ಸರಗಳ್ಳನ ಮೇಲೆ ಶೂಟೌಟ್- ಚಿನ್ನದ ಸರದ ಗಣಿಯೇ ಪತ್ತೆ

Public TV
2 Min Read
CHAINSNACHES

ಬೆಂಗಳೂರು: ಜೂನ್ ತಿಂಗಳಿನಲ್ಲಿ ಶೂಟೌಟ್ ಗೆ ಒಳಗಾಗಿದ್ದ ಆರೋಪಿಯಿಂದ ಬರೋಬ್ಬರಿ 1 ಕೋಟಿ ರೂ. ಮೌಲ್ಯದ ಚಿನ್ನದ ಸರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಚ್ಯುತ್ ಕುಮಾರ್ ಅಲಿಯಾಸ್ ಗಣಿ ಪೊಲೀಸರಿಂದ ಶೂಟೌಟಿಗೆ ಒಳಗಾಗಿದ್ದ ಆರೋಪಿ. ಈತನ ಮೇಲೆ ರಾಜ್ಯದಾದ್ಯಂತ 105 ಸರಕಳ್ಳತನ ಪ್ರಕರಣಗಳು ದಾಖಲಾಗಿದ್ದವು. ಈತ ಮೂಲತಃ ಧಾರವಾಡ ಜಿಲ್ಲೆಯ ಕೋಳಿವಾಡದವನು. ಆರೋಪಿ ಅಚ್ಯುತ್ ಕುಮಾರ್ ಒಂಟಿ ಮಹಿಳೆಯರನ್ನ ಟಾರ್ಗೆಟ್ ಮಾಡಿ ಸರಗಳ್ಳತನ ಮಾಡುತ್ತಿದ್ದನು.

ಕಳೆದ ಕೆಲವು ವರ್ಷಗಳಿಂದ ಕುಂಬಳಗೂಡಿನಲ್ಲಿ ಒಂದು ಮನೆ ಮಾಡಿಕೊಂಡು ವಾಸಮಾಡುತ್ತಿದ್ದನು. ಬಳಿಕ ರಿಂಗ್ ರೋಡ್ ಬಳಿದ್ದ ಸುತ್ತಮುತ್ತಾ ಏರಿಯಾಗಳಲ್ಲಿ ಸರಗಳ್ಳತನ ಮಾಡುತ್ತಿದ್ದನು. ಕಳೆದ ಜೂನ್ 17 ರಂದು ಕೆಂಗೇರಿ ಬಳಿ ಅಚ್ಯುತ್ ಕುಮಾರ್ ಕಾಲಿಗೆ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದರು. ಇದನ್ನೂ ಓದಿ: 150 ಕೇಸ್ ನಲ್ಲಿ ಬೇಕಾಗಿದ್ದ ಆರೋಪಿಗೆ ಶೂಟ್, ಅರೆಸ್ಟ್ – ಡಿಸಿಪಿ ರವಿ ಡಿ.ಚನ್ನಣ್ಣನವರಿಂದ ತಂಡಕ್ಕೆ ಬಹುಮಾನ ಘೋಷಣೆ

ಪೊಲೀಸರು ಬಳಿಕ ತನಿಖೆಯನ್ನು ಮುಂದುವರಿಸಿದ್ದು, ಈಗ ಈತ ಕಳ್ಳತನ ಮಾಡಿದ್ದ ಬರೋಬ್ಬರಿ 1 ಕೋಟಿ ಮೌಲ್ಯದ ಚಿನ್ನದ ಸರಗಳು ಪತ್ತೆಯಾಗಿವೆ. ಆರೋಪಿ ಅಚ್ಯುತ್ ಕಳವು ಮಾಡಿದ್ದ ಮಾಲ್ ಗಳನ್ನು ಗವಿ ಸಿದ್ದೇಶನ ಬಳಿ ಅಡ ಇಡುತ್ತಿದ್ದನು. ಇದರಿಂದ ಅಡ ಇಟ್ಟುಕೊಂಡ ತಪ್ಪಿಗೆ ಈಗ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಅಚ್ಯುತ್ ನನ್ನ ಬಂಧಿಸಲು ಮೂರು ವಿಶೇಷ ತಂಡವನ್ನ ರಚನೆ ಮಾಡಲಾಗಿತ್ತು.

ಜೂನ್ 17 ಏನಾಗಿತ್ತು?
ಸರಗಳ್ಳ ಅಚ್ಯುತ್ ಕುಮಾರ್ ನನ್ನ ಜ್ಞಾನಭಾರತಿ ಪೊಲೀಸರು ಬಂಧಿಸಿದ್ದರು. ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ನಸುಕಿನ ಜಾವ ಸುಮಾರು 2.30ಕ್ಕೆ ಕುಂಬಳಗೋಡಿಗೆ ಕರೆದೊಯ್ಯುಲಾಗುತ್ತಿತ್ತು. ಕೆಂಗೇರಿ ಸ್ಯಾಟ್ ಲೈಟ್ ಟೌನ್ ಬಳಿ ಬರುವ ವೇಳೆಗೆ ಮೂತ್ರ ವಿಸರ್ಜನೆ ಮಾಡಬೇಕೆಂದು ಹೇಳಿ ತಪ್ಪಿಸಿಕೊಂಡಿದ್ದನು. ತಪ್ಪಿಸಿಕೊಂಡ ಆರೋಪಿಗಾಗಿ ಪೊಲೀಸ್ ತಂಡವನ್ನು ಆಯೋಜಿಸಲಾಗಿತ್ತು. ಕೋಡಿಪಾಳ್ಯ ನೈಸ್ ಮಾರ್ಗದಲ್ಲಿ ಇರುವ ಬಗ್ಗೆ ಮಾಹಿತಿ ತಿಳಿದು ಕೆಂಗೇರಿ ಮತ್ತು ಜ್ಞಾನಭಾರತಿ ಪೊಲೀಸರು ಬಂಧಿಸಲು ಹೋಗಿದ್ದರು. ಆಗ ಬಂಧಿಸಲು ಬಂದಿದ್ದ ಜ್ಞಾನಭಾರತಿ ಎ.ಎಸ್.ಐ ವೀರಭದ್ರಯ್ಯ ಹಾಗೂ ಹೆಡ್ ಕಾನ್ಸ್ ಟೇಬಲ್ ಚಂದ್ರಶೇಖರ್ ಮೇಲೆ ಹಲ್ಲೆ ಮಾಡಿದ್ದ. ಈ ವೇಳೆ ಆತ್ಮರಕ್ಷಣೆಗೆಂದು ಪೊಲೀಸರು ಆತನ ಮೇಲೆ ಗುಂಡಿನ ದಾಳಿ ಮಾಡಿದ್ದರು.

ಅಚ್ಯುತ್ ಕುಮಾರ್ ವಿರುದ್ಧ ಸುಮಾರು ಬೆಂಗಳೂರಿನಲ್ಲಿ 70 ಸರಗಳ್ಳತನ ಕೇಸ್ ಗಳು ದಾಖಲಾಗಿದೆ. ಆದರೆ ರಾಜ್ಯದ ಇತರ ಜಿಲ್ಲೆಗಳೂ ಸೇರಿ ಒಟ್ಟು 150 ಕ್ಕೂ ಹೆಚ್ಚು ಕೇಸ್ ಆರೋಪಿ ಅಚ್ಯುತ್ ಮೇಲೆ ದಾಖಲಾಗಿದೆ. ಅಷ್ಟೇ ಅಲ್ಲದೇ ಬಂಧನಕ್ಕೂ ಮುನ್ನ ತುಮಕೂರಿನಲ್ಲಿ ಮೂರು ಕಡೆ ಸರಗಳ್ಳತನ ಮಾಡಿದ್ದನು. ಆರೋಪಿ ಒಬ್ಬಂಟಿಯಾಗಿ ಬೈಕಿನಿಂದ ಇಳಿಯದೇ ಸರ ಕಿತ್ತು ಪರಾರಿಯಾಗುತ್ತಿದ್ದನು. ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸ್ ತಂಡಕ್ಕೆ ಪಶ್ಚಿಮ ವಿಭಾಗ ಡಿಸಿಪಿ ರವಿ ಡಿ.ಚನ್ನಣ್ಣನವರ್ 1 ಲಕ್ಷ ರೂ. ಬಹುಮಾನವನ್ನು ಘೋಷಿಸಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

Share This Article
Leave a Comment

Leave a Reply

Your email address will not be published. Required fields are marked *