Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ ಅರಣ್ಯ ಸಿಬ್ಬಂದಿಗೂ ಪೊಲೀಸ್ ಕ್ಯಾಂಟೀನ್ ಸೌಲಭ್ಯ: ಈಶ್ವರ ಖಂಡ್ರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದ ಅರಣ್ಯ ಸಿಬ್ಬಂದಿಗೂ ಪೊಲೀಸ್ ಕ್ಯಾಂಟೀನ್ ಸೌಲಭ್ಯ: ಈಶ್ವರ ಖಂಡ್ರೆ

Bengaluru City

ರಾಜ್ಯದ ಅರಣ್ಯ ಸಿಬ್ಬಂದಿಗೂ ಪೊಲೀಸ್ ಕ್ಯಾಂಟೀನ್ ಸೌಲಭ್ಯ: ಈಶ್ವರ ಖಂಡ್ರೆ

Public TV
Last updated: September 11, 2024 5:30 pm
Public TV
Share
2 Min Read
Eshwara Khandre
SHARE

ಬೆಂಗಳೂರು: ರಾಜ್ಯದ ಸಮೃದ್ಧ ಅರಣ್ಯ ಸಂಪತ್ತಿನ ರಕ್ಷಣೆಗೆ ಹಗಲಿರುಳು ಶ್ರಮಿಸುವ ಅರಣ್ಯ ಸಿಬ್ಬಂದಿಗೂ ಪೊಲೀಸ್ ಕ್ಯಾಂಟೀನ್ ಸೌಲಭ್ಯ ನೀಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ನಗರದ ಭವನದಲ್ಲಿ ಬುಧವಾರ ಮಾತನಾಡಿದ ಅವರು, ರಾಷ್ಟ್ರೀಯ ಹುತಾತ್ಮರ ದಿನದ ಅಂಗವಾಗಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಸಮರ್ಪಿಸಿದರು. ಕಾಡ್ಗಿಚ್ಚು ನಂದಿಸುವಾಗ, ಮಾನವ-ವನ್ಯಜೀವಿ ಸಂಘರ್ಷ ತಡೆಯುವ ಸಂದರ್ಭದಲ್ಲಿ ಜೀವವನ್ನು ಒತ್ತೆಯಿಟ್ಟಿದ್ದಾರೆ. ಒತ್ತುವರಿದಾರರು ಮತ್ತು ಕಾಡುಗಳ್ಳರ ಆಕ್ರೋಶಕ್ಕೆ ಗುರಿಯಾಗಿ ಈವರೆಗೆ 61 ಅರಣ್ಯ ಸಿಬ್ಬಂದಿ ಮತ್ತು ಅಧಿಕಾರಿಗಳು ಹುತಾತ್ಮರಾಗಿದ್ದಾರೆ. ಈ ಎಲ್ಲರ ಕುಟುಂಬದೊಂದಿಗೆ ಅರಣ್ಯ ಇಲಾಖೆ ನಿಂತಿದೆ ಎಂದರು.ಇದನ್ನೂ ಓದಿ: ಗೋಕರ್ಣ ಬೀಚ್‌ನಲ್ಲಿ ಮುಳುಗಿ ಬೆಂಗ್ಳೂರಿನ ಯುವಕ ದುರ್ಮರಣ – ಐವರು ಅಸ್ವಸ್ಥ

ರಾಜ್ಯದ ಸಮೃದ್ಧ ಅರಣ್ಯ ಸಂಪತ್ತಿನ ರಕ್ಷಣೆಗೆ ಹಗಲಿರುಳು, ಜೀವದ ಹಂಗು ತೊರೆದು ಶ್ರಮಿಸುವ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಾಲಿ ಇರುವ ಪೊಲೀಸ್ ಕ್ಯಾಂಟೀನ್ ಸೌಲಭ್ಯ ಬಳಸಿಕೊಳ್ಳಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಇದಕ್ಕೂ ಮುನ್ನ ಸಿದ್ದರಾಮಯ್ಯ (CM Siddaramaiah) ಅವರು ಮುಖ್ಯಮಂತ್ರಿಗಳಾಗಿದ್ದಾಗ ಹುತಾತ್ಮರ ಕುಟುಂಬಕ್ಕೆ ಪರಿಹಾರ ನೀಡುವ ಘೋಷಣೆ ಮಾಡಿದರು. 30 ಲಕ್ಷ ರೂ. ಇದ್ದ ಪರಿಹಾರದ ಮೊತ್ತವನ್ನು ಈಗ 50 ಲಕ್ಷ ರೂ.ಗೆ ಹೆಚ್ಚಿಸುವ ಕಾರ್ಯವನ್ನೂ ಅವರೇ ಮಾಡಿದ್ದಾರೆ. ನಮ್ಮ ಸರ್ಕಾರ ಅರಣ್ಯದಲ್ಲಿ ಜೀವದ ಹಂಗು ತೊರೆದು ಆನೆ ಕಾರ್ಯಪಡೆ, ಕಳ್ಳಬೇಟಿ ನಿಗ್ರಹ ಶಿಬಿರ ಮತ್ತು ಇತರ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೊರಗುತ್ತಿಗೆ ನೌಕರರಿಗೂ ಮಾಸಿಕ 2 ಸಾವಿರ ರೂ. ಕಷ್ಟ ಕಾರ್ಯ ಭತ್ಯೆ ನೀಡುವ ಘೋಷಣೆ ಮಾಡಿದ್ದು, ಇದನ್ನು ಅನುಷ್ಠಾನ ಮಾಡಲಾಗಿದೆ ಎಂದು ತಿಳಿಸಿದರು.

ಕಳೆದ 16 ತಿಂಗಳ ಅವಧಿಯಲ್ಲಿ ಅರಣ್ಯ ಇಲಾಖೆ ಸುಮಾರು 10 ಸಾವಿರ ಎಕರೆ ಭೂಮಿಯನ್ನು ಅಧಿಸೂಚಿತ ಅರಣ್ಯ ಎಂದು ಘೋಷಿಸಿದೆ. ಜೊತೆಗೆ ಬೆಂಗಳೂರು, ಕೋಲಾರ, ಬೀದರ್ ಸೇರಿದಂತೆ ರಾಜ್ಯದ ವಿವಿಧೆಡೆ ಸಾವಿರಾರು ಕೋಟಿ ರೂ. ಬೆಲೆ ಬಾಳುವ 2500 ಎಕರೆಗೂ ಹೆಚ್ಚು ಅರಣ್ಯ ಭೂಮಿಯನ್ನು ಮರು ವಶಕ್ಕೆ ಪಡೆದಿದೆ ಎಂದರು.

2015ಕ್ಕೂ ಮುನ್ನ ರಾಜ್ಯ ಸರ್ಕಾರದ ನಡವಳಿಗೆ ಪಟ್ಟಾ ಜಮೀನು ಮತ್ತು ಅರಣ್ಯ ಭೂಮಿ ಒತ್ತುವರಿ ಸೇರಿ 3 ಎಕರೆ ಮೀರದ ಪ್ರಕರಣಗಳಲ್ಲಿ ಮತ್ತು ಅರಣ್ಯ ಹಕ್ಕು ಕಾಯಿದೆಯ ಅರ್ಜಿ ವಿಲೇವಾರಿ ಆಗದ ಪ್ರಕರಣಗಳ ಹೊರತಾಗಿ ದೊಡ್ಡ ಅರಣ್ಯ ಒತ್ತುವರಿ ತೆರವು ಮಾಡಿಸಲು ಸ್ಪಷ್ಟ ಆದೇಶ ನೀಡಲಾಗಿದೆ. ಇದು ಸಂವಿಧಾನದ 41(ಎ) ಮತ್ತು 51(ಎ) ಆಶಯಗಳಿಗೆ ಅನುಗುಣವಾಗಿದೆ ಎಂದು ಹೇಳಿದರು.ಇದನ್ನೂ ಓದಿ: ವಾಲ್ಮೀಕಿ ಹಗರಣದ ಇಡಿ ಚಾರ್ಜ್‌ಶೀಟ್‌ ಬಗ್ಗೆ ಕೋರ್ಟ್ ತೀರ್ಮಾನ ಮಾಡುತ್ತದೆ: ಸಿಎಂ

ಕಸ್ತೂರಿ ರಂಗನ್ ವರದಿ ಮಾಸಾಂತ್ಯದೊಳಗೆ ರಾಜ್ಯದ ಅಭಿಪ್ರಾಯ ಸಲ್ಲಿಕೆ ಪಶ್ಚಿಮಘಟ್ಟ ಹಲವು ನದಿಗಳ ಮೂಲವಷ್ಟೇ ಅಲ್ಲದೆ, ಸಸ್ಯ ಸಂಕುಲ, ಪ್ರಾಣಿ ಸಂಕುಲ, ಕೀಟ ಸಂಕುಲ, ಪಕ್ಷಿ ಸಂಕುಲದ ನೆಲೆಯಾಗಿದೆ. ಇದರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಇದೇ ಸೆ.19ರಂದು ಪಶ್ಚಿಮಘಟ್ಟ ವ್ಯಾಪ್ತಿಯ ಬಾಧ್ಯಸ್ಥರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಬೇಕು. ನಂತರ ಸಚಿವ ಸಂಪುಟದ ಉಪ ಸಮಿತಿ ಸಭೆಯಲ್ಲಿ ಚರ್ಚಿಸಿ, ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಬೇಕು. ನಂತರ ಸಚಿವ ಸಂಪುಟದ ಅನುಮೋದನೆ ಪಡೆದುಕೊಳ್ಳಬೇಕು. ಪಶ್ವಿಮಘಟ್ಟದ ಜೀವವೈವಿಧ್ಯ, ಜನರ ಜೀವನೋಪಾಯ ಎರಡೂ ಇರುವ ರೀತಿಯಲ್ಲಿ ಕೇಂದ್ರ ಸರ್ಕಾರಕ್ಕೆ ನಮ್ಮ ರಾಜ್ಯದ ನಿಲುವು ತಿಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

TAGGED:bengalurueshwar khandreforest departmentಅರಣ್ಯ ಇಲಾಖೆಈಶ್ವರ ಖಂಡ್ರೆಬೆಂಗಳೂರು
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Surat Women Use ChatGPT For Suicide In Temple Washroom Elon Musk Reacts
Latest

ಚಾಟ್‌ಜಿಪಿಟಿಯಲ್ಲಿ ಸರ್ಚ್‌ ಮಾಡಿ ಗುಜರಾತ್‍ನ ಇಬ್ಬರು ಯುವತಿಯರು ಆತ್ಮಹತ್ಯೆ – ʻಅಯ್ಯೋʼ ಎಂದ ಮಸ್ಕ್‌

Public TV
By Public TV
9 minutes ago
Haveri Maize Fire
Crime

ಮೆಕ್ಕೆಜೋಳ ರಾಶಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು – 4 ಲಕ್ಷ ರೂ. ಮೌಲ್ಯದ ಜೋಳ ಸುಟ್ಟು ಭಸ್ಮ

Public TV
By Public TV
12 minutes ago
Mysuru SP
Crime

8 ಕೆಜಿ ಚಿನ್ನ‌ ದರೋಡೆ ಕೇಸ್‌ – ಚಿನ್ನ‌ ರಿಕವರಿ ಕಷ್ಟ ಎಂದ ಮೈಸೂರು ಎಸ್ಪಿ

Public TV
By Public TV
17 minutes ago
Jai Shankar
Latest

ಇರಾನ್, ಇಸ್ರೇಲ್ ಯುದ್ಧ – ಸಂಕಷ್ಟಕ್ಕೀಡಾದ ಭಾರತೀಯರ ರಕ್ಷಣೆಗೆ ಕೇಂದ್ರ ಬದ್ಧ: ಜೈಶಂಕರ್

Public TV
By Public TV
53 minutes ago
Kodagu Wild Elephant Attack Woman Death
Districts

ಹಾಡಹಗಲೇ ಕಾಡಾನೆ ದಾಳಿ – ಮಹಿಳೆ ಸಾವು

Public TV
By Public TV
59 minutes ago
CRIME
Chamarajanagar

ಚಿನ್ನದಾಸೆಗೆ ಒಂಟಿ ವೃದ್ಧೆ ಕೊಲೆ ಶಂಕೆ; ಚಿನ್ನದ ಸರ, ಓಲೆ, ಹಣ ಕಳವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?