Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾಂತೇಶ್ ಬೀಳಗಿ ನಿಧನಕ್ಕೆ ಸಿಎಂ ಸೇರಿ ರಾಜಕೀಯ ಗಣ್ಯರ ಸಂತಾಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಹಾಂತೇಶ್ ಬೀಳಗಿ ನಿಧನಕ್ಕೆ ಸಿಎಂ ಸೇರಿ ರಾಜಕೀಯ ಗಣ್ಯರ ಸಂತಾಪ

Bengaluru City

ಮಹಾಂತೇಶ್ ಬೀಳಗಿ ನಿಧನಕ್ಕೆ ಸಿಎಂ ಸೇರಿ ರಾಜಕೀಯ ಗಣ್ಯರ ಸಂತಾಪ

Public TV
Last updated: November 25, 2025 10:45 pm
Public TV
Share
3 Min Read
Siddaramaiah 6
SHARE

ಬೆಂಗಳೂರು: ಮಹಾಂತೇಶ್ ಬೀಳಗಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಸೇರಿ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ನಿಧನರಾದ ಸುದ್ದಿ ನೋವುಂಟು ಮಾಡಿದೆ. ಹಲವು ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಜಿಲ್ಲಾಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದರು. ಮಹಾಂತೇಶ್ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲ ಕಡೆಗಳಲ್ಲಿಯೂ ತಮ್ಮ ದಕ್ಷತೆಯಿಂದಾಗಿ ಹೆಜ್ಜೆ ಗುರುತುಗಳನ್ನು ಉಳಿಸಿ ಹೋಗಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ದೊರಕಲೆಂದು ಪ್ರಾರ್ಥಿಸುತ್ತೇನೆ ಹಾಗೂ ಅವರ ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: ಕಾರು ಅಪಘಾತ – ಐಎಎಸ್‌ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ನಿಧನರಾದ ಸುದ್ದಿ ನೋವುಂಟು ಮಾಡಿದೆ.
ಹಲವು ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಜಿಲ್ಲಾಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದರು. ಮಹಾಂತೇಶ್ ಅವರು ಕರ್ತವ್ಯ… pic.twitter.com/Yvp7oYESG0

— Siddaramaiah (@siddaramaiah) November 25, 2025

ಡಿಸಿಎಂ ಡಿಕೆ ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದು, ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿಗಳಾದ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ವಿಧಿವಶರಾಗಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ. ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂಡಿ ಸಹ ಆಗಿದ್ದರು, ಜೊತೆಗೆ ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು. ಜನಪರ ಕಾರ್ಯಗಳ ಮೂಲಕ ಹೆಸರುವಾಸಿಯಾಗಿದ್ದ ದಕ್ಷ ಅಧಿಕಾರಿಯ ನಿಧನ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬದವರಿಗೆ ನೋವು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿಗಳಾದ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ವಿಧಿವಶರಾಗಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ.

ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂಡಿ ಸಹ ಆಗಿದ್ದರು, ಜೊತೆಗೆ ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು.… pic.twitter.com/O0GYHMpieC

— DK Shivakumar (@DKShivakumar) November 25, 2025

ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಎಕ್ಸ್ ಖಾತೆಯಲ್ಲಿ ಮಹಾಂತೇಶ್ ಬೀಳಗಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ರಾಜ್ಯದ ಹಿರಿಯ ಐಎಎಸ್ ಅಧಿಕಾರಿ ಶ್ರೀ ಮಹಾಂತೇಶ್ ಬೀಳಗಿ ಅವರು ಕಲಬುರ್ಗಿ ಸಮೀಪ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ ವಿಧಿವಶರಾದ ಸುದ್ದಿ ಅತೀವ ಆಘಾತವನ್ನು ಉಂಟುಮಾಡಿದೆ. ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶ್ರೀ ಮಹಾಂತೇಶ್ ಬೀಳಗಿ ಅವರು ಈ ಹಿಂದೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಅವರ ಅಕಾಲಿಕ ನಿಧನದಿಂದ ರಾಜ್ಯ ಒಬ್ಬ ಹಿರಿಯ, ದಕ್ಷ, ಮತ್ತು ಉತ್ತಮ ಅಧಿಕಾರಿಯನ್ನು ಕಳೆದುಕೊಂಡಿದೆ. ಅಗಲಿದ ಹಿರಿಯ ಅಧಿಕಾರಿಯ ಆತ್ಮಕ್ಕೆ ಚಿರಶಾಂತಿಯನ್ನು ಪ್ರಾರ್ಥಿಸುತ್ತಾ, ಅವರ ಕುಟುಂಬದ ಸದಸ್ಯರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ನನ್ನ ತೀವ್ರ ಸಂತಾಪಗಳನ್ನು ಸಲ್ಲಿಸುತ್ತೇನೆ. ಈ ಭೀಕರ ಅಪಘಾತದಲ್ಲಿ ಶ್ರೀಯುತ ಬೀಳಗಿ ಅವರೊಂದಿಗೆ ಪ್ರಯಾಣಿಸುತ್ತಿದ್ದ ಇನ್ನೂ ಇಬ್ಬರು ಕೂಡ ಸಾವನ್ನಪ್ಪಿದ್ದು, ಅವರಿಗೂ ದೇವರು ಸದ್ಗತಿಯನ್ನು ಕರುಣಿಸಲಿ, ಅವರ ಕುಟುಂಬದ ಸದಸ್ಯರಲ್ಲಿ ಕೂಡ ನನ್ನ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ರಾಜ್ಯದ ಹಿರಿಯ IAS ಅಧಿಕಾರಿ ಶ್ರೀ ಮಹಾಂತೇಶ್ ಬೀಳಗಿ ಅವರು ಕಲಬುರ್ಗಿ ಸಮೀಪ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ ವಿಧಿವಶರಾದ ಸುದ್ದಿ ಅತೀವ ಆಘಾತವನ್ನು ಉಂಟುಮಾಡಿದೆ. ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶ್ರೀ ಮಹಾಂತೇಶ್ ಬೀಳಗಿ ಅವರು ಈ ಹಿಂದೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು.… pic.twitter.com/6jGDQyO9zq

— Vijayendra Yediyurappa (@BYVijayendra) November 25, 2025

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ. ರಾಜ್ಯದ ಹಿರಿಯ ಐಎಎಸ್ ಅಧಿಕಾರಿ ಕರ್ನಾಟಕ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ ಬೀಳಗಿ ನಿಧನ ಹೊಂದಿರುವ ಸುದ್ದಿ ಕೇಳಿ ಆಘಾತವಾಗಿದೆ. ಅತ್ಯಂತ ಸರಳ ಹಾಗೂ ಪ್ರಾಮಾಣಿಕ ಅಧಿಕಾರಿಯಾಗಿದ್ದ ಅವರು, ದಾವಣಗೆರೆ ಜಿಲ್ಲಾಧಿಕಾರಿಯಾಗಿ, ಬೆಸ್ಕಾಂ ಎಂಡಿಯಾಗಿ ತಮ್ಮ ಛಾಪು ಮೂಡಿಸಿದ್ದರು. ಅವರ ಅಗಲಿಕೆಯಿಂದ ರಾಜ್ಯ ಒಬ್ಬ ಪ್ರಾಮಾಣಿಕ ಮತ್ತು ದಕ್ಷ ಅಧಿಕಾರಿಯನ್ನು ಕಳೆದುಕೊಂಡಂತಾಗಿದೆ. ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ, ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಟಿ20 ವಿಶ್ವಕಪ್‌ | ಬೆಂಗಳೂರಿನಲ್ಲಿ ಪಂದ್ಯವಿಲ್ಲ – 8 ಮೈದಾನಗಳಲ್ಲಿ ಟೂರ್ನಿ

TAGGED:Basavaraj BommaibengaluruDK Shivakumarsiddaramaiahಡಿಕೆ ಶಿವಕುಮಾರ್ಬಸವರಾಜ್ ಬೊಮ್ಮಾಯಿಬಿವೈ ವಿಜಯೇಂದ್ರಬೆಂಗಳೂರುಮಹಾಂತೇಶ್ ಬೀಳಗಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories

You Might Also Like

Budget 2026 1 1
Latest

ವಿಕಸಿತ ಭಾರತಕ್ಕೆ ಕೇಂದ್ರದ ಯುವಶಕ್ತಿ ಬಜೆಟ್ – ಜೀರಾಮ್‌ಜೀ ಯೋಜನೆಗೆ 95,692 ಕೋಟಿ ಮೀಸಲು; ಹಿಂದಿಗಿಂತಲೂ ಹೆಚ್ಚು!

Public TV
By Public TV
2 hours ago
Hassan Car Accident
Crime

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಓರ್ವ ಸಾವು, ಇಬ್ಬರು ಗಂಭೀರ

Public TV
By Public TV
3 hours ago
Ind vs Pak U19 1
Cricket

U19 World Cup | ಭಾರತಕ್ಕೆ 58 ರನ್‌ಗಳ ಭರ್ಜರಿ ಜಯ – ಮೈದಾನದಲ್ಲೇ ಕಣ್ಣೀರಿಟ್ಟ ಪಾಕ್‌ ಕ್ರಿಕೆಟಿಗ

Public TV
By Public TV
3 hours ago
India vs Pakistan 1
Cricket

Boycott | ವಿಶ್ವಕಪ್‌ ಟೂರ್ನಿ ಆಡ್ತೀವಿ, ಭಾರತದ ವಿರುದ್ಧ ಆಡಲ್ಲ – ಪಾಕಿಸ್ತಾನ ಅಚ್ಚರಿ ನಿರ್ಧಾರ

Public TV
By Public TV
4 hours ago
Chaluvarayaswamy
Districts

ಕೃಷಿಯಾಧಾರಿತ ಕರ್ನಾಟಕಕ್ಕೆ ಕೇಂದ್ರ ಬಜೆಟ್‌ನಲ್ಲಿಲ್ಲ ಒತ್ತು: ಚಲುವರಾಯಸ್ವಾಮಿ

Public TV
By Public TV
4 hours ago
CJ Roy 6
Bengaluru City

ಬೆಲ್ಜಿಯಮ್ ದೇಶದ ಪಿಸ್ತೂಲ್‌ನಿಂದ ಸಿ.ಜೆ ರಾಯ್ ಶೂಟೌಟ್

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?