ಲಂಚ ಪಡೆಯುತ್ತಿದ್ದಾಗಲೇ ಎಸಿಬಿ ಬಲೆಗೆ ಬಿದ್ದ ಪೊಲೀಸ್ ಪೇದೆ

Public TV
1 Min Read
smg police pede

ಶಿವಮೊಗ್ಗ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಣಿಕೆಯಲ್ಲಿ ಕೆಲವು ಪೊಲೀಸರು ಶಾಮೀಲಾಗಿದ್ದಾರೆ ಎಂಬ ಆರೋಪ ಈ ಹಿಂದಿನಿಂದಲೂ ಕೇಳಿ ಬಂದಿತ್ತು. ಈ ಆರೋಪಕ್ಕೆ ಇಂದು ಪೊಲೀಸ್ ಪೇದೆಯೋರ್ವ ಎಸಿಬಿ ಬಲೆಗೆ ಬಿದ್ದಿರುವುದು ಮತ್ತಷ್ಟು ಪುಷ್ಠಿ ನೀಡಿದೆ.

ಹೌದು. ಶಿವಮೊಗ್ಗದಲ್ಲಿ ಇಂದು ಎಸಿಬಿ ಡಿವೈಎಸ್‍ಪಿ ಮನೋಜ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಅಕ್ರಮ ಮರಳು ಸಾಗಾಣಿಕೆಗೆ ಅನುಕೂಲ ಮಾಡಿಕೊಡುವ ಸಂಬಂಧ ವ್ಯಕ್ತಿಯೊಬ್ಬರಿಂದ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದ ಪೊಲೀಸ್ ಪೇದೆಯೋರ್ವನನ್ನು ಎಸಿಬಿ ಅಧಿಕಾರಿಗಳು ಬಲೆಗೆ ಬೀಳಿಸಿದ್ದಾರೆ.

MONEY

ತುಂಗಾನಗರ ಠಾಣೆಯ ಪೇದೆ ನಾರಾಯಣಸ್ವಾಮಿ ಎಸಿಬಿ ಬಲೆಗೆ ಬಿದ್ದ ಪೇದೆ. ದಾಳಿಯಲ್ಲಿ ಎಸಿಬಿ ಡಿವೈಎಸ್‍ಪಿ ಮನೋಜ್‍ಕುಮಾರ್, ಇನ್ಸ್‌ಪೆಕ್ಟರ್ ತಿಪ್ಪೇಸ್ವಾಮಿ ಸೇರಿದಂತೆ ಇತರೆ ಸಿಬ್ಬಂದಿ ಭಾಗಿಯಾಗಿದ್ದರು. ನಾರಾಯಣಸ್ವಾಮಿ ಶಿವಮೊಗ್ಗದ ಟಿಪ್ಪು ನಗರದ ನಿವಾಸಿ ಅಬ್ದುಲ್ ಸಲೀಂ ಬಳಿ ಇಂದು ಗೋಪಾಳ ಬಸ್ ನಿಲ್ದಾಣ ಸಮೀಪ 7 ಸಾವಿರ ರೂ. ಲಂಚ ಪಡೆಯುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಲಂಚ ಪಡೆಯುತ್ತಿದ್ದ ಪೇದೆಯನ್ನು ಹಾಗೂ ಲಂಚದ ಹಣವನ್ನು ವಶಕ್ಕೆ ಪಡೆದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *