ಡ್ಯೂಟಿಗೆ ಹೋಗುತ್ತೇನೆಂದು ಹೇಳಿ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆಗೆ ಶರಣು!

Public TV
1 Min Read
HVR POLICE SUICIDE

ಹಾವೇರಿ: ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹೊಂಬಳಿ ಗ್ರಾಮದಲ್ಲಿ ನಡೆದಿದೆ.

ಜಗದೀಶ್ ಬೆಂಡಿಗೇರಿ(41) ಮೃತ ಪೊಲೀಸ್ ಸಿಬ್ಬಂದಿ. ಜಗದೀಶ್ 1999ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದು, ಸದ್ಯ ಹಾವೇರಿ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯಲ್ಲಿ ಹವಾಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

suicide image

ಇದೀಗ ಜಗದೀಶ್ ಅವರು ತನ್ನ ಜಮೀನಿನಲ್ಲಿ ಬೇವಿನಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾರೆ. ಕುಟುಂಬದ ಸದಸ್ಯರಲ್ಲಿ ಡ್ಯೂಟಿಗೆ ಹೋಗುತ್ತೇನೆ ಎಂದು ಹೇಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದ್ರೆ ಜಗದೀಶ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸದ್ಯ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *