Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಶಿಸ್ತುಕ್ರಮಕ್ಕೆ ಹೈಕಮಾಂಡ್ ವಿಫಲ- ಯತ್ನಾಳ್‌ಗೆ ಖೆಡ್ಡಾ ತೋಡಲು ಸ್ವಪಕ್ಷೀಯ ವಿರೋಧಿಗಳಿಂದ್ಲೇ ಭಾರೀ ಸ್ಕೆಚ್?

Public TV
Last updated: January 16, 2023 1:30 pm
Public TV
Share
2 Min Read
Yatnal 1
SHARE

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ವಿರುದ್ಧ ಇದುವರೆಗೆ ಯಾವುದೇ ಶಿಸ್ತು ಕ್ರಮ ಕೈಗೊಳ್ಳಲು ಆಗಿಲ್ಲ. ಹೈಕಮಾಂಡ್‍ನಿಂದ ಕೇವಲ ಎಚ್ಚರಿಕೆ ಮಾತ್ರ, ಇಲ್ಲ ಶಿಸ್ತು ಕ್ರಮ. ರಾಜ್ಯ ಬಿಜೆಪಿ (BJP) ಯಿಂದಲೂ ಯಾವುದೇ ಕ್ರಮ ಇಲ್ಲವಾಗಿದೆ. ಯತ್ನಾಳ್ ವಿಚಾರದಲ್ಲಿ ಖುದ್ದು ಸಿಎಂ ಬೊಮ್ಮಾಯಿ (Basavaraj Bommai) ಯೂ ಅಸಹಾಯಕರೇ ಆಗಿರೋದು ಸ್ಪಷ್ಟವಾಗಿ ಗೋಚರವಾಗ್ತಿದೆ.

bjp flag

ಇಷ್ಟೆಲ್ಲ ಸನ್ನಿವೇಶಗಳು ಯತ್ನಾಳ್ ಗೆ ಪರವಾಗಿರೋದು ಸ್ವಪಕ್ಷೀಯ ವಿರೋಧಿಗಳನ್ನು ಕೆಣಕಿದೆ. ಹೀಗಾಗಿ ರಾಜ್ಯ ಬಿಜೆಪಿ ಸ್ವಪಕ್ಷೀಯ ವಿರೋಧಿಗಳೆಲ್ಲ ಇದೀಗ ಯತ್ನಾಳ್ ವಿರುದ್ಧ ಒಂದಾಗಿ ಯತ್ನಾಳ್ ಗೆ ಖೆಡ್ಡಾ ತೋಡಲು ಸ್ಕೆಚ್ ರೂಪಿಸ್ತಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಯತ್ನಾಳ್ ಆಟಾಟೋಪಕ್ಕೆ ಬಿಜೆಪಿ ವರಿಷ್ಠರು ಸುಸ್ತು- ಲಗಾಮು ಹಾಕದಷ್ಟು ವೀಕ್ ಆಯ್ತಾ ಹೈಕಮಾಂಡ್?

MURUGESH NIRANI BASANAGAUDA PATIL YATNAL.1png

ಯತ್ನಾಳ್ ವಿರುದ್ಧ ನಿರಾಣಿ (Murugesh Nirani) ಮತ್ತು ಬ್ರದರ್ಸ್ ಒಂದಾಗಿ ಗುಡುಗಿರೋದು ಈ ನಿಟ್ಟಿನಲ್ಲಿ ಹಲವು ಸುಳಿವುಗಳನ್ನು ಬಿಟ್ಟು ಕೊಡ್ತಿದೆ. ಮೊನ್ನೆ ಬೆಂಗಳೂರಿನಲ್ಲಿ ಮಾತಾಡಿದ ಸಚಿವ ಮುರುಗೇಶ್ ನಿರಾಣಿ, ಯತ್ನಾಳ್ ವಿಚಾರದಲ್ಲಿ ಇನ್ನು ತಮ್ಮ ಸಹನೆ ಮುಗೀತು. ಯತ್ನಾಳ್ ನಾಲಿಗೆಗೆ ಕಡಿವಾಣ ಹಾಕ್ತೀವಿ ಅಂತ ನೇರವಾಗಿ ವಾರ್ನಿಂಗ್ ನೀಡಿದ್ದಾರೆ.

ಶಿಖಂಡಿ ಬಸ್ಯಾ ನಡುಬೀದಿಯಲ್ಲಿ ಬೆತ್ತಲಾಗುವ ಕಾಲ ಬಂದಿದೆ. ಬಾಯಿ ಹರುಕನಂತೆ ಮಾತನಾಡುವ ನಾಮರ್ಧ ನಿನ್ನದೇ ಭಾಷೆಯಲ್ಲಿಯೇ ಉತ್ತರನೀಡುತ್ತೇನೆ. ಒಬ್ಬ ಅಪ್ಪನಿಗೆ ಹುಟ್ಟದ ನಿನಗೆ ಅಂತ್ಯ ಹಾಡುವ ಕಾಲ ಬಂದಿದೆ.ನೇರ ಕಾದಾಟಕ್ಕೆ ಕಣಕ್ಕೆ ಬಂದರೆ ನಿನ್ನ ತಾಕತ್ತು ತಿಳಿಯುತ್ತದೆ. ರಾಜಕೀಯ ಮರುಜನ್ಮ ಕೊಟ್ಟವರಿಗೆರಾಜಕೀಯ ಮರಣ ಶಾಸನ ಬರೆಯುವುದು ಗೊತ್ತಿದೆ.

— Sangamesh Nirani (@SangameshNirani) January 15, 2023

ಶಾಸಕ ಯತ್ನಾಳ್‍ಗೆ ಸಚಿವ ಮುರುಗೇಶ್ ನಿರಾಣಿಯವರ ಸಹೋದರ ಸಂಗಮೇಶ್ ನಿರಾಣಿ (Sangamesh Nirani) ಯವರು ಸಹ ಭಾನುವಾರ ಟ್ವಿಟ್ಟರ್ ಮೂಲಕ ತೀಕ್ಷ್ಣವಾಗಿ ಯತ್ನಾಳ್ ಗೆ ಎಚ್ಚರಿಕೆ ಕೊಟ್ಟಿದ್ದಾರೆ. “ಶಿಖಂಡಿ ಬಸ್ಯಾ ನಡುಬೀದಿಯಲ್ಲಿ ಬೆತ್ತಲಾಗುವ ಕಾಲ ಬಂದಿದೆ. ಬಾಯಿ ಹರುಕನಂತೆ ಮಾತನಾಡುವ ನಾಮರ್ಧ, ನಿನ್ನದೇ ಭಾಷೆಯಲ್ಲಿಯೇ ಉತ್ತರ ನೀಡುತ್ತೇನೆ. ಒಬ್ಬ ಅಪ್ಪನಿಗೆ ಹುಟ್ಟಿದ ನಿನಗೆ ಅಂತ್ಯ ಹಾಡುವ ಕಾಲ ಬಂದಿದೆ. ನೇರ ಕಾದಾಟಕ್ಕೆ ಬಂದರೆ ನಿನ್ನ ತಾಕತ್ತು ತಿಳಿಯುತ್ತದೆ. ನಿನ್ನ ರಾಜಕೀಯ ಮರಣ ಶಾಸನ ಬರೆಯುವುದು ಗೊತ್ತಿದೆ. ಮುರುಗೇಶ್ ನಿರಾಣಿ ತೇಜೋವಧೆಗೆ ನಿಂತ ಮುಠ್ಠಾಳರಿಗೆ ಕಾಲವೇ ಉತ್ತರ ನೀಡುತ್ತದೆ..” ಹೀಗೆಂದು ಟ್ವಿಟ್ಟರ್ ನಲ್ಲಿ ಪೋಸ್ಟ್ ಹಾಕಿ ಸಂಗಮೇಶ್ ನಿರಾಣಿ ಗುಡುಗಿದ್ದಾರೆ.

VIJAYENDRA 3

ಹರಿಹರದಲ್ಲಿ ಮಾತಾಡಿದ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ (B Y Vijayendra) , ಯತ್ನಾಳ್ ವಿಚಾರ ಹೈಕಮಾಂಡ್ ನೋಡಿಕೊಳ್ಳುತ್ತೆ ಎಂದು ಸುಳಿವು ಕೊಟ್ಟಿದ್ದಾರೆ. ಯತ್ನಾಳ್ ಗೆ ಎದುರಾಳಿಗಳಿಂದ ಸದ್ಯದಲ್ಲೇ ಕಂಟಕ ಎದುರಾಗುವ ಲಕ್ಷಣಗಳು ಗೋಚರವಾಗುತ್ತಿವೆ. ರಾಜಕೀಯವಾಗಿ ವಿಜಯಪುರದಲ್ಲಿ ಯತ್ನಾಳ್ ಪ್ರಭಾವ ಕುಗ್ಗಿಸಿ ಮಣಿಸಲು ಭಾರೀ ಸ್ಕೆಚ್ ರೆಡಿಯಾಗ್ತಿದೆ ಎನ್ನಲಾಗಿದೆ.

ಯತ್ನಾಳ್ ರಾಜಕೀಯ ವಿರೋಧಿಗಳ ಜೊತೆ ಸ್ವಪಕ್ಷೀಯ ವಿರೋಧಿಗಳು ಕೈ ಮಿಲಾಯಿಸುವ ಪ್ರಯತ್ನಗಳೂ ತೆರೆಮರೆಯಲ್ಲಿ ನಡೀತಿವೆ ಎನ್ನಲಾಗಿದೆ. ಒಟ್ಟಿನಲ್ಲಿ ಬಿಜೆಪಿಯ ಅಂತರ್ಯುದ್ಧ ಭಾರೀ ಕುತೂಹಲ ಮೂಡಿಸಿರೋದಂತೂ ಸತ್ಯ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:basanagauda patil yatnalbengalurubjpಬಸನಗೌಡ ಪಾಟೀಲ್ ಯತ್ನಾಳ್ಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

You Might Also Like

11A Seat
Latest

ಮೃತ್ಯುಂಜಯ `ವಿಶ್ವಾಸ್ ಎಫೆಕ್ಟ್’ – 11A ಲಕ್ಕಿ ಸೀಟಿಗೆ ಫುಲ್ ಡಿಮ್ಯಾಂಡ್!

Public TV
By Public TV
48 minutes ago
Hubballi Reels
Dharwad

ರೀಲ್ಸ್‌ ರಾಜನಿಗೆ ಬಿಸಿ ಮುಟ್ಟಿಸಿದ ಹುಬ್ಬಳ್ಳಿ ಪೊಲೀಸ್‌ – ನಿಮಗೂ ಈ ಅನುಭವ ಆಗಿರಬೇಕಲ್ವಾ?

Public TV
By Public TV
58 minutes ago
CRIME
Crime

ಖಾಸಗಿ ಅಂಗದ ಮೇಲೆ ಕಾದ ಕಬ್ಬಿಣದಿಂದ ಬರೆ ಹಾಕಿ ಚಿತ್ರಹಿಂಸೆ – ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ

Public TV
By Public TV
1 hour ago
Heavy Rain
Belgaum

ರಾಜ್ಯದ ಹಲವೆಡೆ ವರುಣಾರ್ಭಟ – ಭಾರೀ ಮಳೆಗೆ ರಸ್ತೆ ಮುಳುಗಡೆ, ಅವಾಂತರ ಸೃಷ್ಟಿ

Public TV
By Public TV
2 hours ago
Temba Bavuma 2
Cricket

ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

Public TV
By Public TV
2 hours ago
Koppal nava brindavana
Districts

ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?