Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾತಿ-ಧರ್ಮ, ಮತಕ್ಕಿಂತ ಈ ಗ್ರಾಮದಲ್ಲಿ ಪಕ್ಷವೇ ಪ್ರತಿಷ್ಠೆ-ಪ್ರತ್ಯೇಕವಾಗಿ ನಡೆಯುತ್ತೆ ಪ್ರತಿ ಹಬ್ಬ, ಆಚರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಜಾತಿ-ಧರ್ಮ, ಮತಕ್ಕಿಂತ ಈ ಗ್ರಾಮದಲ್ಲಿ ಪಕ್ಷವೇ ಪ್ರತಿಷ್ಠೆ-ಪ್ರತ್ಯೇಕವಾಗಿ ನಡೆಯುತ್ತೆ ಪ್ರತಿ ಹಬ್ಬ, ಆಚರಣೆ

Chikkaballapur

ಜಾತಿ-ಧರ್ಮ, ಮತಕ್ಕಿಂತ ಈ ಗ್ರಾಮದಲ್ಲಿ ಪಕ್ಷವೇ ಪ್ರತಿಷ್ಠೆ-ಪ್ರತ್ಯೇಕವಾಗಿ ನಡೆಯುತ್ತೆ ಪ್ರತಿ ಹಬ್ಬ, ಆಚರಣೆ

Public TV
Last updated: January 20, 2018 2:19 pm
Public TV
Share
2 Min Read
CKB POLITICAL VILLAGE PKG FESTIVAL VISUEl
SHARE

ಚಿಕ್ಕಬಳ್ಳಾಪುರ: ವಿವಿಧ ಭಾಷೆ, ಧರ್ಮ, ಜಾತಿ, ಮತ, ಪಂಥ ಗಳನ್ನು ಮೀರಿದ ಏಕತೆಯ ರೂಪವಾಗಿ ಭವ್ಯ ಭಾರತವನ್ನು ಕಾಣಬಹುದು. ಆದರೆ ಇತ್ತೀಚೆಗೆ ಜಾತಿ-ಜಾತಿ, ಧರ್ಮಗಳ ನಡುವೆಯೇ ರಾಜಕೀಯ ವ್ಯಕ್ತಿಗಳು ಕಿಚ್ಚು ಹಚ್ಚಿ ತಮ್ಮ ಬೇಳೆ ಬೇಯಿಸಿಕೊಳ್ಳುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂತಹ ಘಟನೆಗೆ ಸ್ಪಷ್ಟ ಸಾಕ್ಷಿ ಎಂಬಂತೆ ಇಲ್ಲೊಂದು ಗ್ರಾಮದ ಜನರಿಗೆ ಜಾತಿ-ಧರ್ಮಗಳಿಗಿಂತ ರಾಜಕೀಯ ಪಕ್ಷವೇ ಶ್ರೇಷ್ಠವಾಗಿದೆ. ತಮ್ಮ ಒಣ ಪ್ರತಿಷ್ಠೆಗಾಗಿ ಗ್ರಾಮದ ದೇವರಿಗೆ ಪ್ರತ್ಯೇಕ ಪೂಜೆ ಪುನಸ್ಕಾರದಲ್ಲಿ ತೊಡಗಿದ್ದಾರೆ.

ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹುಜಗೂರು ಗ್ರಾಮದಲ್ಲಿ ಇಂತಹ ಬೆಳವಣಿಗೆ ಸಾಕ್ಷಿಯಾಗಿದ್ದು, ಈ ಗ್ರಾಮದಲ್ಲಿ ವಾಸಿಸುವ 130 ಕುಟುಂಬ ಗಳಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ರಾಜಕೀಯ ಸಂಘರ್ಷಕ್ಕೆ ಹೆಸರು ಪಡೆದಿದೆ. ಗ್ರಾಮದ 130 ಕುಟುಂಬಗಳ ಪೈಕಿ 74 ಕುಟುಂಬಗಳು ಜೆಡಿಎಸ್ ಪಕ್ಷ ಬೆಂಬಲಿಸಿದರೆ, ಉಳಿದ 56 ಕುಟುಂಬಗಳು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತವೆ. ಈ ಗ್ರಾಮದಲ್ಲಿ ಜೆಡಿಎಸ್ ಬೆಂಬಲಿತರ ಮನೆಗಳು ಇರುವ ಬೀದಿಗೆ ಕಾಂಗ್ರೆಸ್ ನವರು ಹೆಜ್ಜೆ ಇಡಲ್ಲ. ಕಾಂಗ್ರೆಸ್ ಬೆಂಬಲಿತರ ಮನೆಯ ಇರುವ ಕಡೆಗೆ ಜೆಡಿಎಸ್ ನವರು ಹೆಜ್ಜೆ ಹಾಕಲ್ಲ. ಅಷ್ಟೇ ಅಲ್ಲದೇ ಪರಸ್ಪರರು ಮಾತಾಡೋದು ಅಷ್ಟಕ್ಕಷ್ಟೇ.

CKB POLITICAL VILLAGE PKG 3

ಗ್ರಾಮದ ಮನೆಯಲ್ಲಿ ಯಾರಾದರೂ ಸಾವನ್ನಪ್ಪಿದರೂ ಅವರ ಪಕ್ಷದವರು ಇವರ ಮನೆಯ ಬಳಿ ಹೋಗಲ್ಲ. ಕೊನೆಗೆ ಶುಭ ಸಮಾರಂಭಗಳಿಗೂ ಹೋಗಲ್ಲ. ಚುನಾವಣೆ ಬರಲಿ – ಮುಗಿಯಲಿ, ವರ್ಷ ಪೂರ್ತಿಯೂ ಹಾವು ಮುಂಗುಸಿಯಂತೆ ಇರುತ್ತಾರೆ ಈ ಗ್ರಾಮದ ಕುಟುಂಬಗಳು.

ಇವರ ಪಕ್ಷ ರಾಜಕೀಯ ಕಾದಾಟ ಕೇವಲ ಬರೀ ಮಾತಿನಲ್ಲಿ ನಿಲ್ಲದೇ ಹಬ್ಬ ಹರಿದಿನಗಳ ದೇವರ ಕಾರ್ಯದಲ್ಲೂ ನಡೆಯುತ್ತದೆ. ಯಾವುದೇ ಹಬ್ಬ, ರಾಷ್ಟ್ರೀಯ ಆಚರಣೆಗಳಾದ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ದಿನವನ್ನು ಪ್ರತ್ಯೇಕವಾಗಿ ಆಚರಿಸುತ್ತಾರೆ. ಇದಕ್ಕೆ ಸ್ಪಷ್ಟ ಉದಾಹರಣೆ ಎಂದರೆ ಗ್ರಾಮದಲ್ಲಿ ನಡೆಯುವ ಗಣೇಶ ಹಬ್ಬದಂದು ಬೇರೆ ಬೇರೆಯಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತಾರೆ. ಇತ್ತೀಚೆಗೆ ನಡೆದ ಸಂಕ್ರಾಂತಿ ಹಬ್ಬದಂದು ಪ್ರತ್ಯೇಕ ದೇವರ ಗುಡಿಗಳನ್ನು ನಿರ್ಮಿಸಿ ರಾಸುಗಳಿಗೆ ಕಿಚ್ಚು ಹಾಯಿಸಿ ಪೂಜೆ ನೇರವೇರಿಸಿದ್ದಾರೆ.

CKB POLITICAL VILLAGE PKG 1

ಈ ಗ್ರಾಮದಲ್ಲಿರುವ ಆಂಜನೇಯಸ್ವಾಮಿಗೆ ಶನಿವಾರ ಜೆಡಿಎಸ್ ಬೆಂಬಲಿತರು ಪೂಜೆ ಸಲ್ಲಿಸಿದರೆ, ಕಾಂಗ್ರೆಸ್ ಬೆಂಬಲಿತರು ಸೋಮವಾರ ಪೂಜೆ ಸಲ್ಲಿಸುತ್ತಾರೆ. ವಿಶೇಷ ಏನೆಂದರೆ ಕಾಂಗ್ರೆಸ್ ನವರು ಪ್ರತಿಷ್ಠಾಪಿಸಿರುವ ನವಗ್ರಹ ಕಲ್ಲುಗಳಿಗೆ ಜೆಡಿಎಸ್ ನವರು ನಮಸ್ಕಾರ ಹಾಕುವುದು ವಿರಳಾತಿ ವಿರಳ. ಅಲ್ಲದೇ ಆಟೋಗಳ ಮೂಲಕ ಪಟ್ಟಣಕ್ಕೆ ತೆರಳುವಾಗಲೂ ಸಹ ನಾವು ಕಾಂಗ್ರೆಸ್ ನೀವು ಜೆಡಿಎಸ್ ಎನ್ನುವ ಬೇಧ ಭಾವ ಕಾಣಸಿಗುತ್ತದೆ. ಇಂತಹ ಭೇದ ಭಾವಗಳು ಸದ್ಯ ಶಾಲೆಗೆ ಹೋಗುವ ಸಣ್ಣ ಮಕ್ಕಳಿಗೂ ತಟ್ಟಿದ್ದು ಅವರು ಕೂಡ ನಾವು ಜೆಡಿಎಸ್, ನಾವು ಕಾಂಗ್ರೆಸ್ ಪಕ್ಷ ಎನ್ನುವ ಮಟ್ಟಕ್ಕೆ ಬೆಳೆದು ನಿಂತಿದ್ದಾರೆ.

ಮನೆಯೊಂದು ಮೂರು ಬಾಗಿಲು ಎಂಬಂತೆ ಗ್ರಾಮವೊಂದು ಎರಡು ಮನಸ್ಥಿತಿಗಳು ಎಂಬಂತಾಗಿ ಕಾಂಗ್ರೆಸ್, ಜೆಡಿಎಸ್ ಎಂದು ವಿಭಜನೆಯಾಗಿದೆ. ಆದರೆ ಇದೇ ರೀತಿ ಪರಿಸ್ಥಿತಿ ಮುಂದುವರೆದರೆ ಗ್ರಾಮದ ಮುಂದಿನ ಮಕ್ಕಳ ಭವಿಷ್ಯ ಸ್ಥಿತಿ ಏನಾಗಬಹುದು ಎಂಬುದು ಹಲವರ ಚಿಂತೆ. ಆದರೆ ರಾಜಕೀಯ ಪಕ್ಷಗಳಿಗೆ ಮಾತ್ರ ಈ ಗ್ರಾಮದಲ್ಲಿ ಚುನಾವಣೆಗಾಗಿ ಹಣ ಖರ್ಚು ಮಾಡುವುದು ಬೇಡ, ಚುನಾವಣಾ ಪ್ರಚಾರ ಮಾಡುವುದು ಬೇಡ. ಗ್ರಾಮಸ್ಥರ ಮತಗಳು ತಮ್ಮ ಪಕ್ಷಕ್ಕೆ ಬಂದೇ ಬರುತ್ತವೆ ಎನ್ನುವ ಲೆಕ್ಕಾಚಾರ ರಾಜಕೀಯ ಪಕ್ಷಗಳ ನಾಯಕರದ್ದು. ಆದರೆ ರಾಜಕೀಯ ಬೇಗುದಿಯ ವಿಷ ಬೀಜ ಬೆಳೆಯುತ್ತಿರುವ ಮಕ್ಕಳಲ್ಲಿ ಮೂಡಿರುವುದು ವಿಪರ್ಯಾಸದ ಸಂಗತಿಯಾಗಿದೆ.

CKB POLITICAL VILLAGE PKG 4

17 01 18 CKB POLITICAL VILLAGE PKG FESTIVAL VISUEL 2

17 01 18 CKB POLITICAL VILLAGE PKG FESTIVAL VISUEL 3

17 01 18 CKB POLITICAL VILLAGE PKG FESTIVAL VISUEL 4

CKB POLITICAL VILLAGE PKG 2

TAGGED:ChikkaballapuracongressjdspoliticsPublic TVvillageಕಾಂಗ್ರೆಸ್ಗ್ರಾಮಚಿಕ್ಕಬಳ್ಳಾಪುರಜೆಡಿಎಸ್ಪಬ್ಲಿಕ್ ಟಿವಿರಾಜಕೀಯ
Share This Article
Facebook Whatsapp Whatsapp Telegram

Cinema news

Chiranjeevi tvk vijay keerthi suresh
ಚಿರಂಜೀವಿಗಿಂತ ವಿಜಯ್ ಉತ್ತಮ ಡ್ಯಾನ್ಸರ್ – ವಿವಾದಕ್ಕೆ ತೆರೆ ಎಳೆದ ಕೀರ್ತಿ ಸುರೇಶ್
Cinema Latest South cinema Top Stories
Ugram Manju
ಬಿಗ್‌ಬಾಸ್ ಮನೆಯ ಅತಿಥಿಗಳ ಮನದಾಳದ ಮಾತು
Cinema Latest TV Shows
Heart Beat
ಜಿಯೋ ಹಾಟ್‌ಸ್ಟಾರ್‌ – ಕನ್ನಡದಲ್ಲಿ ಮೆಡಿಕಲ್ ಡ್ರಾಮಾ `ಹಾರ್ಟ್‌ಬೀಟ್‌ʼ
Cinema Latest South cinema TV Shows
Sainand 2
ನಟ ರಾಜೇಶ್ ಮೊಮ್ಮಗ ನಾಯಕನಾಗಿ ಸ್ಯಾಂಡಲ್ ವುಡ್‌ಗೆ ಎಂಟ್ರಿ
Cinema Latest Sandalwood

You Might Also Like

kashmir cold wave
Latest

ಕಾಶ್ಮೀರದಲ್ಲಿ ಚಳಿಯೋ ಚಳಿ – 2007ರ ಬಳಿಕ ಇದೇ ಮೊದಲ ಬಾರಿಗೆ ಮೈನಸ್ 4.5 ಡಿಗ್ರಿಗೆ ಇಳಿದ ತಾಪಮಾನ

Public TV
By Public TV
16 minutes ago
Fans offer prayers for CM Siddaramaiah in Chikkamagaluru 1
Chikkamagaluru

ಜಸ್ಟೀಸ್ ಫಾರ್ ಸಿದ್ದರಾಮಯ್ಯ – ಫೋಟೋ ಇಟ್ಟು ಸಿಎಂ ಪರ ಪೂಜೆ ಸಲ್ಲಿಸಿದ ಅಭಿಮಾನಿಗಳು

Public TV
By Public TV
34 minutes ago
siddaramaiah
Bengaluru City

ಸಿದ್ದರಾಮಯ್ಯನವರನ್ನು ಇಳಿಸಿದ್ರೆ ಕಾಂಗ್ರೆಸ್‌ ವಿರುದ್ಧ ಮತ – ಕುರುಬ ಸಂಘದಿಂದ ಎಚ್ಚರಿಕೆ

Public TV
By Public TV
44 minutes ago
karnataka power tussle FIR registered against miscreants for using old video of Public TV 222369
Bengaluru City

ಪಬ್ಲಿಕ್‌ ಟಿವಿಯ ಹಳೆ ವಿಡಿಯೋ ಬಳಸಿ ವೈರಲ್‌ – ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್‌ ದಾಖಲು

Public TV
By Public TV
54 minutes ago
CRIME
Bengaluru City

ಬೆಂಗ್ಳೂರು| ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ ಮಾಡಿದ್ದ ಪತ್ನಿ ಅರೆಸ್ಟ್

Public TV
By Public TV
59 minutes ago
yaduveer wadiyar
Districts

ಸಿಎಂ ಕುರ್ಚಿ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿ ಹಿನ್ನಡೆ – ಯದುವೀರ್ ಒಡೆಯರ್ ಬೇಸರ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?