Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾತಿ-ಧರ್ಮ, ಮತಕ್ಕಿಂತ ಈ ಗ್ರಾಮದಲ್ಲಿ ಪಕ್ಷವೇ ಪ್ರತಿಷ್ಠೆ-ಪ್ರತ್ಯೇಕವಾಗಿ ನಡೆಯುತ್ತೆ ಪ್ರತಿ ಹಬ್ಬ, ಆಚರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಜಾತಿ-ಧರ್ಮ, ಮತಕ್ಕಿಂತ ಈ ಗ್ರಾಮದಲ್ಲಿ ಪಕ್ಷವೇ ಪ್ರತಿಷ್ಠೆ-ಪ್ರತ್ಯೇಕವಾಗಿ ನಡೆಯುತ್ತೆ ಪ್ರತಿ ಹಬ್ಬ, ಆಚರಣೆ

Chikkaballapur

ಜಾತಿ-ಧರ್ಮ, ಮತಕ್ಕಿಂತ ಈ ಗ್ರಾಮದಲ್ಲಿ ಪಕ್ಷವೇ ಪ್ರತಿಷ್ಠೆ-ಪ್ರತ್ಯೇಕವಾಗಿ ನಡೆಯುತ್ತೆ ಪ್ರತಿ ಹಬ್ಬ, ಆಚರಣೆ

Public TV
Last updated: January 20, 2018 2:19 pm
Public TV
Share
2 Min Read
CKB POLITICAL VILLAGE PKG FESTIVAL VISUEl
SHARE

ಚಿಕ್ಕಬಳ್ಳಾಪುರ: ವಿವಿಧ ಭಾಷೆ, ಧರ್ಮ, ಜಾತಿ, ಮತ, ಪಂಥ ಗಳನ್ನು ಮೀರಿದ ಏಕತೆಯ ರೂಪವಾಗಿ ಭವ್ಯ ಭಾರತವನ್ನು ಕಾಣಬಹುದು. ಆದರೆ ಇತ್ತೀಚೆಗೆ ಜಾತಿ-ಜಾತಿ, ಧರ್ಮಗಳ ನಡುವೆಯೇ ರಾಜಕೀಯ ವ್ಯಕ್ತಿಗಳು ಕಿಚ್ಚು ಹಚ್ಚಿ ತಮ್ಮ ಬೇಳೆ ಬೇಯಿಸಿಕೊಳ್ಳುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂತಹ ಘಟನೆಗೆ ಸ್ಪಷ್ಟ ಸಾಕ್ಷಿ ಎಂಬಂತೆ ಇಲ್ಲೊಂದು ಗ್ರಾಮದ ಜನರಿಗೆ ಜಾತಿ-ಧರ್ಮಗಳಿಗಿಂತ ರಾಜಕೀಯ ಪಕ್ಷವೇ ಶ್ರೇಷ್ಠವಾಗಿದೆ. ತಮ್ಮ ಒಣ ಪ್ರತಿಷ್ಠೆಗಾಗಿ ಗ್ರಾಮದ ದೇವರಿಗೆ ಪ್ರತ್ಯೇಕ ಪೂಜೆ ಪುನಸ್ಕಾರದಲ್ಲಿ ತೊಡಗಿದ್ದಾರೆ.

ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹುಜಗೂರು ಗ್ರಾಮದಲ್ಲಿ ಇಂತಹ ಬೆಳವಣಿಗೆ ಸಾಕ್ಷಿಯಾಗಿದ್ದು, ಈ ಗ್ರಾಮದಲ್ಲಿ ವಾಸಿಸುವ 130 ಕುಟುಂಬ ಗಳಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ರಾಜಕೀಯ ಸಂಘರ್ಷಕ್ಕೆ ಹೆಸರು ಪಡೆದಿದೆ. ಗ್ರಾಮದ 130 ಕುಟುಂಬಗಳ ಪೈಕಿ 74 ಕುಟುಂಬಗಳು ಜೆಡಿಎಸ್ ಪಕ್ಷ ಬೆಂಬಲಿಸಿದರೆ, ಉಳಿದ 56 ಕುಟುಂಬಗಳು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತವೆ. ಈ ಗ್ರಾಮದಲ್ಲಿ ಜೆಡಿಎಸ್ ಬೆಂಬಲಿತರ ಮನೆಗಳು ಇರುವ ಬೀದಿಗೆ ಕಾಂಗ್ರೆಸ್ ನವರು ಹೆಜ್ಜೆ ಇಡಲ್ಲ. ಕಾಂಗ್ರೆಸ್ ಬೆಂಬಲಿತರ ಮನೆಯ ಇರುವ ಕಡೆಗೆ ಜೆಡಿಎಸ್ ನವರು ಹೆಜ್ಜೆ ಹಾಕಲ್ಲ. ಅಷ್ಟೇ ಅಲ್ಲದೇ ಪರಸ್ಪರರು ಮಾತಾಡೋದು ಅಷ್ಟಕ್ಕಷ್ಟೇ.

CKB POLITICAL VILLAGE PKG 3

ಗ್ರಾಮದ ಮನೆಯಲ್ಲಿ ಯಾರಾದರೂ ಸಾವನ್ನಪ್ಪಿದರೂ ಅವರ ಪಕ್ಷದವರು ಇವರ ಮನೆಯ ಬಳಿ ಹೋಗಲ್ಲ. ಕೊನೆಗೆ ಶುಭ ಸಮಾರಂಭಗಳಿಗೂ ಹೋಗಲ್ಲ. ಚುನಾವಣೆ ಬರಲಿ – ಮುಗಿಯಲಿ, ವರ್ಷ ಪೂರ್ತಿಯೂ ಹಾವು ಮುಂಗುಸಿಯಂತೆ ಇರುತ್ತಾರೆ ಈ ಗ್ರಾಮದ ಕುಟುಂಬಗಳು.

ಇವರ ಪಕ್ಷ ರಾಜಕೀಯ ಕಾದಾಟ ಕೇವಲ ಬರೀ ಮಾತಿನಲ್ಲಿ ನಿಲ್ಲದೇ ಹಬ್ಬ ಹರಿದಿನಗಳ ದೇವರ ಕಾರ್ಯದಲ್ಲೂ ನಡೆಯುತ್ತದೆ. ಯಾವುದೇ ಹಬ್ಬ, ರಾಷ್ಟ್ರೀಯ ಆಚರಣೆಗಳಾದ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ದಿನವನ್ನು ಪ್ರತ್ಯೇಕವಾಗಿ ಆಚರಿಸುತ್ತಾರೆ. ಇದಕ್ಕೆ ಸ್ಪಷ್ಟ ಉದಾಹರಣೆ ಎಂದರೆ ಗ್ರಾಮದಲ್ಲಿ ನಡೆಯುವ ಗಣೇಶ ಹಬ್ಬದಂದು ಬೇರೆ ಬೇರೆಯಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತಾರೆ. ಇತ್ತೀಚೆಗೆ ನಡೆದ ಸಂಕ್ರಾಂತಿ ಹಬ್ಬದಂದು ಪ್ರತ್ಯೇಕ ದೇವರ ಗುಡಿಗಳನ್ನು ನಿರ್ಮಿಸಿ ರಾಸುಗಳಿಗೆ ಕಿಚ್ಚು ಹಾಯಿಸಿ ಪೂಜೆ ನೇರವೇರಿಸಿದ್ದಾರೆ.

CKB POLITICAL VILLAGE PKG 1

ಈ ಗ್ರಾಮದಲ್ಲಿರುವ ಆಂಜನೇಯಸ್ವಾಮಿಗೆ ಶನಿವಾರ ಜೆಡಿಎಸ್ ಬೆಂಬಲಿತರು ಪೂಜೆ ಸಲ್ಲಿಸಿದರೆ, ಕಾಂಗ್ರೆಸ್ ಬೆಂಬಲಿತರು ಸೋಮವಾರ ಪೂಜೆ ಸಲ್ಲಿಸುತ್ತಾರೆ. ವಿಶೇಷ ಏನೆಂದರೆ ಕಾಂಗ್ರೆಸ್ ನವರು ಪ್ರತಿಷ್ಠಾಪಿಸಿರುವ ನವಗ್ರಹ ಕಲ್ಲುಗಳಿಗೆ ಜೆಡಿಎಸ್ ನವರು ನಮಸ್ಕಾರ ಹಾಕುವುದು ವಿರಳಾತಿ ವಿರಳ. ಅಲ್ಲದೇ ಆಟೋಗಳ ಮೂಲಕ ಪಟ್ಟಣಕ್ಕೆ ತೆರಳುವಾಗಲೂ ಸಹ ನಾವು ಕಾಂಗ್ರೆಸ್ ನೀವು ಜೆಡಿಎಸ್ ಎನ್ನುವ ಬೇಧ ಭಾವ ಕಾಣಸಿಗುತ್ತದೆ. ಇಂತಹ ಭೇದ ಭಾವಗಳು ಸದ್ಯ ಶಾಲೆಗೆ ಹೋಗುವ ಸಣ್ಣ ಮಕ್ಕಳಿಗೂ ತಟ್ಟಿದ್ದು ಅವರು ಕೂಡ ನಾವು ಜೆಡಿಎಸ್, ನಾವು ಕಾಂಗ್ರೆಸ್ ಪಕ್ಷ ಎನ್ನುವ ಮಟ್ಟಕ್ಕೆ ಬೆಳೆದು ನಿಂತಿದ್ದಾರೆ.

ಮನೆಯೊಂದು ಮೂರು ಬಾಗಿಲು ಎಂಬಂತೆ ಗ್ರಾಮವೊಂದು ಎರಡು ಮನಸ್ಥಿತಿಗಳು ಎಂಬಂತಾಗಿ ಕಾಂಗ್ರೆಸ್, ಜೆಡಿಎಸ್ ಎಂದು ವಿಭಜನೆಯಾಗಿದೆ. ಆದರೆ ಇದೇ ರೀತಿ ಪರಿಸ್ಥಿತಿ ಮುಂದುವರೆದರೆ ಗ್ರಾಮದ ಮುಂದಿನ ಮಕ್ಕಳ ಭವಿಷ್ಯ ಸ್ಥಿತಿ ಏನಾಗಬಹುದು ಎಂಬುದು ಹಲವರ ಚಿಂತೆ. ಆದರೆ ರಾಜಕೀಯ ಪಕ್ಷಗಳಿಗೆ ಮಾತ್ರ ಈ ಗ್ರಾಮದಲ್ಲಿ ಚುನಾವಣೆಗಾಗಿ ಹಣ ಖರ್ಚು ಮಾಡುವುದು ಬೇಡ, ಚುನಾವಣಾ ಪ್ರಚಾರ ಮಾಡುವುದು ಬೇಡ. ಗ್ರಾಮಸ್ಥರ ಮತಗಳು ತಮ್ಮ ಪಕ್ಷಕ್ಕೆ ಬಂದೇ ಬರುತ್ತವೆ ಎನ್ನುವ ಲೆಕ್ಕಾಚಾರ ರಾಜಕೀಯ ಪಕ್ಷಗಳ ನಾಯಕರದ್ದು. ಆದರೆ ರಾಜಕೀಯ ಬೇಗುದಿಯ ವಿಷ ಬೀಜ ಬೆಳೆಯುತ್ತಿರುವ ಮಕ್ಕಳಲ್ಲಿ ಮೂಡಿರುವುದು ವಿಪರ್ಯಾಸದ ಸಂಗತಿಯಾಗಿದೆ.

CKB POLITICAL VILLAGE PKG 4

17 01 18 CKB POLITICAL VILLAGE PKG FESTIVAL VISUEL 2

17 01 18 CKB POLITICAL VILLAGE PKG FESTIVAL VISUEL 3

17 01 18 CKB POLITICAL VILLAGE PKG FESTIVAL VISUEL 4

CKB POLITICAL VILLAGE PKG 2

TAGGED:ChikkaballapuracongressjdspoliticsPublic TVvillageಕಾಂಗ್ರೆಸ್ಗ್ರಾಮಚಿಕ್ಕಬಳ್ಳಾಪುರಜೆಡಿಎಸ್ಪಬ್ಲಿಕ್ ಟಿವಿರಾಜಕೀಯ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
30 minutes ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
31 minutes ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
50 minutes ago
01 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-1

Public TV
By Public TV
1 hour ago
02 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-2

Public TV
By Public TV
1 hour ago
03 8
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-3

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?