ಉಗ್ರಗಾಮಿಗಳ ಗುಂಡಿಗೆ ಪೊಲೀಸ್ ಸಿಬ್ಬಂದಿ ಹುತಾತ್ಮ

Public TV
1 Min Read
jammu

ಶ್ರೀನಗರ: ಉಗ್ರಗಾಮಿಗಳ ಗುಂಡಿಗೆ ಜಮ್ಮು ಕಾಶ್ಮೀರದ ಪೊಲೀಸ್ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ.

ತೌಸೀಫ್ ಅಹಮದ್ ಹುತಾತ್ಮ ಪೊಲೀಸ್ ಸಿಬ್ಬಂದಿಯಾಗಿದ್ದಾರೆ. ಶ್ರೀನಗರದ ಬಾಟ್‍ಮಲೂ ಪ್ರದೇಶದಲ್ಲಿ ಭಯೋತ್ಪಾದಕರ ಗುಂಡಿಗೆ ಹುತಾತ್ಮರಾಗಿದ್ದಾರೆ.

FotoJet 5 8

ಜಮ್ಮು ಕಾಶ್ಮೀರ ಪೊಲೀಸ್ ಇಲಾಖೆಯ ಕಾನ್‍ಸ್ಟೆಬಲ್ ತೌಸೀಫ್ ಅಹಮದ್ ಅವರ ಮೇಲೆ ಅವರ ಮನೆಯ ಹತ್ತಿರವೇ ರಾತ್ರಿ 8 ಗಂಟೆಗೆ ಉಗ್ರರು ಗುಂಡು ಹಾರಿಸಿದ್ದಾರೆ. ತೀವ್ರವಾಗಿ ಗಾಯಗೊಂಡ ಕಾನ್‍ಸ್ಟೆಬಲ್ ತೌಸೀಫ್ ಅವರನ್ನು ತಕ್ಷಣವೇ ಎಸ್‍ಎಂಎಚ್‍ಎಸ್ ಆಸ್ಪತ್ರೆಗೆ ಕರೆದೊಯ್ಯವ ವೇಳೆ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದರು. ಈ ಪ್ರದೇಶದಲ್ಲಿ ಸಂಪೂರ್ಣವಾಗಿ ನಿಬರ್ಂಧ ಆದೇಶ ಜಾರಿಗೊಳಿಸಲಾಗಿದ್ದು, ಭಯೋತ್ಪಾದಕನ್ನು ಪತ್ತೆಹಚ್ಚಲು ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ಜಿಮ್ ಮಾಡೋವ್ರಿಗೆ ಅಪ್ಪು ಸಾವು ಬಿಗ್ ಶಾಕ್ – ಜಿಮ್‍ಗೆ ಹೋಗದಂತೆ ಮಕ್ಕಳಿಗೆ ಪೋಷಕರ ಆಕ್ಷೇಪ

terrorists

ಜಮ್ಮು ಕಾಶ್ಮೀರದ ಶ್ರೀನಗರದ ಆಸ್ಪತ್ರೆಯೊಂದರಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಕೆಲ ಕಾಲ ಗುಂಡಿನ ಚಕಮಕಿ ನಡೆಯಿತು. ಆಸ್ಪತ್ರೆಯಲ್ಲೇ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಒಬ್ಬರು ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಭದ್ರತಾ ಪಡೆಗಳು ಸ್ಥಳಕ್ಕೆ ದೌಡಾಯಿಸಿವೆ. ಶ್ರೀನಗರ-ಬಾರಾಮುಲ್ಲಾ ಹೆದ್ದಾರಿಯಲ್ಲಿ ನಗರದ ಬೆಮಿನಾ ಪ್ರದೇಶದ ಎಸ್‍ಕೆಐಎಂಎಸ್ ಆಸ್ಪತ್ರೆ ಬಳಿ ಈ ಘಟನೆ ನಡೆದಿದೆ. ಬೆಮಿನಾದ  SKIMS ಆಸ್ಪತ್ರೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಸ್ವಲ್ಪ ಸಮಯದ ಗುಂಡಿನ ಚಕಮಕಿ ನಡೆಯಿತು. ಆ ಆಸ್ಪತ್ರೆಯ ಸುತ್ತ ಸೇರಿದ್ದ ಜನಸಂದಣಿಯ ಲಾಭವನ್ನು ಪಡೆದುಕೊಂಡು ಭಯೋತ್ಪಾದಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಶ್ರೀನಗರ ಪೊಲೀಸರು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *