Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕ-ಗೋವಾ ಗಡಿಯಲ್ಲಿ ಅಬಕಾರಿ ಇಲಾಖೆ, ಪೊಲೀಸರ ಮುನಿಸು – 10 ದಿನದಿಂದ ಸಿಬ್ಬಂದಿ ನಿಯೋಜಿಸದ ಪೊಲೀಸ್ ಇಲಾಖೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕರ್ನಾಟಕ-ಗೋವಾ ಗಡಿಯಲ್ಲಿ ಅಬಕಾರಿ ಇಲಾಖೆ, ಪೊಲೀಸರ ಮುನಿಸು – 10 ದಿನದಿಂದ ಸಿಬ್ಬಂದಿ ನಿಯೋಜಿಸದ ಪೊಲೀಸ್ ಇಲಾಖೆ

Latest

ಕರ್ನಾಟಕ-ಗೋವಾ ಗಡಿಯಲ್ಲಿ ಅಬಕಾರಿ ಇಲಾಖೆ, ಪೊಲೀಸರ ಮುನಿಸು – 10 ದಿನದಿಂದ ಸಿಬ್ಬಂದಿ ನಿಯೋಜಿಸದ ಪೊಲೀಸ್ ಇಲಾಖೆ

Public TV
Last updated: November 15, 2024 10:41 am
Public TV
Share
3 Min Read
karwar checkpost
SHARE

– ಪ್ರತ್ಯೇಕ ಚೆಕ್‌ಪೋಸ್ಟ್ ತೆರೆಯಲು ಪೊಲೀಸರು ಸಿದ್ಧತೆ

ಕಾರವಾರ: ರಾಜ್ಯದಲ್ಲಿ ಅಬಕಾರಿ ಕಿಕ್‌ಬ್ಯಾಕ್ ಗಲಾಟೆ ತಣ್ಣಗಾಗುವುದರೊಳಗೆ ಕರ್ನಾಟಕ-ಗೋವಾ ಗಡಿಯಲ್ಲಿ ಜಂಟಿ ಕಾರ್ಯಾಚರಣೆ, ತಪಾಸಣೆ ಮಾಡುತ್ತಿದ್ದ ಪೊಲೀಸ್ ಇಲಾಖೆ ಪ್ರತ್ಯೇಕ ಚೆಕ್‌ಪೋಸ್ಟ್ ತೆರೆಯಲು ಮುಂದಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಗೋವಾ ಗಡಿಯಲ್ಲಿರುವ ಅಬಕಾರಿ ಇಲಾಖೆಯ ನೇತೃತ್ವದ, ಜಿಲ್ಲೆಯ ಎರಡು ಸಂಯುಕ್ತ ತನಿಖಾ ಠಾಣೆಗಳಿಂದ ಪೊಲೀಸ್ ಇಲಾಖೆ ಬೇರ್ಪಟ್ಟಿದೆ. ಒಂದೆಡೆ ರಾಜ್ಯದಲ್ಲಿ ಅಬಕಾರಿ ಕಿಕ್‌ಬ್ಯಾಕ್ ಗಲಾಟೆ ಎದ್ದಿದೆ. ಕಾಕತಾಳೀಯ ಎಂಬಂತೆ ಉತ್ತರ ಕನ್ನಡ ಜಿಲ್ಲೆಯಲ್ಲೂ ಅಬಕಾರಿ, ಪೊಲೀಸ್ ನಡುವೆ ವೈಮನಸ್ಸು ಮೂಡಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರವಾರ ತಾಲೂಕಿನ ಮಾಜಾಳಿ, ರಾಷ್ಟ್ರೀಯ ಹೆದ್ದಾರಿ-4ಎ, ಅನಮೋಡದಲ್ಲಿ ಅಬಕಾರಿ ಸಂಯುಕ್ತ ತನಿಖಾ ಠಾಣೆಗೆ ಪೊಲೀಸ್ ಸಿಬ್ಬಂದಿ ನಿಯೋಜನೆಯನ್ನು ಜಿಲ್ಲಾ ಪೊಲೀಸ್ ಇಲಾಖೆ ಸ್ಥಗಿತ ಮಾಡಿದೆ. ಗೋವಾ ಗಡಿಯ ಮಾಜಾಳಿ ಹಾಗೂ ರಾಮನಗರದ ಅನಮೋಡದಲ್ಲಿ ಅಕ್ರಮ ಗೋವಾ ಮದ್ಯ ಸಾಗಾಟ ಹೆಚ್ಚಾಗಿದೆ. ಅಬಕಾರಿ ಸಿಬ್ಬಂದಿ ಮಾಡುವ ತಪ್ಪುಗಳು ಪೊಲೀಸ್ ಇಲಾಖೆ ಮೇಲೂ ಬರುತ್ತಿದೆ. ಮಾದಕ ವಸ್ತುಗಳ ಬಗ್ಗೆ ಹಾಗೂ ಅಪರಾಧಿಗಳ ವಾಹನ ಟ್ರಾö್ಯಕಿಂಗ್‌ಗೂ ಅಬಕಾರಿ ಇಲಾಖೆಯನ್ನು ಆಶ್ರಯಿಸಬೇಕಿದೆ. ಈ ಕಾರಣ ಹೆಚ್ಚಿನ ತಪಾಸಣೆ ನಿಗಾ ಇಡಲು, ಪೊಲೀಸ್ ಇಲಾಖೆ ಈಗಿರುವ ಚೆಕ್‌ಪೋಸ್ಟ್ನಿಂದ ಪ್ರತ್ತೇಕವಾಗಿ ಇನ್ನೊಂದು ತಿಂಗಳಲ್ಲಿ ಚೆಕ್‌ಪೋಸ್ಟ್ ನಿರ್ಮಿಸಿ ಪ್ರತ್ಯೇಕ ತನಿಖೆ ಮತ್ತು ತಪಾಸಣೆ ಕೈಗೊಳ್ಳಲಿದೆ.

ಕೆಲ ದಿನಗಳ ಹಿಂದೆ ಮಾಜಾಳಿಯ ತನಿಖಾ ಠಾಣೆಯಲ್ಲಿ ಅಕ್ರಮ ಮದ್ಯ ತಪಾಸಣೆಯ ನೆಪದಲ್ಲಿ ಅಬಕಾರಿ ಇನ್‌ಸ್ಪೆಕ್ಟರ್ ಚಾಲಕನೊಬ್ಬನ ಮೇಲೆ ಹಲ್ಲೆ ನಡೆಸಿದ ವೀಡಿಯೋ ವೈರಲ್ ಆಗಿತ್ತು. ಅಬಕಾರಿ ಇನ್‌ಸ್ಪೆಕ್ಟರ್ ಸದಾಶಿವ ಕೊರ್ತಿ ಹಾಗೂ ಸಿಬ್ಬಂದಿ ಹೇಮಚಂದ್ರ ವಿರುದ್ಧ ಚಿತ್ತಾಕುಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ರಾಜ್ಯ ಲಾರಿ ಮಾಲೀಕರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಅಬಕಾರಿ ಇನ್‌ಸ್ಪೆಕ್ಟರ್ ಹಾಗೂ ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು. ಈ ಘಟನೆಯ ನಂತರ ಮಾಜಾಳಿಯಲ್ಲಿ ಅಬಕಾರಿ, ಪೊಲೀಸರ ನಡುವೆ ವೈಮನಸ್ಸು ಮೂಡಿತ್ತು.

ದೇಶದ ಇತರ ವಿವಿಧ ರಾಜ್ಯಗಳಿಗೆ ಹೋಲಿಸಿದರೆ ಗೋವಾದಲ್ಲಿ ಮದ್ಯದ ಮೇಲಿನ ಸುಂಕ ಅತಿ ಕಡಿಮೆ ಇದೆ. ಇದರಿಂದ ಗೋವಾದಿಂದ ರಸ್ತೆ, ರೈಲು ಹಾಗೂ ಜಲ ಮಾರ್ಗವಾಗಿ ದೊಡ್ಡ ಪ್ರಮಾಣದಲ್ಲಿ ಮದ್ಯ ಕರ್ನಾಟಕ ಸೇರಿ ಬೇರೆ ರಾಜ್ಯಗಳಿಗೆ ಸಾಗಣೆಯಾಗುತ್ತವೆ. ಪರಿಣಾಮ ಕರ್ನಾಟಕದ ಮದ್ಯದ ಆದಾಯದ ಮೇಲೆ ಭಾರಿ ಹೊಡೆತ ಬೀಳುತ್ತಿರುವ ಆರೋಪವಿದೆ. ಇದರ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ ಅವರು ಎರಡು ಬಾರಿ ಸಭೆ ನಡೆಸಿ ಅಕ್ರಮ ತಡೆಗೆ ಕಟ್ಟುನಿಟ್ಟಿನ ಸೂಚನೆಯನ್ನು ಅಬಕಾರಿ ಅಧಿಕಾರಿಗಳಿಗೆ ನೀಡಿದ್ದರು. ಪ್ರಮುಖವಾಗಿ ರಾಷ್ಟ್ರೀಯ ಹೆದ್ದಾರಿ-66 ಹಾಗೂ 4-ಎದಲ್ಲಿರುವ ಮಾಜಾಳಿ ಹಾಗೂ ಅನಮೋಡ ತನಿಖಾ ಠಾಣೆಗಳಲ್ಲಿ ಅಕ್ರಮ ಗೋವಾ ಮದ್ಯ ತುಂಬಿದ ಲಾರಿ, ಬಸ್‌ಗಳು, ದುಬಾರಿ ಕಾರುಗಳು ಸಿಕ್ಕಿ ಹಾಕಿಕೊಳ್ಳುತ್ತವೆ. ಚೆಕ್‌ಪೋಸ್ಟ್‌ನಲ್ಲಿ ಅಕ್ರಮ ಮದ್ಯ ತಡೆಯುವ ನೆಪದಲ್ಲಿ ಕ್ಯಾಮೆರಾ ಕಣ್ಣು ತಪ್ಪಿಸಿ, ಭಾರಿ ಪ್ರಮಾಣದ ಗೋಲ್‌ಮಾಲ್ ನಡೆಯುತ್ತೆ ಎಂಬ ಆರೋಪ ಮೊದಲಿನಿಂದಲೂ ಕೇಳಿ ಬರುತ್ತಿದೆ. ಈ ತನಿಖಾ ಠಾಣೆಗಳು ಚಿನ್ನದ ಮೊಟ್ಟೆ ಇಡುವ ಕೋಳಿ ಎಂಬ ಸುದ್ದಿ ಪೊಲೀಸ್ ಹಾಗೂ ಅಬಕಾರಿ ಇಲಾಖೆ ವಲಯದಲ್ಲಿದೆ. ಇಲ್ಲಿಗೆ ಕರ್ತವ್ಯಕ್ಕೆ ನೇಮಕ ಮಾಡಿಸಿಕೊಳ್ಳಲು ಎರಡೂ ಇಲಾಖೆಯಲ್ಲಿ ಭಾರಿ ಪೈಪೋಟಿ ನಡೆಯುತ್ತಿತ್ತು. ಆದರೆ, ಇದೀಗ ಈ ಎಲ್ಲಾ ಕಾರಣಗಳು ಅಬಕಾರಿ ಇಲಾಖೆಯಿಂದ ಪೊಲೀಸ್ ಇಲಾಖೆ ಬೇರ್ಪಡಲು ಪ್ರಮುಖ ಕಾರಣವಾಗಿದೆ.

ಕಳೆದ 10 ದಿನಗಳಿಂದ ಮಾಜಾಳಿ ಹಾಗೂ ಅನಮೋಡ ತನಿಖಾ ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯಕ್ಕೆ ಪೊಲೀಸ್ ಇಲಾಖೆ ನಿಯೋಜಿಸಿಲ್ಲ. ಕಳೆದ ಐದು ವರ್ಷದ ಹಿಂದೆ ಚೆಕ್‌ಪೋಸ್ಟ್ನಲ್ಲಿ ಲಕ್ಷಾಂತರ ಹಣ ವ್ಯಯಿಸಿ, ನವೀಕರಿಸಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಕೊಠಡಿಗಳನ್ನು ನಿರ್ಮಾಣ ಮಾಡಲಾಗಿತ್ತು. ಅಬಕಾರಿ, ಅರಣ್ಯ, ಪೊಲೀಸ್, ಗಣಿ ಇಲಾಖೆ ಒಟ್ಟಾಗಿ ಹಿಂದಿನಿಂದ ಇಲ್ಲಿ ಕೆಲಸ ಮಾಡುತ್ತಾ ಬಂದಿವೆ. ಹೀಗಿರುವಾಗ ಇತ್ತೀಚೆಗೆ ನಡೆದ ಬೆಳವಣಿಗೆಯಿಂದ ಪೊಲೀಸ್ ಇಲಾಖೆ ತನ್ನದೇ ಪ್ರತ್ಯೇಕ ತನಿಖಾ ಠಾಣೆ ನಿರ್ಮಿಸಲು ಮುಂದಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

TAGGED:excise departmentKarnataka-Goa Borderkarwarpolice departmentಅಬಕಾರಿ ಇಲಾಖೆಕರ್ನಾಟಕ-ಗೋವಾ ಗಡಿಕಾರವಾರಪೊಲೀಸ್ ಇಲಾಖೆ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Vijayapura Car Accident
Crime

ಕಾರು ಪಲ್ಟಿಯಾಗಿ ಅವಘಡ – ಶ್ರೀಶೈಲಕ್ಕೆ ಹೋಗ್ತಿದ್ದ ಇಬ್ಬರು ದುರ್ಮರಣ

Public TV
By Public TV
16 minutes ago
Assam Election Fear of Operation Kamala Congress MLAs shift to Bidadi Wonderla Resort Bengaluru 1
Bengaluru City

ಕ್ರಾಸ್‌ ವೋಟ್‌ ಭೀತಿ – ಒಡಿಶಾ ಕೈ ಶಾಸಕರು ಬಿಡದಿ ರೆಸಾರ್ಟ್‌ಗೆ ಶಿಫ್ಟ್‌

Public TV
By Public TV
53 minutes ago
Donald Trump 2
Latest

ತೈಲ ಬೆಲೆ ಏರಿಕೆಯಾದರೆ ಅಮೆರಿಕ ಭಾರೀ ಹಣ ಗಳಿಸಲಿದೆ: ಡೊನಾಲ್ಡ್‌ ಟ್ರಂಪ್‌

Public TV
By Public TV
2 hours ago
Tourism War Effect
Bengaluru City

14 ದಿನಗಳಾದ್ರೂ ಕೊನೆಗಾಣದ ಮಧ್ಯಪ್ರಾಚ್ಯ ಯುದ್ಧ – ಪ್ರವಾಸೋದ್ಯಮಕ್ಕೂ ತಟ್ಟಿದ ವಾರ್ ಎಫೆಕ್ಟ್

Public TV
By Public TV
2 hours ago
Pakistan Strikes Afghanistan fuel storage facility Kabul Kandahar
Latest

ಅಫ್ಘಾನಿಸ್ತಾನದ ಮೇಲೆ ಪಾಕ್‌ ಮತ್ತೆ ಏರ್‌ಸ್ಟ್ರೈಕ್‌ – ರಂಜಾನ್ ತಿಂಗಳಿನಲ್ಲೇ ದಾಳಿ ನಡೆಸಿದ್ದಕ್ಕೆ ತಾಲಿಬಾನ್‌ ಕಿಡಿ

Public TV
By Public TV
3 hours ago
Cyber Crime
Bengaluru City

ಡಿಜಿಟಲ್ ಅರೆಸ್ಟ್ ಸುಳಿಯಲ್ಲಿ ಕರ್ನಾಟಕ – 3 ವರ್ಷಕ್ಕೆ ಬರೋಬ್ಬರಿ 468 ಕೋಟಿ ರೂ. ಕಳೆದುಕೊಂಡ ಜನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?