Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕ-ಗೋವಾ ಗಡಿಯಲ್ಲಿ ಅಬಕಾರಿ ಇಲಾಖೆ, ಪೊಲೀಸರ ಮುನಿಸು – 10 ದಿನದಿಂದ ಸಿಬ್ಬಂದಿ ನಿಯೋಜಿಸದ ಪೊಲೀಸ್ ಇಲಾಖೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕರ್ನಾಟಕ-ಗೋವಾ ಗಡಿಯಲ್ಲಿ ಅಬಕಾರಿ ಇಲಾಖೆ, ಪೊಲೀಸರ ಮುನಿಸು – 10 ದಿನದಿಂದ ಸಿಬ್ಬಂದಿ ನಿಯೋಜಿಸದ ಪೊಲೀಸ್ ಇಲಾಖೆ

Latest

ಕರ್ನಾಟಕ-ಗೋವಾ ಗಡಿಯಲ್ಲಿ ಅಬಕಾರಿ ಇಲಾಖೆ, ಪೊಲೀಸರ ಮುನಿಸು – 10 ದಿನದಿಂದ ಸಿಬ್ಬಂದಿ ನಿಯೋಜಿಸದ ಪೊಲೀಸ್ ಇಲಾಖೆ

Public TV
Last updated: November 15, 2024 10:41 am
Public TV
Share
3 Min Read
karwar checkpost
SHARE

– ಪ್ರತ್ಯೇಕ ಚೆಕ್‌ಪೋಸ್ಟ್ ತೆರೆಯಲು ಪೊಲೀಸರು ಸಿದ್ಧತೆ

ಕಾರವಾರ: ರಾಜ್ಯದಲ್ಲಿ ಅಬಕಾರಿ ಕಿಕ್‌ಬ್ಯಾಕ್ ಗಲಾಟೆ ತಣ್ಣಗಾಗುವುದರೊಳಗೆ ಕರ್ನಾಟಕ-ಗೋವಾ ಗಡಿಯಲ್ಲಿ ಜಂಟಿ ಕಾರ್ಯಾಚರಣೆ, ತಪಾಸಣೆ ಮಾಡುತ್ತಿದ್ದ ಪೊಲೀಸ್ ಇಲಾಖೆ ಪ್ರತ್ಯೇಕ ಚೆಕ್‌ಪೋಸ್ಟ್ ತೆರೆಯಲು ಮುಂದಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಗೋವಾ ಗಡಿಯಲ್ಲಿರುವ ಅಬಕಾರಿ ಇಲಾಖೆಯ ನೇತೃತ್ವದ, ಜಿಲ್ಲೆಯ ಎರಡು ಸಂಯುಕ್ತ ತನಿಖಾ ಠಾಣೆಗಳಿಂದ ಪೊಲೀಸ್ ಇಲಾಖೆ ಬೇರ್ಪಟ್ಟಿದೆ. ಒಂದೆಡೆ ರಾಜ್ಯದಲ್ಲಿ ಅಬಕಾರಿ ಕಿಕ್‌ಬ್ಯಾಕ್ ಗಲಾಟೆ ಎದ್ದಿದೆ. ಕಾಕತಾಳೀಯ ಎಂಬಂತೆ ಉತ್ತರ ಕನ್ನಡ ಜಿಲ್ಲೆಯಲ್ಲೂ ಅಬಕಾರಿ, ಪೊಲೀಸ್ ನಡುವೆ ವೈಮನಸ್ಸು ಮೂಡಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರವಾರ ತಾಲೂಕಿನ ಮಾಜಾಳಿ, ರಾಷ್ಟ್ರೀಯ ಹೆದ್ದಾರಿ-4ಎ, ಅನಮೋಡದಲ್ಲಿ ಅಬಕಾರಿ ಸಂಯುಕ್ತ ತನಿಖಾ ಠಾಣೆಗೆ ಪೊಲೀಸ್ ಸಿಬ್ಬಂದಿ ನಿಯೋಜನೆಯನ್ನು ಜಿಲ್ಲಾ ಪೊಲೀಸ್ ಇಲಾಖೆ ಸ್ಥಗಿತ ಮಾಡಿದೆ. ಗೋವಾ ಗಡಿಯ ಮಾಜಾಳಿ ಹಾಗೂ ರಾಮನಗರದ ಅನಮೋಡದಲ್ಲಿ ಅಕ್ರಮ ಗೋವಾ ಮದ್ಯ ಸಾಗಾಟ ಹೆಚ್ಚಾಗಿದೆ. ಅಬಕಾರಿ ಸಿಬ್ಬಂದಿ ಮಾಡುವ ತಪ್ಪುಗಳು ಪೊಲೀಸ್ ಇಲಾಖೆ ಮೇಲೂ ಬರುತ್ತಿದೆ. ಮಾದಕ ವಸ್ತುಗಳ ಬಗ್ಗೆ ಹಾಗೂ ಅಪರಾಧಿಗಳ ವಾಹನ ಟ್ರಾö್ಯಕಿಂಗ್‌ಗೂ ಅಬಕಾರಿ ಇಲಾಖೆಯನ್ನು ಆಶ್ರಯಿಸಬೇಕಿದೆ. ಈ ಕಾರಣ ಹೆಚ್ಚಿನ ತಪಾಸಣೆ ನಿಗಾ ಇಡಲು, ಪೊಲೀಸ್ ಇಲಾಖೆ ಈಗಿರುವ ಚೆಕ್‌ಪೋಸ್ಟ್ನಿಂದ ಪ್ರತ್ತೇಕವಾಗಿ ಇನ್ನೊಂದು ತಿಂಗಳಲ್ಲಿ ಚೆಕ್‌ಪೋಸ್ಟ್ ನಿರ್ಮಿಸಿ ಪ್ರತ್ಯೇಕ ತನಿಖೆ ಮತ್ತು ತಪಾಸಣೆ ಕೈಗೊಳ್ಳಲಿದೆ.

ಕೆಲ ದಿನಗಳ ಹಿಂದೆ ಮಾಜಾಳಿಯ ತನಿಖಾ ಠಾಣೆಯಲ್ಲಿ ಅಕ್ರಮ ಮದ್ಯ ತಪಾಸಣೆಯ ನೆಪದಲ್ಲಿ ಅಬಕಾರಿ ಇನ್‌ಸ್ಪೆಕ್ಟರ್ ಚಾಲಕನೊಬ್ಬನ ಮೇಲೆ ಹಲ್ಲೆ ನಡೆಸಿದ ವೀಡಿಯೋ ವೈರಲ್ ಆಗಿತ್ತು. ಅಬಕಾರಿ ಇನ್‌ಸ್ಪೆಕ್ಟರ್ ಸದಾಶಿವ ಕೊರ್ತಿ ಹಾಗೂ ಸಿಬ್ಬಂದಿ ಹೇಮಚಂದ್ರ ವಿರುದ್ಧ ಚಿತ್ತಾಕುಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ರಾಜ್ಯ ಲಾರಿ ಮಾಲೀಕರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಅಬಕಾರಿ ಇನ್‌ಸ್ಪೆಕ್ಟರ್ ಹಾಗೂ ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು. ಈ ಘಟನೆಯ ನಂತರ ಮಾಜಾಳಿಯಲ್ಲಿ ಅಬಕಾರಿ, ಪೊಲೀಸರ ನಡುವೆ ವೈಮನಸ್ಸು ಮೂಡಿತ್ತು.

ದೇಶದ ಇತರ ವಿವಿಧ ರಾಜ್ಯಗಳಿಗೆ ಹೋಲಿಸಿದರೆ ಗೋವಾದಲ್ಲಿ ಮದ್ಯದ ಮೇಲಿನ ಸುಂಕ ಅತಿ ಕಡಿಮೆ ಇದೆ. ಇದರಿಂದ ಗೋವಾದಿಂದ ರಸ್ತೆ, ರೈಲು ಹಾಗೂ ಜಲ ಮಾರ್ಗವಾಗಿ ದೊಡ್ಡ ಪ್ರಮಾಣದಲ್ಲಿ ಮದ್ಯ ಕರ್ನಾಟಕ ಸೇರಿ ಬೇರೆ ರಾಜ್ಯಗಳಿಗೆ ಸಾಗಣೆಯಾಗುತ್ತವೆ. ಪರಿಣಾಮ ಕರ್ನಾಟಕದ ಮದ್ಯದ ಆದಾಯದ ಮೇಲೆ ಭಾರಿ ಹೊಡೆತ ಬೀಳುತ್ತಿರುವ ಆರೋಪವಿದೆ. ಇದರ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ ಅವರು ಎರಡು ಬಾರಿ ಸಭೆ ನಡೆಸಿ ಅಕ್ರಮ ತಡೆಗೆ ಕಟ್ಟುನಿಟ್ಟಿನ ಸೂಚನೆಯನ್ನು ಅಬಕಾರಿ ಅಧಿಕಾರಿಗಳಿಗೆ ನೀಡಿದ್ದರು. ಪ್ರಮುಖವಾಗಿ ರಾಷ್ಟ್ರೀಯ ಹೆದ್ದಾರಿ-66 ಹಾಗೂ 4-ಎದಲ್ಲಿರುವ ಮಾಜಾಳಿ ಹಾಗೂ ಅನಮೋಡ ತನಿಖಾ ಠಾಣೆಗಳಲ್ಲಿ ಅಕ್ರಮ ಗೋವಾ ಮದ್ಯ ತುಂಬಿದ ಲಾರಿ, ಬಸ್‌ಗಳು, ದುಬಾರಿ ಕಾರುಗಳು ಸಿಕ್ಕಿ ಹಾಕಿಕೊಳ್ಳುತ್ತವೆ. ಚೆಕ್‌ಪೋಸ್ಟ್‌ನಲ್ಲಿ ಅಕ್ರಮ ಮದ್ಯ ತಡೆಯುವ ನೆಪದಲ್ಲಿ ಕ್ಯಾಮೆರಾ ಕಣ್ಣು ತಪ್ಪಿಸಿ, ಭಾರಿ ಪ್ರಮಾಣದ ಗೋಲ್‌ಮಾಲ್ ನಡೆಯುತ್ತೆ ಎಂಬ ಆರೋಪ ಮೊದಲಿನಿಂದಲೂ ಕೇಳಿ ಬರುತ್ತಿದೆ. ಈ ತನಿಖಾ ಠಾಣೆಗಳು ಚಿನ್ನದ ಮೊಟ್ಟೆ ಇಡುವ ಕೋಳಿ ಎಂಬ ಸುದ್ದಿ ಪೊಲೀಸ್ ಹಾಗೂ ಅಬಕಾರಿ ಇಲಾಖೆ ವಲಯದಲ್ಲಿದೆ. ಇಲ್ಲಿಗೆ ಕರ್ತವ್ಯಕ್ಕೆ ನೇಮಕ ಮಾಡಿಸಿಕೊಳ್ಳಲು ಎರಡೂ ಇಲಾಖೆಯಲ್ಲಿ ಭಾರಿ ಪೈಪೋಟಿ ನಡೆಯುತ್ತಿತ್ತು. ಆದರೆ, ಇದೀಗ ಈ ಎಲ್ಲಾ ಕಾರಣಗಳು ಅಬಕಾರಿ ಇಲಾಖೆಯಿಂದ ಪೊಲೀಸ್ ಇಲಾಖೆ ಬೇರ್ಪಡಲು ಪ್ರಮುಖ ಕಾರಣವಾಗಿದೆ.

ಕಳೆದ 10 ದಿನಗಳಿಂದ ಮಾಜಾಳಿ ಹಾಗೂ ಅನಮೋಡ ತನಿಖಾ ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯಕ್ಕೆ ಪೊಲೀಸ್ ಇಲಾಖೆ ನಿಯೋಜಿಸಿಲ್ಲ. ಕಳೆದ ಐದು ವರ್ಷದ ಹಿಂದೆ ಚೆಕ್‌ಪೋಸ್ಟ್ನಲ್ಲಿ ಲಕ್ಷಾಂತರ ಹಣ ವ್ಯಯಿಸಿ, ನವೀಕರಿಸಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಕೊಠಡಿಗಳನ್ನು ನಿರ್ಮಾಣ ಮಾಡಲಾಗಿತ್ತು. ಅಬಕಾರಿ, ಅರಣ್ಯ, ಪೊಲೀಸ್, ಗಣಿ ಇಲಾಖೆ ಒಟ್ಟಾಗಿ ಹಿಂದಿನಿಂದ ಇಲ್ಲಿ ಕೆಲಸ ಮಾಡುತ್ತಾ ಬಂದಿವೆ. ಹೀಗಿರುವಾಗ ಇತ್ತೀಚೆಗೆ ನಡೆದ ಬೆಳವಣಿಗೆಯಿಂದ ಪೊಲೀಸ್ ಇಲಾಖೆ ತನ್ನದೇ ಪ್ರತ್ಯೇಕ ತನಿಖಾ ಠಾಣೆ ನಿರ್ಮಿಸಲು ಮುಂದಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

TAGGED:excise departmentKarnataka-Goa Borderkarwarpolice departmentಅಬಕಾರಿ ಇಲಾಖೆಕರ್ನಾಟಕ-ಗೋವಾ ಗಡಿಕಾರವಾರಪೊಲೀಸ್ ಇಲಾಖೆ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Siddaramaiah 5
Bidar

ಏ.11ಕ್ಕೆ ಬೀದರ್, ಕಲಬುರಗಿಗೆ ಸಿಎಂ ಸಿದ್ದರಾಮಯ್ಯ ಪ್ರವಾಸ

Public TV
By Public TV
31 seconds ago
Delhi Assembly Bomb Threat
Crime

ದೆಹಲಿ ವಿಧಾನಸಭೆಗೆ ಮತ್ತೆ ಬಾಂಬ್ ಬೆದರಿಕೆ

Public TV
By Public TV
33 minutes ago
vinod raj auto drivers
Bengaluru Rural

ಆಟೋ ಚಾಲಕರ ಕಷ್ಟಕ್ಕೆ ಮಿಡಿದ ನಟ ವಿನೋದ್ ರಾಜ್

Public TV
By Public TV
43 minutes ago
Jail
Court

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 7 ಲಕ್ಷ ದಂಡ

Public TV
By Public TV
44 minutes ago
nitish kumar bihar cm oath
Latest

ರಾಜ್ಯಸಭೆ ಸದಸ್ಯರಾಗಿ ಶುಕ್ರವಾರ ನಿತೀಶ್ ಕುಮಾರ್ ಪ್ರಮಾಣ ಸ್ವೀಕಾರ – ಏ.14 ರಂದು ಬಿಹಾರಕ್ಕೆ ನೂತನ ಸಿಎಂ?

Public TV
By Public TV
1 hour ago
congress flag
Latest

ಬಾರಾಮತಿ ಉಪಚುನಾವಣೆ; ಸ್ಪರ್ಧೆಯಿಂದ ಹಿಂದೆ ಸರಿದ ಕಾಂಗ್ರೆಸ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?