬ್ಬದ ಹೆಸರಿನಲ್ಲಿ ಮಾರಕಾಸ್ತ್ರಗಳ ಪ್ರದರ್ಶನ ಹಾಗೂ ವಿಕೃತಿ ಮೆರೆಯುವದು ಹೆಚ್ಚಾಗುತ್ತಿದೆ. ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಿಂದ ಕಟ್ಟುನಿಟ್ಟಿನ ಕ್ರಮವಿಲ್ಲ ಎಂದು ಸಾರ್ವಜನಿಕರು ದೂರಿದ್ದರು.
ಸಾರ್ವಜನಿಕರ ದೂರಿನಿಂದ ಎಚ್ಚೆತ್ತುಕೊಂಡ ಪೊಲೀಸರು ಆತನನ್ನು ಬಂಧಿಸಿ ವಿಕೃತಿ ಮೆರೆಯುವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.