Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ ಅರಣ್ಯ ಸಿಬ್ಬಂದಿಗೂ ಪೊಲೀಸ್ ಕ್ಯಾಂಟೀನ್ ಸೌಲಭ್ಯ: ಈಶ್ವರ ಖಂಡ್ರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದ ಅರಣ್ಯ ಸಿಬ್ಬಂದಿಗೂ ಪೊಲೀಸ್ ಕ್ಯಾಂಟೀನ್ ಸೌಲಭ್ಯ: ಈಶ್ವರ ಖಂಡ್ರೆ

Bengaluru City

ರಾಜ್ಯದ ಅರಣ್ಯ ಸಿಬ್ಬಂದಿಗೂ ಪೊಲೀಸ್ ಕ್ಯಾಂಟೀನ್ ಸೌಲಭ್ಯ: ಈಶ್ವರ ಖಂಡ್ರೆ

Public TV
Last updated: September 11, 2024 5:30 pm
Public TV
Share
2 Min Read
Eshwara Khandre
SHARE

ಬೆಂಗಳೂರು: ರಾಜ್ಯದ ಸಮೃದ್ಧ ಅರಣ್ಯ ಸಂಪತ್ತಿನ ರಕ್ಷಣೆಗೆ ಹಗಲಿರುಳು ಶ್ರಮಿಸುವ ಅರಣ್ಯ ಸಿಬ್ಬಂದಿಗೂ ಪೊಲೀಸ್ ಕ್ಯಾಂಟೀನ್ ಸೌಲಭ್ಯ ನೀಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ನಗರದ ಭವನದಲ್ಲಿ ಬುಧವಾರ ಮಾತನಾಡಿದ ಅವರು, ರಾಷ್ಟ್ರೀಯ ಹುತಾತ್ಮರ ದಿನದ ಅಂಗವಾಗಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಸಮರ್ಪಿಸಿದರು. ಕಾಡ್ಗಿಚ್ಚು ನಂದಿಸುವಾಗ, ಮಾನವ-ವನ್ಯಜೀವಿ ಸಂಘರ್ಷ ತಡೆಯುವ ಸಂದರ್ಭದಲ್ಲಿ ಜೀವವನ್ನು ಒತ್ತೆಯಿಟ್ಟಿದ್ದಾರೆ. ಒತ್ತುವರಿದಾರರು ಮತ್ತು ಕಾಡುಗಳ್ಳರ ಆಕ್ರೋಶಕ್ಕೆ ಗುರಿಯಾಗಿ ಈವರೆಗೆ 61 ಅರಣ್ಯ ಸಿಬ್ಬಂದಿ ಮತ್ತು ಅಧಿಕಾರಿಗಳು ಹುತಾತ್ಮರಾಗಿದ್ದಾರೆ. ಈ ಎಲ್ಲರ ಕುಟುಂಬದೊಂದಿಗೆ ಅರಣ್ಯ ಇಲಾಖೆ ನಿಂತಿದೆ ಎಂದರು.ಇದನ್ನೂ ಓದಿ: ಗೋಕರ್ಣ ಬೀಚ್‌ನಲ್ಲಿ ಮುಳುಗಿ ಬೆಂಗ್ಳೂರಿನ ಯುವಕ ದುರ್ಮರಣ – ಐವರು ಅಸ್ವಸ್ಥ

ರಾಜ್ಯದ ಸಮೃದ್ಧ ಅರಣ್ಯ ಸಂಪತ್ತಿನ ರಕ್ಷಣೆಗೆ ಹಗಲಿರುಳು, ಜೀವದ ಹಂಗು ತೊರೆದು ಶ್ರಮಿಸುವ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಾಲಿ ಇರುವ ಪೊಲೀಸ್ ಕ್ಯಾಂಟೀನ್ ಸೌಲಭ್ಯ ಬಳಸಿಕೊಳ್ಳಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಇದಕ್ಕೂ ಮುನ್ನ ಸಿದ್ದರಾಮಯ್ಯ (CM Siddaramaiah) ಅವರು ಮುಖ್ಯಮಂತ್ರಿಗಳಾಗಿದ್ದಾಗ ಹುತಾತ್ಮರ ಕುಟುಂಬಕ್ಕೆ ಪರಿಹಾರ ನೀಡುವ ಘೋಷಣೆ ಮಾಡಿದರು. 30 ಲಕ್ಷ ರೂ. ಇದ್ದ ಪರಿಹಾರದ ಮೊತ್ತವನ್ನು ಈಗ 50 ಲಕ್ಷ ರೂ.ಗೆ ಹೆಚ್ಚಿಸುವ ಕಾರ್ಯವನ್ನೂ ಅವರೇ ಮಾಡಿದ್ದಾರೆ. ನಮ್ಮ ಸರ್ಕಾರ ಅರಣ್ಯದಲ್ಲಿ ಜೀವದ ಹಂಗು ತೊರೆದು ಆನೆ ಕಾರ್ಯಪಡೆ, ಕಳ್ಳಬೇಟಿ ನಿಗ್ರಹ ಶಿಬಿರ ಮತ್ತು ಇತರ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೊರಗುತ್ತಿಗೆ ನೌಕರರಿಗೂ ಮಾಸಿಕ 2 ಸಾವಿರ ರೂ. ಕಷ್ಟ ಕಾರ್ಯ ಭತ್ಯೆ ನೀಡುವ ಘೋಷಣೆ ಮಾಡಿದ್ದು, ಇದನ್ನು ಅನುಷ್ಠಾನ ಮಾಡಲಾಗಿದೆ ಎಂದು ತಿಳಿಸಿದರು.

ಕಳೆದ 16 ತಿಂಗಳ ಅವಧಿಯಲ್ಲಿ ಅರಣ್ಯ ಇಲಾಖೆ ಸುಮಾರು 10 ಸಾವಿರ ಎಕರೆ ಭೂಮಿಯನ್ನು ಅಧಿಸೂಚಿತ ಅರಣ್ಯ ಎಂದು ಘೋಷಿಸಿದೆ. ಜೊತೆಗೆ ಬೆಂಗಳೂರು, ಕೋಲಾರ, ಬೀದರ್ ಸೇರಿದಂತೆ ರಾಜ್ಯದ ವಿವಿಧೆಡೆ ಸಾವಿರಾರು ಕೋಟಿ ರೂ. ಬೆಲೆ ಬಾಳುವ 2500 ಎಕರೆಗೂ ಹೆಚ್ಚು ಅರಣ್ಯ ಭೂಮಿಯನ್ನು ಮರು ವಶಕ್ಕೆ ಪಡೆದಿದೆ ಎಂದರು.

2015ಕ್ಕೂ ಮುನ್ನ ರಾಜ್ಯ ಸರ್ಕಾರದ ನಡವಳಿಗೆ ಪಟ್ಟಾ ಜಮೀನು ಮತ್ತು ಅರಣ್ಯ ಭೂಮಿ ಒತ್ತುವರಿ ಸೇರಿ 3 ಎಕರೆ ಮೀರದ ಪ್ರಕರಣಗಳಲ್ಲಿ ಮತ್ತು ಅರಣ್ಯ ಹಕ್ಕು ಕಾಯಿದೆಯ ಅರ್ಜಿ ವಿಲೇವಾರಿ ಆಗದ ಪ್ರಕರಣಗಳ ಹೊರತಾಗಿ ದೊಡ್ಡ ಅರಣ್ಯ ಒತ್ತುವರಿ ತೆರವು ಮಾಡಿಸಲು ಸ್ಪಷ್ಟ ಆದೇಶ ನೀಡಲಾಗಿದೆ. ಇದು ಸಂವಿಧಾನದ 41(ಎ) ಮತ್ತು 51(ಎ) ಆಶಯಗಳಿಗೆ ಅನುಗುಣವಾಗಿದೆ ಎಂದು ಹೇಳಿದರು.ಇದನ್ನೂ ಓದಿ: ವಾಲ್ಮೀಕಿ ಹಗರಣದ ಇಡಿ ಚಾರ್ಜ್‌ಶೀಟ್‌ ಬಗ್ಗೆ ಕೋರ್ಟ್ ತೀರ್ಮಾನ ಮಾಡುತ್ತದೆ: ಸಿಎಂ

ಕಸ್ತೂರಿ ರಂಗನ್ ವರದಿ ಮಾಸಾಂತ್ಯದೊಳಗೆ ರಾಜ್ಯದ ಅಭಿಪ್ರಾಯ ಸಲ್ಲಿಕೆ ಪಶ್ಚಿಮಘಟ್ಟ ಹಲವು ನದಿಗಳ ಮೂಲವಷ್ಟೇ ಅಲ್ಲದೆ, ಸಸ್ಯ ಸಂಕುಲ, ಪ್ರಾಣಿ ಸಂಕುಲ, ಕೀಟ ಸಂಕುಲ, ಪಕ್ಷಿ ಸಂಕುಲದ ನೆಲೆಯಾಗಿದೆ. ಇದರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಇದೇ ಸೆ.19ರಂದು ಪಶ್ಚಿಮಘಟ್ಟ ವ್ಯಾಪ್ತಿಯ ಬಾಧ್ಯಸ್ಥರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಬೇಕು. ನಂತರ ಸಚಿವ ಸಂಪುಟದ ಉಪ ಸಮಿತಿ ಸಭೆಯಲ್ಲಿ ಚರ್ಚಿಸಿ, ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಬೇಕು. ನಂತರ ಸಚಿವ ಸಂಪುಟದ ಅನುಮೋದನೆ ಪಡೆದುಕೊಳ್ಳಬೇಕು. ಪಶ್ವಿಮಘಟ್ಟದ ಜೀವವೈವಿಧ್ಯ, ಜನರ ಜೀವನೋಪಾಯ ಎರಡೂ ಇರುವ ರೀತಿಯಲ್ಲಿ ಕೇಂದ್ರ ಸರ್ಕಾರಕ್ಕೆ ನಮ್ಮ ರಾಜ್ಯದ ನಿಲುವು ತಿಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

TAGGED:bengalurueshwar khandreforest departmentಅರಣ್ಯ ಇಲಾಖೆಈಶ್ವರ ಖಂಡ್ರೆಬೆಂಗಳೂರು
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

belagavi money robbery
Belgaum

400 ಕೋಟಿ ದರೋಡೆ ಕಟ್ಟುಕಥೆ – ʻಮಹಾʼ ಸರ್ಕಾರಕ್ಕೆ ಎಸ್‌ಐಟಿ ವರದಿ

Public TV
By Public TV
31 minutes ago
AI Impact Summit 2
Latest

ಇಂದಿನಿಂದ AI ಇಂಪ್ಯಾಕ್ಟ್ ಶೃಂಗಸಭೆ – ಭಾರತದಲ್ಲಿ ರಸ್ತೆ ಸುರಕ್ಷತೆಗೆ ಎಐ ಬಳಕೆ ಕುರಿತು ಚರ್ಚೆ

Public TV
By Public TV
59 minutes ago
Vijayapura House Theft
Crime

ಶಿವರಾತ್ರಿ ಜಾಗರಣೆಗೆ ಹೋಗಿದ್ದವರ ಮನೆಗೆ ಕನ್ನ – 154 ಗ್ರಾಂ ಚಿನ್ನ, 270 ಗ್ರಾಂ ಬೆಳ್ಳಿ ಕಳ್ಳತನ

Public TV
By Public TV
2 hours ago
yadgir
Districts

ಯಾದಗಿರಿಯಲ್ಲಿ ಅನಿಷ್ಟ ಪದ್ಧತಿ ಇನ್ನೂ ಜೀವಂತ – ಸ್ವಕುಳ ಸಾಳಿ ಸಮಾಜದ 15 ಕುಟುಂಬಕ್ಕೆ ಬಹಿಷ್ಕಾರ ಶಿಕ್ಷೆ

Public TV
By Public TV
2 hours ago
Bengaluru GBA Skywalk
Bengaluru City

18 ಟ್ರಾಫಿಕ್ ಹಾಟ್‌ಸ್ಪಾಟ್ ಪ್ರದೇಶಗಳಲ್ಲಿ ಸ್ಕೈವಾಕ್ ನಿರ್ಮಾಣಕ್ಕೆ ಜಿಬಿಎ ಪ್ಲ್ಯಾನ್

Public TV
By Public TV
3 hours ago
siddaramaiah dk shivakumar
Bengaluru City

ʻಪವರ್‌ ಫೈಟ್‌ʼ ನಡುವೆ ನಾಳೆಯಿಂದ 27 ಶಾಸಕರ ಫಾರಿನ್ ಟ್ರಿಪ್‌ ಫಿಕ್ಸ್?‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?