ಹಾಡಹಗಲೇ ದರೋಡೆಗೆ ಯತ್ನ- ಪೊಲೀಸರ ಅಣಕು ಪ್ರದರ್ಶನಕ್ಕೆ ಬೆಚ್ಚಿ ಬಿದ್ದ ಜನ

Public TV
1 Min Read
mangaluru robery attempt

ಮಂಗಳೂರು: ಹಾಡಹಗಲೇ ಮಹಿಳೆಯನ್ನು ರಸ್ತೆಯಿಂದ ಎಳೆದೊಯ್ದು ದರೋಡೆಗೆ ಯತ್ನಿಸಿದ ಘಟನೆ ನಗರದಲ್ಲಿ ನಡೆದಿದೆ. ಕಾರಿನಲ್ಲಿ ಬಂದ ಮೂವರು ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯನ್ನು ಎಳೆದು ಸರ ಹಾಗೂ ಬ್ಯಾಗನ್ನು ಎಳೆಯಲು ಯತ್ನಿಸಿ, ಮಹಿಳೆಯ ಪ್ರತಿರೋಧದಿಂದ ಬ್ಯಾಗ್ ಕಸಿಯಲು ಆಗದೆ ಪರಾರಿಯಾಗಿದ್ದರು. ಆದರೆ ಇದೆಲ್ಲ ಪೊಲೀಸರ ಅಣಕು ಪ್ರದರ್ಶನ ಅನ್ನೋದು ಬಳಿಕ ಗೊತ್ತಾಗಿದೆ.

mangaluru robery attempt 2

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಇದೊಂದು ಅಣಕು ಪ್ರದರ್ಶನ, ಇಂತಹ ಘಟನೆಗಳು ಆದಾಗ ಸಾರ್ವಜನಿಕರು ಹೇಗೆ ಸ್ಪಂದಿಸುತ್ತಾರೆ. ಪೊಲೀಸರು ಎಷ್ಟು ಬೇಗ ಸ್ಪಂದಿಸುತ್ತಾರೆ ಎಂಬ ಬಗ್ಗೆ ಜನರಿಗೆ ಅರಿವು ಮೂಡಿಸುವ ಹಿನ್ನೆಲೆಯಲ್ಲಿ ಈ ಅಣಕು ಕಾರ್ಯಾಚರಣೆ ಮಾಡಲಾಗಿದೆ. ಕಾರಲ್ಲಿನ ಕಳ್ಳರಂತೆ ಬಂದವರು ಪೊಲೀಸ್ ಸಿಬ್ಬಂದಿ ಹಾಗೂ ಮಹಿಳೆ ಸೌರಕ್ಷಾ ವುಮೆನ್ ಟ್ರಸ್ಟ್ ನ ಶೋಭಾಲತಾ ಕಟೀಲ್ ಅವರು ಸಹಕರಿಸಿದ್ದಾರೆ ಎಂದರು. ಇದನ್ನೂ ಓದಿ: ಸುಮ್ಮನಿರು ಎಂದಿದ್ದಕ್ಕೆ ಲಾಕಪ್‍ನಲ್ಲೇ ಬಟ್ಟೆ ಬಿಚ್ಚಿದ ಆರೋಪಿ

ಈ ಅಣಕು ಕಾರ್ಯಾಚರಣೆ ಬಗ್ಗೆ ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೂ ಮಾಹಿತಿ ನೀಡದ ಆಯುಕ್ತರು, ಪೊಲೀಸರು ಹೇಗೆ ಸ್ಪಂದಿಸುತ್ತಾರೆ ಎಂಬ ಬಗ್ಗೆ ತಿಳಿದುಕೊಂಡರು. ಕೃತ್ಯ ನಡೆಸಿ, ಪರಾರಿಯಾಗುತ್ತಿದ್ದ ಕಾರನ್ನು ಅಡ್ಡಗಟ್ಟಲು ಪ್ರಯತ್ನಿಸಿದ ಮತ್ತೊಂದು ಕಾರಿನವರಿಗೆ ಕಮೀಷನರ್ ಬಹುಮಾನ ಘೋಷಿಸಿದ್ದಾರೆ. ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಆಗಿದ್ದು, ಕದ್ರಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ನಾಕಾಬಂದಿ ಹಾಕಿ, ಕಾರ್ಯಪ್ರವೃತ್ತರಾಗಿದ್ದರು. ಪೊಲೀಸರ ಕೆಲಸಕ್ಕೂ ಕಮೀಷನರ್ ಭೇಷ್ ಅಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *