ಬೆಂಗಳೂರು: ಕೊಲೆ ಆರೋಪಿಯನ್ನು ಇಂದು ಮುಂಜಾನೆ ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿದ್ದಾನೆ. ಹೀಗಾಗಿ ಪೊಲೀಸರು ಆತನ ಮೇಲೆ ಫೈರಿಂಗ್ ನಡೆಸಿದ್ದಾರೆ.
ರಾಜೇಂದ್ರ ಅಲಿಯಾಸ್ ಬೆಂಕಿ ರಾಜನ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನೆಡದಿದ್ದು, ಆರೋಪಿ ರಾಜೇಂದ್ರ ಕಳೆದ ಭಾನುವಾರ ಸೆಕ್ಯೂರಿಟಿ ಗಾರ್ಡ್ ವೊಬ್ಬರನ್ನು ಬರ್ಬರ ಕೊಲೆ ಮಾಡಿದ್ದನು.
ಇಂದು ಮುಂಜಾನೆ ಪೊಲೀಸರು ಆರೋಪಿ ರಾಜೇಂದ್ರನನ್ನು ಸೆರೆ ಹಿಡಿಯಲು ಯತ್ನಿಸಿದ್ದಾರೆ. ಈ ವೇಳೆ ರಾಜೇಂದ್ರ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾನೆ. ಆತ್ಮರಕ್ಷಣೆಗಾಗಿ ಪೊಲೀಸರು ಆತನ ಕಾಲಿಗೆ ಗುಂಡು ಹೊಡೆದಿದ್ದಾರೆ. ಆರೋಪಿ ರಾಜೇಂದ್ರ ಒಟ್ಟು ಮೂರು ಕೊಲೆ ಕೇಸ್ ನಲ್ಲಿ ಆರೋಪಿಯಾಗಿದ್ದನು.
ಕಳೆದ ಶನಿವಾರ ರಾಜೇಂದ್ರ ಪದ್ಮನಾಭನಗರದ ಮುಖ್ಯರಸ್ತೆಯ ಕರ್ನಾಟಕ ಬ್ಯಾಂಕ್ ಎದುರುಗಡೆ ಸೆಕ್ಯೂರಿಟಿ ಗಾರ್ಡ್ ಲಿಂಗಪ್ಪನನ್ನು ಕೊಲೆ ಮಾಡಿದ್ದನು. ಶನಿವಾರ ತಡರಾತ್ರಿ ಲಿಂಗಪ್ಪ ಮಲಗಿರುವಾಗ ರಾಜೇಂದ್ರ ಆತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿದ್ದನು. ಕೊಲೆ ಮಾಡಿದ ಬಳಿಕ ಆರೋಪಿ ಪರಾರಿಯಾಗಿದ್ದರು.