Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಣೆಯಾಗಿದ್ದ ಮಾನಸಿಕ ಅಸ್ವಸ್ಥೆ ಹೇಳಿದ ಎರಡೇ ಪದಗಳಿಂದ ಆಕೆಯನ್ನ ಕುಟುಂಬದೊಂದಿಗೆ ಸೇರಿಸಿದ ಪೊಲೀಸರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಾಣೆಯಾಗಿದ್ದ ಮಾನಸಿಕ ಅಸ್ವಸ್ಥೆ ಹೇಳಿದ ಎರಡೇ ಪದಗಳಿಂದ ಆಕೆಯನ್ನ ಕುಟುಂಬದೊಂದಿಗೆ ಸೇರಿಸಿದ ಪೊಲೀಸರು

Latest

ಕಾಣೆಯಾಗಿದ್ದ ಮಾನಸಿಕ ಅಸ್ವಸ್ಥೆ ಹೇಳಿದ ಎರಡೇ ಪದಗಳಿಂದ ಆಕೆಯನ್ನ ಕುಟುಂಬದೊಂದಿಗೆ ಸೇರಿಸಿದ ಪೊಲೀಸರು

Public TV
Last updated: January 11, 2018 10:02 am
Public TV
Share
2 Min Read
falguni patel
SHARE

ಮುಂಬೈ: ಕೆಲವು ದಿನಗಳ ಹಿಂದೆ ಕಾಣೆಯಾಗಿ ಕುಟುಂಬದಿಂದ ಬೇರ್ಪಟ್ಟಿದ್ದ ಮಾನಸಿಕ ಅಸ್ವಸ್ಥ ಯುವತಿಯನ್ನು ಆಕೆಯ ಕುಟುಂಬದೊಂದಿಗೆ ಸೇರಿಸುವಲ್ಲಿ ಮುಂಬೈ ಪೊಲೀಸರು ಯಶಸ್ವಿಯಾಗಿದ್ದಾರೆ. ಅದರಲ್ಲೂ ಯುವತಿ ಹೇಳಿಕ ಎರಡೇ ಎರಡು ಪದಗಳನ್ನ ಇಟ್ಟುಕೊಂಡು ಪೊಲೀಸರು ಆಕೆಯ ಪೋಷಕರನ್ನ ಪತ್ತೆ ಮಾಡಿದ್ದಾರೆ.

ಮಾನಸಿಕ ಅಸ್ವಸ್ಥ ಯುವತಿ ಕೇವಲ ಸತ್ಸಂಗ್ ಮತ್ತು ಭಾಯಂದರ್ ಎಂಬ ಎರಡು ಪದಗಳನ್ನಷ್ಟೇ ಹೇಳಿದ್ದಳು. ಇದನ್ನೇ ಆಧಾರವಾಗಿಟ್ಟುಕೊಂಡ ಪೊಲೀಸರು ಮುಂಬೈ ಬಳಿಯ ಭಾಯಂದರ್ ಪ್ರದೇಶಕ್ಕೆ ಭೇಟಿ ನೀಡಿ, ಸಿಕ್ಕ ಮಾಹಿತಿಯನ್ನ ಒಂದಕ್ಕೊಂದು ಜೋಡಿಸಿ ಪೋಷಕರನ್ನ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲೀಸರ ತಂಡ ಮೊದಲಿಗೆ ಭಾಯಂದರ್‍ನಲ್ಲಿ ನಡೆದ ಹಾಗೂ ನಡೆಯುತ್ತಿರುವ ಸತ್ಸಂಗಗಳ ಬಗ್ಗೆ ಮಾಹಿತಿ ಕಲೆ ಹಾಕಿತ್ತು. ನಂತರ ಈ ಹಿಂದೆ ನಡೆದ ಸತ್ಸಂಗಗಳ ಆಯೋಜಕರು ಹಾಗೂ ಅವುಗಳಲ್ಲಿ ಭಾಗಿಯಾದ ಜನರನ್ನ ಮಾತನಾಡಿಸಿದ್ದರು.

police control room

ಆಗಿದ್ದೇನು?: ಜನವರಿ 1ರಂದು ಸಂಜೆ 5.30ರ ವೇಳೆಗೆ ಮುಂಬೈ ಪೊಲೀಸ್ ಕಂಟ್ರೋಲ್ ರೂಮಿಗೆ ಕರೆಯೊಂದು ಬಂದಿತ್ತು. ಅಪರಿಚಿತ ಯುವತಿಯೊಬ್ಬಳು ವಡಾಲಾದ ಬಿಪಿಟಿ ಕಾಲೋನಿಯ ರಸ್ತೆ ಮೇಲೆ ಬಿದ್ದಿದ್ದಾಳೆಂದು ಮಾಹಿತಿ ಪಡೆದಿದ್ದರು. ನಂತರ ಕಂಟ್ರೋಲ್ ರೂಮಿನವರು ವಡಾಲಾದಲ್ಲಿನ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಿದ್ದರು. ಬಳಿಕ ಪೊಲೀಸ್ ವ್ಯಾನ್‍ನಲ್ಲಿ ಸಬ್ ಇನ್ಸ್ ಪೆಕ್ಟರ್ ಸಂದೀಪ್ ಪವಾರ್ ಸ್ಥಳಕ್ಕೆ ಭೇಟಿ ನೀಡಿದಾಗ, ಯುವತಿ ಮಾತನಾಡಲೂ ಕಷ್ಟಪಡುತ್ತಿದ್ದು, ಮಾನಸಿಕ ಅಸ್ವಸ್ಥೆಯಂತೆ ಕಾಣುತ್ತಿದ್ದಳು.

police

ಮೊದಲಿಗೆ ಯುವತಿಯನ್ನ ಪರೇಲ್‍ನ ಕೆಇಎಮ್ ಆಸ್ಪತ್ರೆಗೆ ದಾಖಲಿಸಿ ನಂತರ ಜೆಜೆ ಆಸ್ಪತ್ರೆಗೆ ರವಾನಿಸಲಾಗಿತ್ತು. ಅಲ್ಲಿ ಯುವತಿಯನ್ನ ನೋಡಿಕೊಳ್ಳಲು ಮಹಿಳಾ ಪೇದೆಯರನ್ನ ನಿಯೋಜಿಸಲಾಗಿತ್ತು. ಶಿಫ್ಟ್‍ಗಳಲ್ಲಿ ಕೆಲಸ ಮಾಡಿದ ಮಹಿಳಾ ಪೇದೆಗಳು ಯುವತಿಯೊಂದಿಗೆ ಮಾತನಾಡಲು ಪ್ರತ್ನಿಸಿದ್ದರು. ಆದ್ರೆ ಯುವತಿ ಸಂತ್ಸಂಗ್, ಭಾಯಂದರ್ ಎಂಬ ಎರಡು ಪದಗಳನ್ನು ಮಾತ್ರ ಹೇಳುತ್ತಿದ್ದಳು.

ಇದನ್ನೇ ಆಧಾರವಾಗಿಟ್ಟುಕೊಂಡು ನಮ್ಮ ಬಳಿ ಇದ್ದ ಮಾಹಿತಿಯನ್ನಾಧರಿಸಿ ಕಾರ್ಯಾಚರಣೆ ಮಾಡಿದೆವು. ನಾನು ಭಾಯಂದರ್ ಪೊಲೀಸ್ ಠಾಣೆಯನ್ನ ಸಂಪರ್ಕಿಸಿ, ಯಾವುದಾದ್ರೂ ಯುವತಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದ್ಯಾ ಎಂದು ಪರಿಶೀಲಿಸಿದೆ. ಆದ್ರೆ ಆ ರೀತಿ ಯಾವುದೇ ಕೇಸ್ ದಾಖಲಾಗಿಲ್ಲ ಎಂದು ಅವರು ತಿಳಿಸಿದರು ಎಂದು ಪಿಎಸ್‍ಐ ಸಂದೀಪ್ ಪವಾರ್ ಹೇಳಿದ್ದಾರೆ.

ನಂತರ ಪವಾರ್ ಅವರು ಆ ಪ್ರದೇಶದಲ್ಲಿ ಇತ್ತೀಚೆಗೆ ಯಾವುದಾದ್ರೂ ಸತ್ಸಂಗ ನಡೆದಿತ್ತಾ ಎಂದು ಪೊಲೀಸ್ ಠಾಣೆಯಲ್ಲಿ ವಿಚಾರಿಸಿದ್ದರು. ಕಳೆದ ವಾರ ಅಂತಹ ಎರಡು ಮೂರು ಕಾರ್ಯಕ್ರಮಗಳು ನಡೆದಿವೆ ಎಂಬ ಮಾಹಿತಿ ಸಿಕ್ಕಿತ್ತು.

ಇದನ್ನಾಧರಿಸಿ ಜನವರಿ 7ರಂದು ಕಾರ್ಯಕ್ರಮ ನಡೆದ ಒಂದು ಸ್ಥಳಕ್ಕೆ ಭೇಟಿ ನೀಡಿದ ಪವಾರ್, ದೇರಾ ಸಚ್ಛಾ ಸೌದಾ ಸತ್ಸಂಗ ಆಯೋಜಕರಿಗೆ ಯುವತಿಯ ಫೋಟೋ ತೋರಿಸಿ ವಿಚಾರಿಸಿದ್ದರು. ಸತ್ಸಂಗದಲ್ಲಿ ಭಾಗವಹಿಸಿದ್ದ ಕುಟುಂಬವೊಂದು, ಸುಮಾರು ಇದೇ ವಯಸ್ಸಿನ ತಮ್ಮ ಮಗಳನ್ನ ಕಳೆದುಕೊಂಡಿದ್ದಾರೆಂದು ಆಯೋಜಕರು ಹೇಳಿದ್ದರು. ನಂತರ ಸತ್ಸಂಗ ಆಯೋಜಕರು ಮಗಳನ್ನು ಕಳೆದುಕೊಂಡಿದ್ದ ಕುಟುಂಬದವರನ್ನ ಸಂಪರ್ಕಿಸಲು ಪವಾರ್ ಅವರಿಗೆ ಸಹಾಯ ಮಾಡಿದ್ದರು.

falguni patel 1

ನಾನು ಸೂರತ್ ಮೂಲದ ಕುಟುಂಬವನ್ನ ಸಂಪರ್ಕಿಸಿ ಯುವತಿಯ ಫೋಟೋವನ್ನ ಹಂಚಿಕೊಂಡೆ. ಅವರು ಕೂಡಲೇ ಅದು ನಮ್ಮ ಮಗಳು ಫಲ್ಗುಣಿ ಪಟೇಲ್ ಎಂದು ಗುರುತಿಸಿದ್ರು. ಯುವತಿ ದಲ್‍ಸುಖ್ ಪಟೇಲ್ ಎಂಬವರ ಮಗಳಾಗಿದ್ದು ಕುಟಂಬಸ್ಥರು ಸತ್ಸಂಗದಲ್ಲಿ ಭಾಗವಹಿಸಲು ವಾಸೈ ರೈಲ್ವೆ ನಿಲ್ದಾಣಕ್ಕೆ ಬಂದಾಗ ಕಾಣೆಯಾಗಿದ್ದಳು. ಕುಟುಂಬಸ್ಥರು ಈಗ ಮುಂಬೈಗೆ ಬಂದಿದ್ದು, ಯುವತಿಯನ್ನ ಅವರಿಗೆ ಒಪ್ಪಿಸಲಾಗಿದೆ ಎಂದು ಪವಾರ್ ಹೇಳಿದ್ರು.

TAGGED:ಪೊಲೀಸ್ಭಾಯಂದರ್ಮಾನಸಿಕ ಅಸ್ವಸ್ಥೆಮುಂಬೈ ಪೊಲೀಸ್ಸತ್ಸಂಗ
Share This Article
Facebook Whatsapp Whatsapp Telegram

Cinema news

Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories

You Might Also Like

Nitish Kumar Son Nishant Kumar Joins JDU
Latest

ಬಿಹಾರ ಸಿಎಂ ನಿತೀಶ್ ಕುಮಾರ್ ಪುತ್ರ ರಾಜಕೀಯಕ್ಕೆ ಎಂಟ್ರಿ – ಜೆಡಿಯು ಪಕ್ಷಕ್ಕೆ ಸೇರ್ಪಡೆ

Public TV
By Public TV
3 minutes ago
HM Revanna
Bengaluru City

ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡಬೇಕು, ಸಿಎಂ, ಸಚಿವರು ಏನೂ ಮಾತನಾಡಿಲ್ಲ: ಹೆಚ್.ಎಂ ರೇವಣ್ಣ

Public TV
By Public TV
26 minutes ago
Stamp vendor arrested Bengaluru Bettegowda
Crime

ನಕಲಿ ಪೊಲೀಸರನ್ನು ಕಳುಹಿಸಿ ಸ್ನೇಹಿತನ ಮನೆ ರಾಬರಿ – ಸ್ಟ್ಯಾಂಪ್‌ ವೆಂಡರ್ ಅರೆಸ್ಟ್

Public TV
By Public TV
54 minutes ago
Manjamma Jogathi nari narayani
Bengaluru City

ಮಂಜಮ್ಮ ಜೋಗತಿಗೆ ನಾರಿ ನಾರಾಯಣಿ ಗೌರವ

Public TV
By Public TV
1 hour ago
Cylinder Price Hike Congress Protest In Bengaluru
Bengaluru City

ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

Public TV
By Public TV
1 hour ago
Mala Vijay Makhija nari narayani award
Bengaluru City

ಆಕಾರ್ ಅಡ್ವರ್ಟೈಸಿಂಗ್‌ ಎಂಡಿ ಮಾಲಾ ಮಖೀಜಾಗೆ ನಾರಿ ನಾರಾಯಣಿ ಗೌರವ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?