ಬೆಂಗಳೂರಿನಲ್ಲಿ ರೌಡಿ ಶೀಟರ್ ಮೇಲೆ ಗುಂಡಿನ ದಾಳಿ

Public TV
1 Min Read
police firing collage copy

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರೌಡಿಶೀಟರ್ ಮೇಲೆ ನಂದಿನಿ ಲೇಔಟ್ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಮುನಿರಾಜು ಅಲಿಯಾಸ್ ಮುನ್ನಾ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಗುಂಡು ಹಾರಿಸಿದ ಬಳಿಕ ಆತನನ್ನು ಬಂಧಿಸಿದ್ದಾರೆ. ಕ್ರಿಕೆಟ್ ಆಡುವ ವಿಚಾರಕ್ಕೆ ಮುನಿರಾಜು ಮತ್ತು ಇನ್ನಿಬ್ಬರು ಸಂದೀಪ್ ಹಾಗೂ ಸುದೀಪ್ ಎಂಬವರ ಮೇಲೆ ಹಲ್ಲೆ ಮಾಡಿದ್ದರು.

ಮುನಿರಾಜು, ಸಂದೀಪ್ ಹಾಗೂ ಸುದೀಪ್ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ಐಪಿಸಿ ಸೆಕ್ಷನ್ 307 ಅಡಿ ಪ್ರಕರಣ ದಾಖಲಿಸಿಕೊಂಡಿದ್ದರು. ಈ ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರ ಮೇಲೆಯೇ ಮುನಿರಾಜು ಹಲ್ಲೆಗೆ ಯತ್ನಿಸಿದ್ದಾನೆ.

ಆರೋಪಿ ಮುನಿರಾಜು, ಪಿಸಿ ಬಲರಾಮ್ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಹಾಗಾಗಿ ಆತ್ಮರಕ್ಷಣೆಗಾಗಿ ನಂದಿನಿ ಲೇಔಟ್ ಪೊಲೀಸ್ ಇನ್ಸ್ ಪೆಕ್ಟರ್ ಲೋಹಿತ್ ಅವರು ಆರೋಪಿ ಮುನಿರಾಜು ಮೇಲೆ ಫೈರಿಂಗ್ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *