ಬೆಂಗಳೂರು: ಶಿಥಿಲಗೊಂಡಿರುವ ಕಟ್ಟಡದಲ್ಲಿ ಪೊಲೀಸ್ ಹೆಡ್ಕಾನ್ಸ್ಟೇಬಲ್ (Head Constable) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಡುಗೋಡಿಯಲ್ಲಿ (Adugodi) ನಡೆದಿದೆ.
ಮುಬಾರಕ್ ಸಿಕಿಂಧರ್ ಮುಜಾವರ್ ಆತ್ಮಹತ್ಯೆ ಮಾಡಿಕೊಂಡ ಹೆಡ್ಕಾನ್ಸ್ಟೇಬಲ್. ಇವರು ಕಳೆದ 15 ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತದೇಹ ವಾಸನೆ ಬಂದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಮುಬಾರಕ್ ಸಿಕಿಂದರ್ ಕಳೆದ ಏಳು ವರ್ಷಗಳಿಂದ ಸಿಎಆರ್ ದಕ್ಷಿಣದಲ್ಲಿ ಕೆಲಸ ಮಾಡಿಕೊಂಡಿದ್ದರು. ಮೂರು ವರ್ಷಗಳ ಹಿಂದೆ ಮದುವೆ ಕೂಡ ಮಾಡಿಕೊಂಡಿದ್ದರು. ಇದನ್ನೂ ಓದಿ: ಮಹದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಸೋಪು, ಶಾಂಪೂ ಬಳಕೆಗೆ ನಿಷೇಧ
ಫೆಬ್ರವರಿ 9ರಂದು ಆಡುಗೊಡಿ ಪೊಲೀಸ್ ಠಾಣೆಯಲ್ಲಿ ಮುಬಾರಕ್ ಮಿಸ್ಸಿಂಗ್ ಆಗಿದ್ದರು. ಸಹಸಿಬ್ಬಂದಿಯಿಂದ ಮಿಸ್ಸಿಂಗ್ ಕಂಪ್ಲೆಂಟ್ ದಾಖಲು ಮಾಡಲಾಗಿತ್ತು. ಸದ್ಯ ಘಟನಾ ಸ್ಥಳಕ್ಕೆ ಆಡುಗೊಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿಯಾದ ಯುಎಸ್ ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್