Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ- ಗ್ಯಾಂಗ್ ಲೀಡರ್ ಮೇಲೆ ಫೈರಿಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ- ಗ್ಯಾಂಗ್ ಲೀಡರ್ ಮೇಲೆ ಫೈರಿಂಗ್

Crime

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ- ಗ್ಯಾಂಗ್ ಲೀಡರ್ ಮೇಲೆ ಫೈರಿಂಗ್

Public TV
Last updated: March 13, 2023 1:16 pm
Public TV
Share
2 Min Read
YADAGIRI FIRING
SHARE

ಯಾದಗಿರಿ: ಪೊಲೀಸರ ಮೇಲೆ ಪಿಸ್ತೂಲ್ ಹಾಗೂ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಡಕಾಯಿತಿ (Robbery) ಗ್ಯಾಂಗ್ ಲೀಡರ್ ಮೇಲೆ ಪೊಲೀಸರು ಫೈರಿಂಗ್ ಮಾಡಿ ಬಂಧಿಸಿರುವ ಘಟನೆ ಯಾದಗಿರಿಯಲ್ಲಿ (Yadgiri) ನಡೆದಿದೆ.

ಆರೋಪಿ ಮಹಮ್ಮದ್ ರಫಿಯನ್ನು ಬಂಧಿಸಲು ಪೊಲೀಸರು ತೆರಳಿದ್ದಾಗ ಆತ ಪಿಸ್ತೂಲ್ ಹಾಗೂ ಚಾಕುವಿನಿಂದ ಹೆದರಿಸಿದ್ದಾನೆ. ಈ ವೇಳೆ ಸಿಪಿಐ ಸುನೀಲ್ ವಿ.ಮೂಲಿಮನಿ, ಪಿಸಿ ಅಬ್ದುಲ್ ಭಾಷ ಹಾಗೂ ಹರಿನಾಥರೆಡ್ಡಿಯವರು ಆರೋಪಿಯನ್ನು ಹಿಡಿಯಲು ಯತ್ನಿಸಿದ್ದಾರೆ. ಆಗ ಆರೋಪಿ ಮೂವರ ಮೇಲೂ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಆತ್ಮರಕ್ಷಣೆಗಾಗಿ ಸಿಪಿಐ ಸುನೀಲ್ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಇದನ್ನೂ ಓದಿ: ಪರೀಕ್ಷಾ ಕೇಂದ್ರದಲ್ಲಿ ಎಡವಟ್ಟು- ಮೊಬೈಲ್ ಕೊಂಡೊಯ್ದು ಸೆಲ್ಫಿ ಕ್ಲಿಕ್ಕಿಸಿದ ಮೇಲ್ವಿಚಾರಕಿ

YADAGIRI FIRING2

ಪ್ರಕರಣದ ಹಿನ್ನೆಲೆ: ಫೆ. 24ರಂದು ಯಾದಗಿರಿ ನಗರದಲ್ಲಿ ಉದ್ಯಮಿ ದೀಪಕ್ ನಂದಕಿಶೋರ್ ಮನೆಯಲ್ಲಿ ಕಳ್ಳತನ ನಡೆದಿತ್ತು. ಎಂಟರಿಂದ ಹತ್ತು ಜನರ ತಂಡದಲ್ಲಿ ನಾಲ್ಕು ಜನ ದೀಪಕ್ ನಂದಕಿಶೋರ್ ಮನೆಯೊಳಗೆ ನುಗ್ಗಿ ಪಿಸ್ತೂಲ್ ತೋರಿಸಿ ಚಿನ್ನ, ಬೆಳ್ಳಿ, ಮೊಬೈಲ್ ಹಾಗೂ ಹಣವನ್ನು ದೋಚಿದ್ದರು.

ದೀಪಕ್ ಕುಟುಂಬಸ್ಥರು ವಿರೋಧಿಸಿದಾಗ ಕಾರದಪುಡಿ ಎರಚಿ ವಿಕೃತಿ ಮರೆದಿದ್ದರು. ಈ ವೇಳೆ ದೀಪಕ್ ಸಹೋದರ ಮನೆಯ ಮಹಡಿಯಿಂದ ಹಾರಿ ಕಿರುಚಾಡಿ ಜನರನ್ನ ಸೇರಿಸಿದ್ದರು. ಜನ ಬರುವಷ್ಟರಲ್ಲಿ ಕಳ್ಳರು ತಪ್ಪಿಸಿಕೊಂಡಿದ್ದರು. ನಗರದ ಪ್ರಮುಖ ಸರ್ಕಲ್ ಬಳಿ ಇರುವ ಸಿಸಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಪೊಲೀಸರಿಗೆ ಸಂಪೂರ್ಣ ಮಾಹಿತಿ ಸಿಕ್ಕಿತ್ತು.

ಪ್ರಕರಣ ಸಂಬಂಧ ಯಾದಗಿರಿ ಎಸ್ಪಿ ಸಿಬಿ ವೇದಮೂರ್ತಿ, ಎಸ್ಪಿ ಸುನೀಲ್ ವಿ ಮೂಲಿಮನಿ ನೇತೃತ್ವದಲ್ಲಿ ಮೂರು ವಿಶೇಷ ತಂಡಗಳನ್ನು ರಚಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದರು.

CRIME 2

ಸತತ 15 ದಿನಗಳ ಕಾಲ ಹೈದ್ರಾಬಾದ್ (Hyderabad), ನಾರಾಯಣಪೇಟೆ ಹಾಗೂ ರಾಯಚೂರು (Raichur) ಜಿಲ್ಲೆಗಳಲ್ಲಿ ಕಾರ್ಯಾಚರಣೆ ಮಾಡಿದ್ದ ಪೊಲೀಸರ ತಂಡ ಭಾನುವಾರ ನಾಲ್ವರು ಆರೋಪಿಗಳನ್ನ ಬಂಧಿಸಿದ್ದರು. ಮಹ್ಮದ್ ಸಾಜೀದ್, ಸೈಯದ್ ಮುಕ್ತಿಯಾರ್, ಮಹೆಬೂಬ್, ಶಹಬಾಜ್ ಹೈಯಾಸ್ ಬಂಧಿತ ಆರೋಪಿಗಳು. ಆದರೆ ಗ್ಯಾಂಗ್ ಲೀಡರ್ ಮಹಮ್ಮದ್ ರಫೀ ಹಾಗೂ ಸಲೀಂ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಳ್ಳುತ್ತಿದ್ದರು.

ಗ್ಯಾಂಗಸ್ಟರ್ ಮಹಮ್ಮದ್ ರಪಿ, ಉದ್ಯಮಿ ದೀಪಕ್ ನಂದಕಿಶೋರ್ ಕಾರ್ ಡ್ರೈವರ್ ಆಗಿ ಕೆಲಸ ಮಾಡಿದ್ದ. ನಂದಕಿಶೋರ್ ಸಿಗರೇಟ್ ಸೇರಿದಂತೆ ಸಗಟು ವ್ಯಾಪಾರದ ವ್ಯಾಪರಸ್ಥನಾಗಿದ್ದ. ಕೆಲ ದಿನಗಳ ಹಿಂದೆ ದೀಪಕ್ ನಂದಕಿಶೋರ್ ಮನೆಯಲ್ಲಿ ಸಿಗರೇಟ್ ಬಾಕ್ಸ್ ಗಳನ್ನ ರಫಿ ಕದ್ದು ಸಿಕ್ಕಿಬಿದ್ದಿದ್ದ. ಆಗ ಪೊಲೀಸರಿಗೆ ದೂರು ನೀಡದೇ ಬುದ್ಧಿ ಹೇಳಿ ಕೆಲಸದಿಂದ ತೆಗೆದಿದ್ದರು. ಇದೇ ಸಿಟ್ಟಿಗೆ ಕಳ್ಳತನದ ಪ್ಲಾನ್ ಮಾಡಿದ್ದ. ಸಲೀಂ ಹಾಗೂ ರಫಿ ಯಾದಗಿರಿ ನಗರದ ವರ್ಕನಳ್ಳಿ ಭಾಗದಲ್ಲಿ ಒಂದೇ ಕಡೆ ಅಡಗಿ ಕುಳಿತಿದ್ದ ಖಚಿತ ಮಾಹಿತಿ ಪಡೆದ ಸಿಪಿಐ ಸುನೀಲ್ ನೇತೃತ್ವದ ತಂಡ ಬೆಳ್ಳಂಬೆಳ್ಳಗ್ಗೆ ದಾಳಿ ನಡೆಸಿದೆ.

ಗಾಯಗೊಂಡಿದ್ದ ಆರೋಪಿಗೆ ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಆರೋಪಿಯ ಪ್ರತಿದಾಳಿಯಲ್ಲಿ ಗಾಯಗೊಂಡ ಪೊಲೀಸರಿಗೂ ಚಿಕಿತ್ಸೆ ನೀಡಲಾಗಿದೆ ಎಂದು ಎಸ್‍ಪಿ ವೇದಮೂರ್ತಿ ತಿಳಿಸಿದ್ದಾರೆ. ಇದನ್ನೂ ಓದಿ: ಹೇ ನಡೀಯಪ್ಪ ನೀನು, ನಮಗೆ ತಲೆ ಬಿಸಿಯಾಗಿದೆ: ಸಿದ್ದರಾಮಯ್ಯ ಇನ್ ಟೆನ್ಶನ್

TAGGED:HyderabadraichurrobberyYadgiriಡಕಾಯತಿನಾರಾಯಣ ಪೇಟೆಯಾದಗಿರಿರಾಯಚೂರುಹೈದರಾಬಾದ್
Share This Article
Facebook Whatsapp Whatsapp Telegram

Cinema news

bigg boss hindi
ಬಿಗ್‌ ಬಾಸ್ ಈ ವಾರ ಫಿನಾಲೆ; ಕ್ಯೂರಿಯಾಸಿಟಿ ಹೆಚ್ಚಿಸಿದ ಗೆಲ್ಲೋರ ಪಟ್ಟಿ
Cinema Latest Top Stories TV Shows
yash 4
ರಾಕಿಂಗ್‌ ಸ್ಟಾರ್‌ ಯಶ್ ಈಗ ಶೋಧಿತ ವ್ಯಕ್ತಿ – ದಾಖಲೆಗಳು ವಶಕ್ಕೆ
Cinema Latest Main Post Sandalwood
Rachita Ram
ಸೀರೆಯಲ್ಲಿ ಬೊಂಬೆಯಂತೆ ಮಿಂಚಿದ ರಚ್ಚು!
Cinema Latest Sandalwood South cinema Top Stories
Sholay The Final Cut
ಶೋಲೆಗೆ 50ರ ಸಂಭ್ರಮ – ಪ್ರೇಕ್ಷಕರ ಮುಂದೆ 4Kಯಲ್ಲಿ ಬರಲಿದೆ ರಿಯಲ್‌ ಕ್ಲೈಮ್ಯಾಕ್ಸ್‌!
Bollywood Cinema Latest Top Stories

You Might Also Like

Parappana agrahara
Bengaluru City

ಸಿಗರೇಟ್‌ ಪ್ಯಾಕ್‌, ಮಾದಕ ವಸ್ತು ಪತ್ತೆ – ಪರಪ್ಪನ ಅಗ್ರಹಾರ ಜೈಲು ವಾರ್ಡರ್ ಅರೆಸ್ಟ್

Public TV
By Public TV
32 minutes ago
Donald Trump 1 1
Latest

ಪುಟಿನ್‌ಗೆ ಭಾರತದಲ್ಲಿ ಭವ್ಯ ಸ್ವಾಗತ – ಟ್ರಂಪ್‌ಗೆ ನೊಬೆಲ್‌ ಸಿಗಬೇಕು: ಪೆಂಟಗನ್‌ ನಿವೃತ್ತ ಅಧಿಕಾರಿ ವ್ಯಂಗ್ಯ

Public TV
By Public TV
35 minutes ago
Indian Railways rajdhani express
Bengaluru City

ಇಂಡಿಗೋ ಸಮಸ್ಯೆ| ಬೆಂಗಳೂರಿನಿಂದ ಹೊರಡುವ ಎಕ್ಸ್‌ಪ್ರೆಸ್‌ ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಕೆ

Public TV
By Public TV
1 hour ago
Chikkaballapura 2
Chikkaballapur

ಪ್ರೀತಿಯ ವಿಚಾರಕ್ಕೆ ಯುವಕನ ಬರ್ಬರ ಹತ್ಯೆ – ಪೊಲೀಸ್ ಠಾಣೆ ಕೂಗಳತೆ ದೂರದಲ್ಲೇ ಮರ್ಡರ್!

Public TV
By Public TV
1 hour ago
Good news for Silk Road passengers Double decker flyover to open to traffic on another side in January 2
Bengaluru City

ಸಿಲ್ಕ್ ಬೋರ್ಡ್ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ಶೀಘ್ರದಲ್ಲೇ ಕಡಿಮೆಯಾಗಲಿದೆ ಟ್ರಾಫಿಕ್ ಬಿಸಿ

Public TV
By Public TV
2 hours ago
Indigo 6
Bengaluru City

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ – 5ನೇ ದಿನವೂ ಪ್ರಯಾಣಿಕರ ಪರದಾಟ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?