ಬೆಂಗಳೂರು: ಕೌಟಂಬಿಕ ಕಲಹ ಹಿನ್ನೆಲೆ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಯರಿಗೆ ಪೊಲೀಸ್ ಅಧಿಕಾರಿಗಳು ಹೊಡೆದ ಅಮಾನವೀಯ ಘಟನೆ ರಾಜಧಾನಿಯ ಕುಮಾರಸ್ವಾಮಿ ಲೇಔಟ್ನಲ್ಲಿ ನಡೆದಿದೆ
ಕೌಟುಂಬಿಕ ಕಲಹದ ಹಿನ್ನೆಲೆ ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಯರ ಮೇಲೆ ಕುಮಾರಸ್ವಾಮಿ ಠಾಣೆ ಎಎಸ್ಐ ರೇಣುಕಯ್ಯ ದರ್ಪ ಮೆರೆದಿದ್ದಾರೆ. ನ್ಯಾಯಕೇಳಿ ಠಾಣೆ ಮೆಟ್ಟಿಲೇರುವ ಮಹಿಳೆಯರಿಗೆ ಮರ್ಯಾದೆ ಕೊಡದೆ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಮಹಿಳೆಯ ಕುತ್ತಿಗೆ ಹಿಡಿದು ಠಾಣೆಯಿಂದ ಹೊರ ದಬ್ಬಿದಲ್ಲದೆ ಅವರಿಗೆ ಹೊಡೆದಿದ್ದಾರೆ.
ದಕ್ಷ ಅಧಿಕಾರಿ ಅಣ್ಣಾಮಲೈ ಸುಪರ್ದಿಯಲ್ಲಿರುವ ಠಾಣೆಯಲ್ಲಿ ಇಂತಹ ಅಮಾನವೀಯ ಕೃತ್ಯ ನಡೆದಿದ್ದು, ಠಾಣೆಗೆ ಬಂದ ಮಹಿಳೆಯ ಮೇಲೆ ಪೊಲೀಸ್ ಅಧಿಕಾರಿ ಹಲ್ಲೆ ಮಾಡಿರುವ ದೃಶ್ಯವನ್ನು ಠಾಣೆಯ ಇತರ ಪೊಲೀಸರೇ ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ. ಯೂನಿಫಾರ್ಮ್ ಇಲ್ಲದಿದ್ರು ಖದರ್ ತೋರಿಸಿರುವ ಎಎಸ್ಐ ರೇಣುಕಯ್ಯ ಮೇಲೆ ಈಗ ಎಲ್ಲೆಡೆಯಿಂದ ಆಕ್ರೋಶ ವ್ಯಕ್ತವಾಗುತ್ತಿದೆ.
ಮಹಿಳೆ ಮೇಲೆ ಎಎಸ್.ಐ ದೌರ್ಜನ್ಯ ಪ್ರಕರಣದ ಕುರಿತು ವಿಚಾರಣೆ ನಡೆಸಲು ಇಂದು ಮಧ್ಯಾಹ್ನ 1 ಗಂಟೆಗೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಗೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಭಾಯಿ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
https://www.youtube.com/watch?v=TVjkII_iJWw
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv