Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಿಜೆಪಿಯನ್ನು ಬೆಚ್ಚಿಬೀಳಿಸಿದ ಅತೃಪ್ತ ಶಾಸಕರ ಷರತ್ತುಗಳು!

Public TV
Last updated: January 30, 2019 12:41 pm
Public TV
Share
4 Min Read
Operation Condition
SHARE

– ಆಪರೇಷನ್ ಮೌನಕ್ರಾಂತಿಯಲ್ಲಿ ಸ್ಫೋಟಕ ಬೆಳವಣಿಗೆ
– ಕ್ರಾಸ್ ವೋಟಿಂಗ್ ಮಾಡಿದ್ರೆ ಆಗೋ ಪರಿಣಾಮಗಳ ಬಗ್ಗೆ ಚರ್ಚೆ
– ನಮ್ಮ ಷರತ್ತುಗನ್ನು ಒಪ್ಪಿದ್ರೆ ಮಾತ್ರ ಬಿಜೆಪಿಗೆ ಸೇರ್ಪಡೆ

ಬೆಂಗಳೂರು: ರಾಜ್ಯದಲ್ಲಿ ಆಪರೇಷನ್ ಕಮಲಕ್ಕೆ ಪೂರ್ಣ ವಿರಾಮ ಬೀಳುವ ಲಕ್ಷಣಗಳು ಕಾಣಿಸುತ್ತಿಲ್ಲ. ಲೋಕಸಮರಕ್ಕೂ ಮುನ್ನ ರಾಜ್ಯದಲ್ಲಿ ಕೈ-ದಳದ ದೋಸ್ತಿಯನ್ನು ಕೆಡವಲು ಕಮಲ ನಾಯಕರು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ. ಇತ್ತ ಸಚಿವ ಸ್ಥಾನ ಸಿಗದೇ ಕಾಂಗ್ರೆಸ್ 8 ಶಾಸಕರು ಕೈಯಲ್ಲಿ ಬಂಡಾಯದ ಬಾವುಟ ಹಿಡಿದುಕೊಂಡು ಕುಳಿತ್ತಿದ್ದಾರೆ. ಬಾವುಟ ಹಾರಿಸಲು ಸೂಕ್ತ ಸಮಯಕ್ಕಾಗಿ ಅತೃಪ್ತರು ಕಾಯುತ್ತಿದ್ದಾರೆ. ಸಂಕ್ರಾಂತಿ ಸಮಯದಲ್ಲಿ ಮುಂಬೈ ರೆಸಾರ್ಟ್ ಸೇರಿದ್ದ 8 ಶಾಸಕರು ಬಿಜೆಪಿ ನಾಯಕರ ಮುಂದೆ ಈಗ ಕೆಲವು ಷರತ್ತುಗಳನ್ನು ಇಟ್ಟಿದ್ದಾರೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.

ಕೆಲ ಕಾಂಗ್ರೆಸ್ ಶಾಸಕರು ಬಹಿರಂಗವಾಗಿ ಸಮ್ಮಿಶ್ರ ಸರ್ಕಾರದ ಆಡಳಿತ ವೈಖರಿಯ ಬಗ್ಗೆ ಅಸಮಾಧಾನ ಹೊರಹಾಕುತ್ತಿದ್ದಾರೆ. ಇತ್ತೀಚೆಗೆ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಗೆ ಶಾಸಕರಾದ ಉಮೇಶ್ ಜಾಧವ್, ಮಹೇಶ್ ಕುಮಟಳ್ಳಿ, ನಾಗೇಂದ್ರ ಮತ್ತು ರಮೇಶ್ ಜಾರಕಿಹೊಳಿ ಗೈರಾಗುವ ಮೂಲಕ ಅಸಮಾಧಾನವನ್ನು ಹೊರ ಹಾಕಿದ್ದರು. ಈ ಎಲ್ಲ ಬೆಳವಣಿಗೆಗಳ ನಡುವೆ ಉಮೇಶ್ ಜಾಧವ್ ಮತ್ತು ಮಹೇಶ್ ಕುಮಟಳ್ಳಿ ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಬಲವಾಗಿಯೇ ಕೇಳಿ ಬರುತ್ತಿವೆ. ರಮೇಶ್ ಜಾರಕಿಹೊಳಿ ನಾನು ಡಿಸಿಎಂ ಆಗೋವರೆಗೂ ಕರ್ನಾಟಕಕ್ಕೆ ಬರಲ್ಲ ಪ್ರತಿಜ್ಞೆ ಮಾಡಿದ್ದಾರೆ ಎನ್ನಲಾಗಿದ್ದು ಅಜ್ಞಾತ ಸ್ಥಳದಲ್ಲಿದ್ದಾರೆ.

Operation Condition 3

ನಿಮಗಾಗಿ ನಾವು ಕ್ರಾಸ್ ವೋಟ್ ಮಾಡಲಿಕ್ಕೆ ಸಿದ್ಧವಾಗಿದ್ದೇವೆ. ನಾವು 8 ಜನ ನಿಮಗೆ ನಮ್ಮ ಬೆಂಬಲ ನೀಡಿ ರಾಜೀನಾಮೆಯನ್ನು ನೀಡುತ್ತೇವೆ. ಈ ಕೆಲಸಕ್ಕೆ ಪ್ರತಿಫಲವಾಗಿ ನಮಗೆ ನಮ್ಮ ಕೆಲವು ಷರತ್ತುಗಳನ್ನು ಒಪ್ಪಿಕೊಳ್ಳುಬೇಕೆಂದು ಅತೃಪ್ತ ಶಾಸಕರು ಬಿಜೆಪಿ ನಾಯಕರಿಗೆ ತಿಳಿಸಿದ್ದಾರಂತೆ. ಸಂಕ್ರಾಂತಿಯ ಕ್ರಾಂತಿ ವಿಫಲವಾದ ಬೆನ್ನಲ್ಲೇ ಆಪರೇಷನ್ ಮೌನ ಕ್ರಾಂತಿಗೆ ಮುಂದಾಗಿದ್ದ ಬಿಜೆಪಿಗೆ ಅತೃಪ್ತರ ಷರತ್ತು ಕೇಳಿ ಒಂದು ಕ್ಷಣ ಸುಸ್ತಾಗಿದ್ದಾರೆ. ಬಜೆಟ್ ಅಧಿವೇಶನಕ್ಕೂ ಮುನ್ನವೇ ಸರ್ಕಾರ ಬೀಳಿಸಲು ಮುಂದಾಗಿದ್ದ ಬಿಜೆಪಿಗೆ ಷರತ್ತುಗಳು ಹಿಮಾಲಯದಂತೆ ಕಾಣಿಸುತ್ತಿದೆ ಎಂಬ ಚರ್ಚೆಗಳು ಪಕ್ಷದ ಅಂಗಳದಲ್ಲಿ ಆರಂಭಗೊಂಡಿವೆ.

ಅತೃಪ್ತರ ಷರತ್ತುಗಳು ಏನು?
ನಮ್ಮ ರಾಜೀನಾಮೆ ಬಳಿಕ ಕೂಡಲೇ ಚುನಾವಣೆ ನಡೆಯುವಂತೆ ನೋಡಿಕೊಳ್ಳಬೇಕು. ಲೋಕಸಭೆ ಜೊತೆಗೆ ನಮ್ಮ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆದು, ನಾವು ಮತ್ತೊಮ್ಮೆ ಗೆಲ್ಲುವಂತಾಗಬೇಕು. ಒಂದು ವೇಳೆ ಲೋಕಸಮರ ಜೊತೆಗೆ ಆಗದೇ ಇದ್ದಲ್ಲಿ ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಯ ಜೊತೆಯಲ್ಲಿ ನಮ್ಮಲ್ಲಿ ಎಲೆಕ್ಷನ್ ನಡೆಯಬೇಕು. ಈ ಷರತ್ತುಗಳಿಗೆ ನೀವು ಒಪ್ಪಿದ್ರೆ ನಾವು ನಿಮಗೆ ಬೆಂಬಲ ನೀಡುತ್ತೇವೆ ಎಂದು ಅತೃಪ್ತ ಶಾಸಕರು ಹೇಳಿದ್ದಾರೆ.

Operation Condition 2

ಕಂಡೀಷನ್ ಹಾಕಿದ್ಯಾಕೆ?
ಒಂದು ವೇಳೆ ಬಿಜೆಪಿ ಮಾತನ್ನು ನಂಬಿ ವಿಪ್ ಜಾರಿಯಾಗಿ ಕ್ರಾಸ್ ವೋಟಿಂಗ್ ಮಾಡಿದರೆ ಪಕ್ಷಾಂತರ ನಿಷೇಧ ಕಾನೂನಿನ ಅನ್ವಯ 6 ವರ್ಷ ರಾಜಕೀಯ ಕ್ಷೇತ್ರಕ್ಕೆ ಕಾಲಿಡಲು ಸಾಧ್ಯವಿಲ್ಲ. ಹೀಗಾಗಿ ಮುಂದಿನ ರಾಜಕೀಯ ಜೀವನ ಹೇಗೆ ಎನ್ನುವ ಪ್ರಶ್ನೆ ಅತೃಪ್ತರಲ್ಲಿ ಮನೆ ಮಾಡಿದೆ. ಪಕ್ಷಾಂತರ ನಿಷೇಧ ಕಾಯ್ದೆಯಡಿ ಬ್ಯಾನ್ ಆಗುವುದು ಒಂದು ಅವಧಿಗೋ? 6 ವರ್ಷಕ್ಕೋ ಎನ್ನುವ ಗೊಂದಲಲ್ಲಿ ಶಾಸಕರಿದ್ದು, ಹೀಗಾಗಿ ಪಕ್ಷಾಂತರ ನಿಷೇಧ ಕಾಯ್ದೆಯಿಂದ ತಪ್ಪಿಸಿಕೊಳ್ಳಲು 8 ಜನ ಶಾಸಕರು ಖ್ಯಾತ ಕಾನೂನು ತಜ್ಞ ಹರೀಶ್ ಸಾಳ್ವೆ ಅವರನ್ನು ಭೇಟಿಯಾಗಿ ಸಲಹೆಯನ್ನು ಪಡೆದುಕೊಂಡು ಈ ಷರತ್ತುಗಳನ್ನು ಹಾಕಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದುಬಂದಿದೆ.

ಪಕ್ಷಾಂತರ ಕಾಯ್ದೆಯಡಿ ಶಿಕ್ಷೆಗೆ ಒಳಗಾದ್ರೆ ಕೇವಲ ಒಂದು ಅವಧಿಗೆ ಮಾತ್ರ ರಾಜಕೀಯದಿಂದ ದೂರ ಇರಬೇಕಾಗುತ್ತದೆ. ಒಂದು ವೇಳೆ ಸ್ಪೀಕರ್ ಪಕ್ಷಾಂತರ ಕಾಯ್ದೆಯಡಿ ಕ್ರಮಕೈಗೊಂಡರೂ ಚುನಾವಣಾ ಆಯೋಗದ ನಿರ್ಧಾರವೇ ಅಂತಿಮವಾಗಿರುತ್ತದೆ. ಕೇಂದ್ರ ಚುನಾವಣಾ ಆಯೋಗ ತೆಗೆದುಕೊಳ್ಳುವ ನಿರ್ಧಾರದಂತೆ ಪಕ್ಷಾಂತರ ನಿಷೇಧ ಅನ್ವಯ ಆಗುತ್ತದೆ ಎಂದು ಖಚಿತವಾಗಿ ಹರೀಶ್ ಸಾಳ್ವೆ ತಿಳಿಸಿದ್ದಾರೆ. ಹೀಗಾಗಿಯೇ, ಈ ಕೂಡಲೇ ವಿಧಾನಸಭೆ ಚುನಾವಣೆಯೂ ಆಗಬೇಕು ಎಂಬ ಬೇಡಿಕೆಯನ್ನು ಅತೃಪ್ತರು ಬಿಜೆಪಿ ಮುಂದಿಟ್ಟಿದ್ದಾರೆ.

Operation Condition 1

ಬಿಎಸ್‍ವೈ ನಡೆಯ ಮೇಲೆ ನಿರ್ಧಾರ:
ಅತೃಪ್ತ ಶಾಸಕರ ಷರತ್ತುಗಳನ್ನು ಕೇಳಿಸಿಕೊಂಡಿರುವ ಯಡಿಯೂರಪ್ಪನವರ ಮುಂದಿನ ನಡೆಯ ಮೇಲೆ ನಿರ್ಧಾರವಾಗಲಿದೆ. ಬಿಜೆಪಿ ನೀಡುವ ಈ ಭರವಸೆಯನ್ನು ನಂಬಿಕೊಂಡು ಅತೃಪ್ತ 8 ಶಾಸಕರು ವಿಶ್ವಾಸಮತಯಾಚನೆ ವೇಳೆ ಕ್ರಾಸ್ ವೋಟ್ ಮಾಡ್ತಾರಾ? ಅತೃಪ್ತರು ಮಾತೃ ಪಕ್ಷಕ್ಕೆ ಮರಳ್ತಾರಾ? ಹಾಗಾದ್ರೆ ಫೆಬ್ರವರಿ 6ರಿಂದ 10 ಈ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಹೊಸ ಬದಲಾವಣೆ ಆಗುತ್ತಾ ಎಂಬುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.

ಪಕ್ಷಾಂತರ ಕಾಯ್ದೆ ಏನು ಹೇಳುತ್ತೆ?
ಪಕ್ಷಾಂತರ ನಿಷೇಧ ಕಾಯ್ದೆಯಡಿ ಪಕ್ಷದ ಆದೇಶ ಉಲ್ಲಂಘಿಸಿದರೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದು ಹಾಕಬಹುದು. ಆಗ ಸಹಜವಾಗಿಯೇ ಶಾಸಕರು ಅನರ್ಹರಾಗುತ್ತಾರೆ. ಅನರ್ಹ ಶಾಸಕರು ವಿಧಾನಸಭೆ ಅವಧಿ ಮುಗಿಯುವವರೆಗೆ ಬೇರೆ ಪಕ್ಷಕ್ಕೆ ಸೇರುವಂತಿಲ್ಲ. ಹಾಲಿ ವಿಧಾನಸಭೆ ಅವಧಿ ಮುಗಿಯುವವರೆಗೂ ಉಪ ಚುನಾವಣೆಯಲ್ಲೂ ಸ್ಪರ್ಧಿಸುವಂತಿಲ್ಲ. ಅನರ್ಹಗೊಂಡ ಶಾಸಕರು ಮಂತ್ರಿ ಸ್ಥಾನ ಸೇರಿದಂತೆ ಯಾವುದೇ ಸರ್ಕಾರಿ ಹುದ್ದೆಯನ್ನು ಹೊಂದುವಂತಿಲ್ಲ.

operation mouna

ಅನರ್ಹಗೊಂಡ ದಿನದಿಂದ ಅವರ ಶಾಸಕತ್ವ ಅವಧಿ ಯಾವಾಗ ಮುಗಿಯುತ್ತೋ ಅಲ್ಲಿವರೆಗೆ ಹುದ್ದೆಗಳನ್ನ ಹೊಂದುವಂತಿಲ್ಲ. ಪಕ್ಷದ ಒಟ್ಟು ಶಾಸಕರಲ್ಲಿ 2/3ರಷ್ಟು ಶಾಸಕರು ಗುಂಪಾಗಿ ಪಕ್ಷಾಂತರ ಮಾಡಿದರಷ್ಟೇ ಅನರ್ಹತೆ ಅನ್ವಯಿಸಲ್ಲ. ಶಾಸಕರನ್ನು ಅನರ್ಹಗೊಳಿಸುವ ಅಧಿಕಾರ ವಿಧಾನಸಭೆ ಸ್ಪೀಕರ್ ಕೈಯಲ್ಲಿದ್ದು, ಅನರ್ಹತೆ ಪ್ರಶ್ನಿಸಿ ಸ್ಪೀಕರ್ ಅವರಿಗೂ ಮನವಿ, ಕಾನೂನು ಹೋರಾಟವನ್ನೂ ಮಾಡಬಹುದು.

https://www.youtube.com/watch?v=Q_i8SVV0CA4

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bjpcongressjdsOperation LotusPublic TVಆಪರೇಷನ್ ಕಮಲಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿಜೆಪಿ
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

Digital Arrest 2
Crime

Digital Arrest | ಸಿಬಿಐ ಅಧಿಕಾರಿ ಸೋಗಿನಲ್ಲಿ ಕರೆ – ಬ್ಯಾಂಕ್‌ ಅಧಿಕಾರಿಗೆ 56 ಲಕ್ಷಕ್ಕೂ ಅಧಿಕ ಹಣ ವಂಚನೆ

Public TV
By Public TV
54 seconds ago
captain brijesh chowta nitin gadkari
Dakshina Kannada

ಸಂಸತ್‌ ಕಚೇರಿಯಲ್ಲಿ ನಿತಿನ್‌ ಗಡ್ಕರಿ ಭೇಟಿಯಾದ ಕ್ಯಾ.ಬ್ರಿಜೇಶ್‌ ಚೌಟ

Public TV
By Public TV
5 minutes ago
big bulletin 24 July 2025 part 1
Big Bulletin

ಬಿಗ್‌ ಬುಲೆಟಿನ್‌ 24 July 2025 ಭಾಗ-1

Public TV
By Public TV
8 hours ago
big bulletin 24 July 2025 part 2
Big Bulletin

ಬಿಗ್‌ ಬುಲೆಟಿನ್‌ 24 July 2025 ಭಾಗ-2

Public TV
By Public TV
8 hours ago
Rishabh Pant 1
Cricket

ನೋವಿನಲ್ಲೂ ಫಿಫ್ಟಿ ಹೊಡೆದ ಪಂತ್‌ – ಏಕದಿನದಂತೆ ಬ್ಯಾಟ್‌ ಬೀಸಿದ ಇಂಗ್ಲೆಂಡ್‌

Public TV
By Public TV
8 hours ago
big bulletin 24 July 2025 part 3
Big Bulletin

ಬಿಗ್‌ ಬುಲೆಟಿನ್‌ 24 July 2025 ಭಾಗ-3

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?