ಮೈಸೂರು: ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಹತ್ಯೆ ಯತ್ನಿಸಿದ್ದ ಆರೋಪಿಯ ತನಿಖೆಯ ನಂತರ ಆತಂಕಕಾರಿ ಮಾಹಿತಿಯೊಂದು ಬಯಲಾಗಿದೆ.
ಹೌದು. ಮೈಸೂರಲ್ಲಿ ಮಹಾ ಮರ್ಡರ್ ಗೆ ಬಿಗ್ ಸ್ಕೆಚ್ ಹಾಕಲಾಗಿದೆ. ರಾಜಕಾರಣಿಗಳು, ಧರ್ಮಗುರುಗಳು, ಗಣ್ಯವ್ಯಕ್ತಿಗಳೇ ಟಾರ್ಗೆಟ್ ಆಗಿದೆ. ಈಗಾಗಲೇ 30 ತಂಡಗಳು ಸಕ್ರಿಯವಾಗಿ ಕೆಲಸಮಾಡುತ್ತಿವೆ. ಒಂದು ತಂಡದಲ್ಲಿ 15 ಜನರಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕಾರಣಿಗಳು, ಧರ್ಮಗುರುಗಳು, ಗಣ್ಯವ್ಯಕ್ತಿಗಳು, ಹಿಂದೂ ಸಂಘಟನೆ ಮುಖಂಡರುಗಳು ಹೀಗೆ ಎಲ್ಲರನ್ನೂ ವಾಚ್ ಮಾಡಲು ಪ್ರತ್ಯೇಕ ತಂಡಗಳ ರಚನೆ ಮಾಡಲಾಗಿದೆ.
ಪ್ರತಿ ಹಂತದಲ್ಲಿ ಪ್ರಮುಖ ವ್ಯಕ್ತಿಗಳ ಚಲನವಲನ ಅದರ ಪರಿಣಾಮಗಳನ್ನ ಸಂಘಟನೆ ಮುಖಂಡರಿಗೆ ಸದಸ್ಯರು ತಿಳಿಸುತ್ತಿದ್ದರು. ತನ್ವೀರ್ ಹತ್ಯೆ ಯತ್ನ ಪ್ರಕರಣವೂ ಇದೇ ರೀತಿ ವಾಚ್ ಮಾಡಿಯೇ ಮಾಡಲಾಗಿತ್ತು. ರಾಜಕೀಯವಾಗಿ ಬೇರೆ ರೀತಿ ಮುಗಿಸಲು ಸಾಧ್ಯವಾಗದಿದ್ದಾಗ ಕೊಲೆ ಯತ್ನ ಮಾಡಲಾಗಿದೆ ಎಂಬುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ತನ್ವೀರ್ ಸೇಠ್ ಹತ್ಯೆ ಯತ್ನಕ್ಕೆ ಬಾಲಿವುಡ್ ಸಿನಿಮಾ ಪ್ರೇರಣೆ
ರಾಜು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯೇ ತನ್ವೀರ್ ಕೊಲೆ ಯತ್ನ ಪ್ರಕರಣದ ಮಾಸ್ಟರ್ ಮೈಂಡ್ ಎಂಬುದು ತನಿಖೆಯಿಂದ ಖಚಿತವಾಗಿದೆ. ಅಬೀದ್ ಪಾಷಾ, ರಾಜು ಕೊಲೆಯ ಪ್ರಮುಖ ಆರೋಪಿಯಾಗಿದ್ದಾನೆ. ಈಗಾಗಲೇ ಪ್ರಕರಣದ 5 ಆರೋಪಿಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದಲ್ಲಿ ಆರೋಪಿಗಳ ಭಾಗಿ ಖಚಿತವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಘಟನೆಯ ದಿನ ಕೃತ್ಯಕ್ಕೆ ಬಳಸಿದ್ದ ಒಂದು ಬೈಕನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ತನ್ವೀರ್ ಸೇಠ್ ಕೊಲೆಗೆ ಯತ್ನ – ರಾತ್ರೋರಾತ್ರಿಯೇ ಆರೋಪಿ ಕುಟುಂಬ ಪರಾರಿ