ಚಿಕ್ಕೋಡಿ: ಕೋವಿಡ್ ನೆಗೆಟಿವ್ ವರದಿ ಇಲ್ಲದೆ ರಾಜ್ಯ ಪ್ರವೇಶಕ್ಕೆ ಯತ್ನಿಸಿರುವ ಖಾಸಗಿ ಬಸ್ ಕಂಪನಿಗಳ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ಈ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳಿ ಚೆಕ್ ಪೋಸ್ಟ್ ಬಳಿ ನಡೆದಿದೆ.
ಕಳ್ಳದಾರಿಯ ಮೂಲಕ ಆರ್ಟಿಸಿಪಿಆರ್ ವರದಿ ಇಲ್ಲದೆ ಮುಂಬೈನಿಂದ ಬೆಂಗಳೂರಿಗೆ 17 ಜನ ಪ್ರಯಾಣಿಕರನ್ನು ಖಾಸಗಿ ಕಂಪನಿ ಬಸ್ ರಾಜ್ಯಕ್ಕೆ ಕರೆತರುತ್ತಿತ್ತು. ಈ ವೇಳೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಅಪ್ಪಾಚಿವಾಡಿ ಬಳಿ ಬಸ್ನನ್ನು ಪೊಲೀಸರು ತಡೆದಿದ್ದು, ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಜನರಿಗೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕೊಂಡು ಮನೆಯಲ್ಲಿ ಮಲಗಿ ಎನ್ನುವಂತಿದೆ ಈ ಬಜೆಟ್: ಹೆಚ್ಡಿಕೆ
- Advertisement 2
- Advertisement 3
ಪ್ರಸ್ತುತ ಬಸ್ ಕಂಪನಿಯ ಮ್ಯಾನೇಜರ್, ಮೇಲ್ವಿಚಾರಕ ಅಸ್ಲಂ ಉಲ್ಖಾನ್, ನೇಮುತ್ತಮ್ ಖಾನ್, ಕ್ಲೀನರ್ ಟಿಪ್ಪು ಸುಲ್ತಾನ್ ಮೇಲೆ ರಾಷ್ಟ್ರೀಯ ವಿಪತ್ತು ನಿರ್ವಹಣೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ ಪ್ರಕಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
- Advertisement 4
ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಕೋವಿಡ್ ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ರಾಜ್ಯಕ್ಕೆ ಪ್ರವೇಶ ಎಂಬ ನಿಯಮ ಮಾಡಿದೆ. ಆ ನಿಯಮವನ್ನು ಖಾಸಗಿ ಬಸ್ ಉಲ್ಲಂಘಿಸಿ, ಕೋವಿಡ್ ವರದಿ ಇಲ್ಲದೆ ಪ್ರಯಾಣಿಕರನ್ನು ತುಂಬಿಕೊಂಡು ಕಳ್ಳ ಮಾರ್ಗದಿಂದ ಬರುತ್ತಿತ್ತು. ಇದನ್ನೂ ಓದಿ: ನಮ್ಮಲ್ಲಿ ಪ್ರಾಣಿಗಳ ಕಾನೂನು ಕಠಿಣ ಇಲ್ಲ – ನಾಯಿ ‘ಲಾರಾ’ ಅಂತ್ಯಕ್ರಿಯೆಗೆ ಬಂದ ರಮ್ಯಾ
ಈ ವೇಳೆ ಪೋಲಿಸರು ಬಸ್ ತಡೆಹಿಡಿದಿದ್ದು, ಪದೇ-ಪದೇ ಆದೇಶ ಉಲ್ಲಂಘನೆ ಮಾಡುತ್ತಿದ್ದ ಬಸ್ ಕಂಪನಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಶರ್ಮಾ ಟ್ರಾವೆಲ್ಸ್ ನ್ಯಾಷನಲ್ ಕಂಪನಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.