ಬಿಗ್ ಬಾಸ್ (Bigg Boss Kannada 10) ಸ್ಪರ್ಧಿ ತನಿಷಾ (Tanisha Kuppanda) ವಿರುದ್ಧ ಜಾತಿನಿಂದನೆ ದೂರು ದಾಖಲಾದ ಬೆನ್ನಲ್ಲೇ ಬಿಗ್ ಬಾಸ್ ಸ್ಟುಡಿಯೋಗೆ ಕುಂಬಳಗೋಡು ಪೊಲೀಸರು ಎಂಟ್ರಿ ಕೊಟ್ಟಿದ್ದಾರೆ. ತನಿಷಾ ಕುಪ್ಪಂಡ- ಪ್ರತಾಪ್ ಇಬ್ಬರನ್ನೂ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ:ಒಟಿಟಿಗೆ ಎಂಟ್ರಿ ಕೊಡ್ತಿದೆ ಶಿವಣ್ಣನ ‘ಘೋಸ್ಟ್’


ಅಷ್ಟಕ್ಕೂ ಆಗಿದ್ದೇನು?
ಜಾತಿ ನಿಂದನೆ ವಿಚಾರವಾಗಿ ಎಸ್ಸಿಎಸ್ಟಿ ಕಾಯ್ದೆಯಡಿ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಷಾ ಕುಪ್ಪಂಡ ವಿರುದ್ಧ ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ ಪದ್ಮಾ ಎಂಬುವರಿಂದ ನವೆಂಬರ್ 12ರಂದು ಎಫ್ಐಆರ್ ದಾಖಲಿಸಿದ್ದರು. ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಅವಹೇಳನಕಾರಿ ಪದ ಬಳಕೆ ಬಗ್ಗೆ ತನಿಷಾ ವಿರುದ್ಧ ಆರೋಪ ಎದುರಾಗಿತ್ತು.
ಡ್ರೋನ್ ಪ್ರತಾಪ್ಗೆ (Drone Prathap) ಮಾತನಾಡುವ ಭರದಲ್ಲಿ ಪದಬಳಕೆ ಮಾಡಿ ಬೋವಿ ಜನಾಂಗಕ್ಕೆ ಅವಮಾನ ಮಾಡಿದ್ದಾರೆಂದು ದೂರು ದಾಖಲಾಗಿದ್ದು, ಬಿಗ್ ಬಾಸ್ ಮನೆಯಿಂದ ಹೊರ ಹಾಕಬೇಕು ಎಂದು ಆಗ್ರಹಿಸಿ ಎಸ್ಸಿಎಸ್ಟಿ ಕಾಯ್ದೆಯಡಿ ದೂರು ದಾಖಲಿಸಿದ್ದರು.

