ಬೆಂಗಳೂರು: ಸುಮಾರು 150 ಕೇಸ್ ಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸಿದ್ದ ಪೊಲೀಸ್ ತಂಡಕ್ಕೆ ಡಿಸಿಪಿ ರವಿ ಡಿ. ಚನ್ನಣ್ಣನರ್ ಬಹುಮಾನವನ್ನು ಘೋಷಣೆ ಮಾಡಿದ್ದಾರೆ.
ಅಚ್ಯುತ್ ಕುಮಾರ್ ಗಣಿ ಪೊಲೀಸರ ದಾಳಿಗೆ ಒಳಗಾದ ಆರೋಪಿ. ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ಸುಮಾರು 5.45 ಕ್ಕೆ ಶೂಟ್ ಮಾಡಿ ಬಂಧಿಸಿದ್ದಾರೆ.
ಶೂಟ್ ಮಾಡಿದ್ದು ಯಾಕೆ?
ಸರಗಳ್ಳ ಅಚ್ಯುತ್ ಕುಮಾರ್ ನನ್ನ ಭಾನುವಾರ ಜ್ಞಾನಭಾರತಿ ಪೊಲೀಸರು ಬಂಧಿಸಿದ್ದರು. ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ನಸುಕಿನ ಜಾವ ಸುಮಾರು 2.30ಕ್ಕೆ ಕುಂಬಳಗೋಡಿಗೆ ಕರೆದೊಯ್ಯುಲಾಗುತ್ತಿತ್ತು. ಕೆಂಗೇರಿ ಸ್ಯಾಟ್ ಲೈಟ್ ಬಳಿ ಬರುವ ವೇಳೆಗೆ ಮೂತ್ರ ವಿಸರ್ಜನೆ ಮಾಡಬೇಕೆಂದು ಹೇಳಿ ತಪ್ಪಿಸಿಕೊಂಡಿದ್ದನು. ತಪ್ಪಿಸಿಕೊಂಡ ಆರೋಪಿಗಾಗಿ ಪೊಲೀಸ್ ತಂಡವನ್ನು ಆಯೋಜಿಸಲಾಗಿತ್ತು. ಕೋಡಿಪಾಳ್ಯ ನೈಸ್ ಮಾರ್ಗದಲ್ಲಿ ಇರುವ ಬಗ್ಗೆ ಮಾಹಿತಿ ತಿಳಿದು ಕೆಂಗೇರಿ ಮತ್ತು ಜ್ಞಾನಭಾರತಿ ಪೊಲೀಸರು ಬಂಧಿಸಲು ಹೋಗಿದ್ದಾರೆ. ಆಗ ಬಂಧಿಸಲು ಬಂದಿದ್ದ ಜ್ಞಾನಭಾರತಿ ಎ.ಎಸ್.ಐ ವೀರಭದ್ರಯ್ಯ ಹಾಗೂ ಹೆಡ್ ಕಾನ್ಸ್ ಟೇಬಲ್ ಚಂದ್ರಶೇಖರ್ ಮೇಲೆ ಹಲ್ಲೆ ಮಾಡಿದ್ದಾನೆ. ಈ ವೇಳೆ ಆತ್ಮರಕ್ಷಣೆಗೆಂದು ಪೊಲೀಸರು ಆತನ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಇದನ್ನೂ ಓದಿ: ತನ್ನ ಹೆಸರನ್ನು ದುರ್ಬಳಕೆ ಮಾಡೋ ಮಂದಿಗೆ ವಾರ್ನಿಂಗ್ ಕೊಟ್ಟ ಎಸ್ಪಿ ರವಿ ಚೆನ್ನಣ್ಣನವರ್
ಕುಖ್ಯಾತ ಸರಅಪಹರಣಕೋರನ ಬಂಧಿಸಲು ಮುಂದಾದ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆಗೆ ಯತ್ನಿಸಿದ ಆಸಾಮಿ "ಅಚ್ಚುತ್ ಕುಮಾರ್ ಗಣಿ" ಎಂಬಾತನ ಮೇಲೆ ಆತ್ಮರಕ್ಷಣೆಗಾಗಿ ಪೊಲೀಸರಿಂದ ಗುಂಡಿನ ದಾಳಿ.
Great work by the team.#ChainSnatcher, #Arrested #PoliceFiring @BlrCityPolice pic.twitter.com/EyTtrJuUyA
— Laxman B. Nimbargi, IPS (@DCPWestBCP) June 18, 2018
ಪೊಲೀಸರು ಗುಂಡಿನ ದಾಳಿ ಮಾಡಿದ ಪರಿಣಾಮ ಆರೋಪಿಯ ಕಾಲಿಗೆ ಗುಂಡು ಬಿದ್ದು, ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾನೆ. ನಂತರ ಆತನನ್ನು ಸರ್ಕಾರಿ ಆಸ್ಪತ್ರೆ ದಾಖಲಿಸಿದ್ದಾರೆ. ಇನ್ನು ಘಟನೆ ನಡೆದ ಸ್ಥಳಕ್ಕೆ ಪಶ್ಚಿಮ ವಿಭಾಗದ ಡಿಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಪೊಲೀಸರ ಅಭಿಯಾನಕ್ಕೆ ಯಶ್ ಸಾಥ್ – “Do Not Entertain False Rumors” ಅಂದ್ರು ರವಿಚೆನ್ನಣ್ಣವರ್
ಅಚ್ಯುತ್ ಕುಮಾರ್ ವಿರುದ್ಧ ಸುಮಾರು ಬೆಂಗಳೂರಿನಲ್ಲಿ 70 ಸರಗಳ್ಳತನ ಕೇಸ್ ಗಳು ದಾಖಲಾಗಿದೆ. ಆದರೆ ರಾಜ್ಯದ ಇತರ ಜಿಲ್ಲೆಗಳೂ ಸೇರಿ ಒಟ್ಟು 150 ಕ್ಕೂ ಹೆಚ್ಚು ಕೇಸ್ ಆರೋಪಿ ಅಚ್ಯುತ್ ಮೇಲೆ ದಾಖಲಾಗಿದೆ. ಅಷ್ಟೇ ಅಲ್ಲದೇ ಬಂಧನಕ್ಕೂ ಮುನ್ನ ಅಂದರೆ ಭಾನುವಾರ ತುಮಕೂರಿನಲ್ಲಿ ಮೂರು ಕಡೆ ಸರಗಳ್ಳತನ ಮಾಡಿದ್ದನು. ಆರೋಪಿ ಒಬ್ಬಂಟಿಯಾಗಿ ಬೈಕಿನಿಂದ ಇಳಿಯದೇ ಸರ ಕಿತ್ತು ಪರಾರಿಯಾಗುತ್ತಿದ್ದನು. ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸ್ ತಂಡಕ್ಕೆ ಪಶ್ಚಿಮ ವಿಭಾಗ ಡಿಸಿಪಿ ರವಿ ಡಿ.ಚನ್ನಣ್ಣನವರ್ 1 ಲಕ್ಷ ರೂ. ಬಹುಮಾನವನ್ನು ಘೋಷಿಸಿದ್ದಾರೆ.