ಬೆಂಗಳೂರು: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ಬೆಂಗಳೂರಿನಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿ ಪ್ರತಿಭಟನೆ ವೇಳೆ ಪ್ರಚೋದನಕಾರಿ ಪೋಸ್ಟರ್ ಪ್ರದರ್ಶಿಸಿದ ಸಂಬಂಧ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ.
ವಿವಾದಾತ್ಮಕ ಹಾಗೂ ಪ್ರಚೋದನಕಾರಿ ಪೋಸ್ಟರ್ ಪ್ರದರ್ಶಿಸಿದ ವಿದ್ಯಾರ್ಥಿನಿ ವಿರುದ್ಧ ಕೇಸ್ ದಾಖಲಿಸಲು ಕಾನೂನು ತಜ್ಞರ ಅಭಿಪ್ರಾಯ ಸಂಗ್ರಹಕ್ಕೆ ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಕಾನೂನು ತಜ್ಞರ ಅಭಿಪ್ರಾಯ ಬಂದ ಕೂಡಲೇ ಕೇಸ್ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲು ಪೊಲೀಸರು ಚಿಂತನೆ ನಡೆಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ʻನೀಟ್ʼ ಪ್ರತಿಭಟನೆ ವೇಳೆ ವಿವಾದ – 2020ರ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ ಪರ ಪೋಸ್ಟರ್
ಬೆಂಗಳೂರಲ್ಲಿ ʻನೀಟ್ʼ ಪ್ರತಿಭಟನೆ ವೇಳೆ ವಿವಾದ – 2020ರ ಗಲಭೆ ಪ್ರಕರಣ ಆರೋಪಿ ಉಮರ್ ಖಾಲಿದ್ ಪರ ಪೋಸ್ಟರ್
– ಪೋಸ್ಟರ್ ಪ್ರದರ್ಶಿಸಿದ ಯುವತಿಗೆ ಇತರ ವಿದ್ಯಾರ್ಥಿಗಳಿಂದ ಕ್ಲಾಸ್ https://t.co/gjfwtyNmDg#UmarKhalid #Bengaluru #NEETProtest #BengaluruCityPolice
— PublicTV (@publictvnews) July 24, 2026
ಏನಿದು ವಿವಾದ?
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಶುಕ್ರವಾರ (ಜು.24) ವಿದ್ಯಾರ್ಥಿನಿಯೊಬ್ಬಳು ಹಿಡಿದಿದ್ದ ಪೋಸ್ಟರ್ ಭಾರೀ ವಿವಾದಕ್ಕೆ ಕಾರಣವಾಹಿದೆ. ಪ್ರತಿಭಟನೆಗೆ ಬಂದಿದ್ದ ಆಕೆ ಗಲಭೆ ಪ್ರಕರಣದ ಆರೋಪಿಗಳಾದ ಉಮರ್ ಖಾಲಿದ್ ಹಾಗೂ ಶಾರ್ಜೀಲ್ ಇಮಾಮ್ ಪರವಾಗಿ ಘೋಷಣೆಗಳಿರುವ ಪೋಸ್ಟರ್ಗಳನ್ನ ಪ್ರದರ್ಶಿಸಿದ್ದಾಳೆ. ಅಷ್ಟೇ ಅಲ್ಲದೇ ʻUkhad Le BLR Policeʼ ಎಂಬ ಬರಹವನ್ನು ಪೋಸ್ಟರ್ನಲ್ಲಿ ಪ್ರದರ್ಶಿಸಿ, ಬೆಂಗಳೂರು ಪೊಲೀಸರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಳು.

ಈ ಪೋಸ್ಟರ್ಗಳು ಅಲ್ಲಿದ್ದ ಪೊಲೀಸರ ಗಮನ ಸೆಳೆದು, ಪರಿಸ್ಥಿತಿ ಉದ್ವಿಗ್ನವಾಗದಂತೆ ಪೊಲೀಸರು ತಕ್ಷಣವೇ ಪೋಸ್ಟರ್ಗಳನ್ನ ವಶಪಡಿಸಿಕೊಂಡಿದ್ದರು. ಇದೇ ವೇಳೆ ಅಲ್ಲಿದ್ದ ಇತರ ವಿದ್ಯಾರ್ಥಿಗಳು ಆಕೆಗೆ ಕ್ಲಾಸ್ ತೆಗದುಕೊಂಡು, ಪ್ರತಿಭಟನಾ ಸ್ಥಳದಿಂದ ಕಳುಹಿಸಿದ್ದರು. ಇದೀಗ ಈ ಸಂಬಂಧ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
ಉಮರ್ ಖಾಲಿದ್ ಯಾರು?
ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ 2020ರ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿಗಳು.
