ಕುಖ್ಯಾತ ಕಳ್ಳ ಕೊಮ್ಮಘಟ್ಟ ಮಂಜನ ಮೇಲೆ ಪೊಲೀಸರ ಗುಂಡಿನ ದಾಳಿ

Public TV
1 Min Read
hootout f

ಬೆಂಗಳೂರು: ನಗರ ಪೊಲೀಸರ ನಿದ್ದೆಗೆಡಿಸಿದ್ದ ಕುಖ್ಯಾತ ಕಳ್ಳ ಕೊಮ್ಮಘಟ್ಟ ಮಂಜನ ಮೇಲೆ ಪೊಲೀಸರು ಮಂಗಳವಾರ ರಾತ್ರಿ ಗುಂಡಿನ ದಾಳಿ ನಡೆಸಿದ್ದಾರೆ.

shootout

ನಗರದ ಸೋಲದೇವನಹಳ್ಳಿಯ ಆಚಾರ್ಯ ಕಾಲೇಜಿನ ಬಳಿ ಮಂಜ ಇದ್ದ ಬಗ್ಗೆ ಮಾಹಿತಿ ತಿಳಿದ ವಿದ್ಯಾರಣ್ಯಪುರ ಇನ್ಸ್ ಪೆಕ್ಟರ್ ಪುನೀತ್, ಆತನನ್ನು ಹಿಡಿಯಲು ಪ್ರಯತ್ನಿಸಿದ್ರು. ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಮಂಜ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾನೆ. ಆತ್ಮರಕ್ಷಣೆಗಾಗಿ ಪೊಲೀಸರು ಎರಡು ಸುತ್ತು ಗುಂಡಿನ ದಾಳಿ ನಡೆಸಿದ್ದು, ಒಂದು ಗುಂಡು ಗಾಳಿಯಲ್ಲಿ ಹಾರಿದ್ರೆ, ಮತ್ತೊಂದು ಗುಂಡು ಈತನ ಕಾಲಿಗೆ ಬಿದ್ದಿದೆ.

shootout2

ಗುಂಡೇಟು ತಿಂದ ಮಂಜನನ್ನು ಪೊಲೀಸರು ಸ್ಥಳೀಯ ಸಪ್ತಗಿರಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಕೊಮ್ಮಘಟ್ಟ ಮಂಜ ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಕೆಲ ತಿಂಗಳ ಹಿಂದೆಯಷ್ಟೇ ಜಾಮೀನಿನ ಮೇಲೆ ಹೊರಗೆ ಬಂದಿದ್ದ ಮಂಜ ಈಗ ಮತ್ತೆ ಪೊಲೀಸರ ಅತಿಥಿಯಾಗಿದ್ದಾನೆ.

 

Share This Article
Leave a Comment

Leave a Reply

Your email address will not be published. Required fields are marked *