ಎಟಿಎಂನಲ್ಲಿ ಹಣ ಕದಿಯಲು ಯತ್ನ – ರೆಡ್ ಹ್ಯಾಂಡ್ ಆಗಿ ಕಳ್ಳನನ್ನು ಹಿಡಿದ ಪೊಲೀಸರು

Public TV
1 Min Read
bdr police collage

ಬೀದರ್: ಎಟಿಎಂ ಒಡೆದು ದರೋಡೆ ಮಾಡಲು ಯತ್ನಿಸಿದ ಕಳ್ಳನನ್ನು ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದು ಕಾರ್ಯಚರಣೆ ಯಶಸ್ವಿಗೊಳಿಸಿದ ಘಟನೆ ಇಂದು ನಸುಕಿನ ಜಾವ ನಡೆದಿದೆ.

ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ಶಹಾಪುರ ಮಸೀದಿ ಮುಖ್ಯ ರಸ್ತೆಯಲ್ಲಿರುವ ಆಕ್ಸಿಸ್ ಬ್ಯಾಂಕ್‍ನ ಎಟಿಎಂ ಒಡೆದು ದರೋಡೆ ಮಾಡಲು ಯತ್ನ ಮಾಡಿದ್ದಾನೆ. ಇಂದು ಬೆಳಗ್ಗಿನ ಜಾವ ಎಟಿಎಂಗೆ ನುಗ್ಗಿದ ಕಳ್ಳ ಯಂತ್ರ ಒಡೆಯಲು ತೊಡಿಗಿದ್ದನು. ಎಟಿಎಂ ಯಂತ್ರ ಒಡೆಯುವ ವೇಳೆ ಬ್ಯಾಂಕ್‍ನ ಮುಖ್ಯ ಕಚೇರಿಗೆ ಸಂದೇಶ ರವಾನೆಯಾಗಿದೆ.

bdr atm theft

ಸಂದೇಶ ರವಾನೆ ಆಗುತ್ತಿದ್ದಂತೆ ತಕ್ಷಣ ಎಚ್ಚೆತ್ತ ಬ್ಯಾಂಕ್ ಸಿಬ್ಬಂದಿ ನಗರ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ಬಂದ ಕೂಡಲೆ ಕಾರ್ಯಪ್ರವರ್ತರಾದ ಸಿಪಿಐ ಮಲ್ಲಿಕಾರ್ಜುನ ಯಾತನೂರ ಹಾಗೂ ಪಿಎಸ್‍ಐ ಸುನಿಲಕುಮಾರ ನೇತೃತ್ವದ ಪೊಲೀಸರ ತಂಡ ತಕ್ಷಣ ಸ್ಥಳಕ್ಕೆ ಧಾವಿಸಿ ಕಳ್ಳನನ್ನು ರೆಡ್ ಹ್ಯಾಂಡ್ ಆಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಸವಕಲ್ಯಾಣ ನಗರ ನಿವಾಸಿ ಶ್ರೀಕಾಂತ ಮಲ್ಲಿಕಾರ್ಜುನ ಸ್ವಾಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳವು ಮಾಡಲು ಯತ್ನಿಸಿದ ವ್ಯಕ್ತಿ ಮದ್ಯದ ಅಮಲಿನಲ್ಲಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *