ಲಕ್ನೋ: ಗ್ಯಾಂಗ್ಸ್ಟರ್ ಹಾಗೂ ರಾಜಕಾರಣಿ ಅತಿಕ್ ಅಹ್ಮದ್ನನ್ನು (Atiq Ahmed) ಉತ್ತರ ಪ್ರದೇಶಕ್ಕೆ (Uttar Pradesh) ಸ್ಥಳಾಂತರಿಸುವಾಗ ಬೆಂಗಾವಲು ವಾಹನಕ್ಕೆ (Vehicle) ಹಸುವೊಂದು (Cow) ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಉತ್ತರ ಪ್ರದೇಶದ ಶಿವಪುರಿಯಲ್ಲಿ ಬೆಂಗಾವಲು ಪಡೆ ಪ್ರಯೋಜ್ರಾಜ್ಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಅಪಘಾತದ ನಂತರ ಹಸು ಸ್ಥಳದಲ್ಲೇ ಸಾವನ್ನಪ್ಪಿದೆ.
ಅತಿಕ್ ಅಹ್ಮದ್ ಅವರನ್ನು ಗುಜರಾತ್ನ ಸಬರಮತಿ ಜೈಲಿನಿಂದ ಹೊರಗೆ ಕರೆದೊಯ್ಯಲಾಯಿತು. ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳ ನಡುವೆ ಸೋಮವಾರ ಸಂಜೆಯೊಳಗೆ ಪ್ರಯಾಗ್ರಾಜ್ ತಲುಪಲಿದೆ.
ಅತಿಕ್ ಅಹ್ಮದ್ನ ಜೈಲಿನಲ್ಲಿದ್ದಾಗ ರಿಯಲ್ ಎಸ್ಟೇಟ್ ಉದ್ಯಮಿ ಮೋಹಿತ್ ಜೈಸ್ವಾಲ್ ಅವರನ್ನು ಅಪಹರಿಸಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ʻಫುಟ್ಬಾಲ್ʼ ಚಿಹ್ನೆ ತೆಗೆದುಕೊಂಡ ಕಥೆ ವಿವರಿಸಿದ ಜನಾರ್ದನ ರೆಡ್ಡಿ
OMG #AtiqAhmed ‘s vehicle narrowly escaped from being overturned as a Cow collided with the vehicle as soon as it entered Shivpuri area. Cow has reportedly died…… how ominous this man is, wherever he goes, brings only killings. pic.twitter.com/Bt3GtM1UZo
— Oxomiya Jiyori ???????? (@SouleFacts) March 27, 2023
ಇತ್ತೀಚೆಗೆ ಉಮೇಶ್ ಪಾಲ್ ಹತ್ಯೆ ಪ್ರಕರಣ ಸೇರಿದಂತೆ 100ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ಈತನ ಹೆಸರಿದೆ. ಈ ವರ್ಷ ಫೆಬ್ರವರಿ 24 ರಂದು ಪ್ರಯಾಗ್ರಾಜ್ನಲ್ಲಿರುವ ಅವರ ನಿವಾಸದ ಹೊರಗೆ ಉಮೇಶ್ ಪಾಲ್ನನ್ನು ಗುಂಡಿಕ್ಕಿ ಕೊಲ್ಲಲಾಯಿತು. ಇದನ್ನೂ ಓದಿ: ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಅರ್ಜಿ ವಜಾ: ಯಾವುದೇ ಕ್ಷಣದಲ್ಲಿ ಬಂಧನ