ಬೈಕ್ ನಿಯಂತ್ರಣ ತಪ್ಪಿ ಬಿಎಂಟಿಸಿ ಬಸ್ ಚಕ್ರಕ್ಕೆ ಸಿಲುಕಿ ಪೇದೆ ದುರ್ಮರಣ

Public TV
0 Min Read
BANASHANKARI

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಪೊಲೀಸ್ ಪೇದೆ ಮೃತಪಟ್ಟ ಘಟನೆ ಬೆಂಗಳೂರಿನ ಬನಶಂಕರಿ ಸರ್ಕಲ್ ಬಳಿ ನಡೆದಿದೆ.

ಸಿದ್ದು ಬೈರವಾಡಿಗೆ ಮೃತ ಪೇದೆಯಾಗಿದ್ದು, ಇವರು ವಿಜಯಪುರ ಮೂಲದವರಾಗಿದ್ದಾರೆ. 2016 ರ ಬ್ಯಾಚ್‍ನ ಸಿದ್ದು ಅವರು ಜಯನಗರದಲ್ಲಿ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಎಂದಿನಂತೆ ತನ್ನ ಕೆಲಸ ಮುಗಿಸಿ ಸಾರಕ್ಕಿಯ ಮನೆಗೆ ತೆರಳುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿದೆ. ಹೀಗಾಗಿ ಬೈಕ್ ನಿಂದ ಕೆಳಗೆ ಬಿದ್ದ ಇವರ ಮೇಲೆ ಬಿಎಂಟಿಸಿ ಬಸ್ ಹರಿದಿದೆ. ಪರಿಣಾಮ ಬಸ್ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.

ಈ ಸಂಬಂಧ ಬನಶಂಕರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *