ರಾಯಚೂರು: ಪುಲ್ವಾಮಾದಲ್ಲಿ ನಡೆದ ಸೈನಿಕರ ಹತ್ಯೆಯನ್ನ ಸಂಭ್ರಮಿಸಿ ಕೇಕೆ ಹಾಕಿದ ಘಟನೆ ರಾಯಚೂರಿನ ಮಸ್ಕಿ ತಾಲೂಕಿನ ತಲೆಖಾನ್ ಗ್ರಾಮದಲ್ಲಿ ನಡೆದಿದೆ.
ಕೆಲ ಕಿಡಿಗೇಡಿ ಮುಸ್ಲಿಂ ಯುವಕರು ತಡರಾತ್ರಿ ಪರಸ್ಪರ ಹಸಿರು ಬಣ್ಣ ಎರಚಾಡಿಕೊಂಡು, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ವಿಚಾರ ಗ್ರಾಮಸ್ಥರಿಗೆ ತಿಳಿದು ಸ್ಥಳಕ್ಕೆ ಬರುವಷ್ಟರಲ್ಲಿ ಯುವಕರು ಅಲ್ಲಿಂದ ಪರಾರಿಯಾಗಿದ್ದಾರೆ.
ಘಟನೆ ಖಂಡಿಸಿರುವ ಗ್ರಾಮಸ್ಥರು ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಘಟನೆಯನ್ನು ಖಂಡಿಸಿ ಮಸ್ಕಿಯಲ್ಲಿ ವಿವಿಧ ಸಂಘಟನೆಗಳಿಂದ ಬೈಕ್ ರ್ಯಾಲಿ ನಡೆಸಿದ್ದಾರೆ. ಅಲ್ಲದೇ ಯೋಧರ ಸಾವನ್ನು ಸಂಭ್ರಮಿಸಿದ ಯುವಕರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.
ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿರುವ ಗ್ರಾಮಸ್ಥರ ಬಳಿ ಪೊಲೀಸರು ಹೆಚ್ಚಿನ ಮಾಹಿತಿ ಸಂಗ್ರಹಿಸಿದ್ದು, 15ಕ್ಕೂ ಹೆಚ್ಚು ಕಿಡಿಗೇಡಿಗಳು ಕೃತ್ಯ ನಡೆಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಯುವಕರು ಸಂಭ್ರಮಾಚರಣೆ ನಡೆಸಿರುವ ಗುರುತಾಗಿ ಸ್ಥಳದಲ್ಲಿ ಹಸಿರು ಬಣ್ಣ ಮತ್ತು ಪಟಾಕಿ ಬಾಕ್ಸ್ ಕೂಡ ಪತ್ತೆಯಾಗಿದೆ. ವಿಜಯೋತ್ಸವ ಆಚರಣೆ ಮಾಡಿ ಸಮಾಜದಲ್ಲಿ ಕೋಮುಗಲಭೆ ಉಂಟಾಗುವಂತೆ ಮಾಡುವ ಕಾರ್ಯ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv