ಬೆಂಗಳೂರು: ಕಾಂಗ್ರೆಸ್ ಯುವ ಅಧ್ಯಕ್ಷನ ಕೊಲೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿದ್ದಾರೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ದೊಡ್ಡಜಾಲ ಸಮೀಪ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದಾಗ ಈ ಘಟನೆ ನಡೆದಿದೆ.
ಮನೋಜ್ ಅಲಿಯಾಸ್ ಕೆಂಚ ಮತ್ತು ಮಂಜೇಗೌಡ ಬಂಧಿತ ಆರೋಪಿಗಳು. ಚಿಕ್ಕಚಾಲ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಇವರನ್ನು ಖಚಿತ ಮಾಹಿತಿ ಮೇರೆಗೆ ವಿದ್ಯಾರಣ್ಯಪುರ ಹಾಗೂ ಯಲಹಂಕ ಪೊಲೀಸರು ಬುಧವಾರ ಬೆಳಗ್ಗೆ ಬಂಧಿಸಲು ಮುಂದಾಗಿದ್ದರು. ಈ ವೇಳೆ ಆರೋಪಿಗಳು ತಮ್ಮ ಬಳಿ ಇದ್ದ ಮಾರಕಾಸ್ತ್ರಗಳಿಂದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಾರೆ. ಆತ್ಮರಕ್ಷಣೆಗಾಗಿ ಯಲಹಂಕ ಪೊಲೀಸರು ಇಬ್ಬರು ಆರೋಪಿಗಳ ಮೇಲೆ ಫೈರಿಂಗ್ ನಡೆಸಿದ್ದಾರೆ.
ಆರೋಪಿ ಮನೋಜ್ ಅಲಿಯಾಸ್ ಕೆಂಚನ ಕಾಲಿಗೆ ಗುಂಡು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಅಳ್ಳಾಲಸಂದ್ರದ ಕಾಂಗ್ರೆಸ್ ಯುವ ಅಧ್ಯಕ್ಷ ಅರುಣ್ ಕುಮಾರ್ ನನ್ನು ಕೊಲೆ ಪ್ರಕರಣದಲ್ಲಿ ಆರೋಪಿಗಳ ಹೆಸರು ಕೇಳಿ ಬಂದಿವೆ. ಅರುಣ್ ತಡರಾತ್ರಿ ಸಿನೆಮಾ ನೋಡಿಕೊಂಡು ಮನೆಗೆ ವಾಪಾಸ್ಸಾಗುತ್ತಿದ್ದ ವೇಳೆ ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಘಟನೆ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಯುವ ಕಾಂಗ್ರೆಸ್ ಅಧ್ಯಕ್ಷನ ಬರ್ಬರ ಹತ್ಯೆ
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv