ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್, ಶ್ರೀನಗರದಲ್ಲಿ ಉಗ್ರರು ಪ್ರತ್ಯೇಕ ಎರಡು ಕಡೆ ಇಂದು ಸಂಜೆ ನಡೆಸಿದ ದಾಳಿಯಲ್ಲಿ ಪೊಲೀಸ್ ಅಧಿಕಾರಿ ಹಾಗೂ ಒಬ್ಬ ನಾಗರಿಕ ಹತ್ಯೆಯಾಗಿದ್ದಾರೆ.
ಅನಂತನಾಗ್ ಪಟ್ಟಣದ ಬಿಜ್ಬೆಹಾರ್ನಲ್ಲಿ ಸಹಾಯಕ ಸಬ್ ಇನ್ಸ್ಪೆಕ್ಟರ್ ಅಧಿಕಾರಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿತ್ತು. ದಾಳಿಯಲ್ಲಿ ಪೊಲೀಸ್ ಅಧಿಕಾರಿ ಗಂಭೀರ ಗಾಯಗೊಂಡಿದ್ದರು. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ರಿಲಯನ್ಸ್, ಪತಂಜಲಿ, ಟಾಟಾ, ಇನ್ಫೋಸಿಸ್ ಸೇರಿ 11 ಖಾಸಗಿ ಸಂಸ್ಥೆಗಳಿಗೆ ಸಿಐಎಸ್ಎಫ್ ಭದ್ರತೆ
ಮೃತ ಅಧಿಕಾರಿ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ದಾಳಿಕೋರರನ್ನು ಪತ್ತೆಹಚ್ಚಲು ಪ್ರದೇಶವನ್ನು ಸುತ್ತುವರಿಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮತ್ತೊಂದೆಡೆ ಶ್ರೀನಗರದಲ್ಲಿ ನಡೆದ ದಾಳಿಯಲ್ಲಿ ನಾಗರಿಕನೊಬ್ಬ ಮೃತಪಟ್ಟಿದ್ದಾನೆ. ರೌಫ್ ಅಹಮದ್ ಎಂಬ ನಾಗರಿಕನ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರ ಗಾಯಗೊಂಡಿದ್ದ ನಾಗರಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತ ಮೃತಪಟ್ಟಿದ್ದಾನೆಂದು ವೈದ್ಯರು ತಿಳಿಸಿದರು. ಇದನ್ನೂ ಓದಿ: ಪ್ರಳಯ್ ಕ್ಷಿಪಣಿಯ ಯಶಸ್ವಿ ಪರೀಕ್ಷೆ – ದೇಶದ ರಕ್ಷಣಾ ಕ್ಷೇತ್ರಕ್ಕೆ ಆನೆ ಬಲ