Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಕಾರಣಿಗಳು ಬಚ್ಚಲು ಮನೆ ಇದ್ದಂತೆ: ಅನಂತ್ ಕುಮಾರ್ ಹೆಗ್ಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜಕಾರಣಿಗಳು ಬಚ್ಚಲು ಮನೆ ಇದ್ದಂತೆ: ಅನಂತ್ ಕುಮಾರ್ ಹೆಗ್ಡೆ

Bengaluru City

ರಾಜಕಾರಣಿಗಳು ಬಚ್ಚಲು ಮನೆ ಇದ್ದಂತೆ: ಅನಂತ್ ಕುಮಾರ್ ಹೆಗ್ಡೆ

Public TV
Last updated: December 25, 2017 10:03 pm
Public TV
Share
3 Min Read
ananth kumar hegde
SHARE

ಬೆಂಗಳೂರು: ರಾಜಕಾರಣಿಗಳು ದೇವರ ಮನೆಗೆ ಹೋಲಿಕೆ ಇಲ್ಲ. ರಾಜಕಾರಣಿಗಳು ಬಚ್ಚಲು ಮನೆ ಇದ್ದಂತೆ ಎಂದು ಕೇಂದ್ರ ಕೌಶಾಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯವರ ಹುಟ್ಟಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಟಾಟಾ ಇನ್ಸ್ ಟ್ಯೂಟ್ ಅಡಿಟೋರಿಯಂನಲ್ಲಿ ಮಲ್ಲೇಶ್ವರಂ ಶಾಸಕ ಡಾ.ಅಶ್ವಥ್ ನಾರಾಯಣ ನೇತೃತ್ವದಲ್ಲಿ ಗುಡ್ ಗರ್ವನರ್ಸ್ ಡೇ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿ ಮಾತನಾಡಿದರು.

ದೇವರ ಮನೆ ಒಂದು ದಿನ ಸ್ವಚ್ಛ ಮಾಡಿದರೂ ಪರವಾಗಿಲ್ಲ. ಆದರೆ ಬಚ್ಚಲು ಮನೆ ಕ್ಲೀನ್ ಮಾಡದೇ ಇದ್ರೆ ಏನಾಗುತ್ತೆ ಹೇಳಿ? ಹಾಗೇ ಇಂದಿನ ರಾಜಕಾರಣಿಗಳು ಆಗಿದ್ದಾರೆ. ನಮ್ಮ ಸರ್ಟಿಫಿಕೇಟ್‍ಗಳಿಂದ ಸಂಸ್ಕಾರ ಬಂದಿಲ್ಲ. ತಂದೆ-ತಾಯಿಗಳಿಂದ ನಮಗೆ ಸಂಸ್ಕಾರ ಬಂದಿದೆ ಎಂದು ಹೇಳಿದರು.

ಒಳ್ಳೆಯ ಆಡಳಿತ ಹೇಗಿರಬೇಕು ಅಂತ ಹೇಳಿಕೊಟ್ಟವರು ವಾಜಪೇಯಿಯವರು. ಆರೋಗ್ಯ ಸರಿಯಿಲ್ಲದಿದ್ದರೂ ದೇಶ ಹೇಗೆ ನಡೆಯುತ್ತಿದೆ ಅಂತ ಕೇಳುತ್ತಿರುತ್ತಾರೆ. ಪ್ರಜಾಪ್ರಭುತ್ವದಲ್ಲಿ ಓಟು ಪಡೆದವರಿಗೆ ಎಷ್ಟು ಜವಾಬ್ದಾರಿ ಇದೆಯೋ ಅಷ್ಟೇ ಜವಾಬ್ದಾರಿ ಓಟ್ ಹಾಕಿದವನಿಗೂ ಇರುತ್ತದೆ ಎಂದರು.

ಆಡಳಿತ ಅಂದ್ರೆ ಅದು ಮೋದಿಯವರ ಆಡಳಿತದಂತೆ ಇರಬೇಕು. ಇಡೀ ವಿಶ್ವವೇ ತಲೆಬಾಗುವ ಆಡಳಿತ ನೀಡುತ್ತಿರುವುದು ನರೇಂದ್ರ ಮೋದಿಯವರು. ಇವತ್ತು ಮೋದಿ ಬಗ್ಗಿದ್ರೆ ವಿಶ್ವದ ನಾಯಕರು ಬಗ್ಗುತ್ತಾರೆ. ಎದ್ರೆ ವಿಶ್ವದ ನಾಯಕರು ಏಳುತ್ತಾರೆ. ಯೋಗವನ್ನು ವಿಶ್ವಕ್ಕೆ ಹರಡಿಸಿದವರು ನರೇಂದ್ರ ಮೋದಿ. ಇದು ಉತ್ತಮ ಆಡಳಿತಕ್ಕೆ ಉದಾಹರಣೆ ಎಂದರು.

ಪ್ರಧಾನಿ ಮೋದಿ ಟೀಕೆ ಮಾಡಿದವರಿಗೆ ಹೆಗ್ಡೆ ಟಾಂಗ್ ಕೊಟ್ಟ ಸಚಿವರು, ಪ್ರತಿಯೊಂದಕ್ಕೂ ಇಂದಿನ ಪ್ರಧಾನಿ ಲೆಕ್ಕ ನೀಡುತ್ತಿದ್ದಾರೆ. ಹಿಂದಿನ ಸರ್ಕಾರಗಳು ಯಾವತ್ತಾದ್ರು ಲೆಕ್ಕ ಕೊಟ್ಟಿದ್ದವಾ? ಜನರ ಪ್ರತಿಯೊಂದು ಹಣಕ್ಕೂ ಮೋದಿಯವರು ಲೆಕ್ಕ ಕೊಡುತ್ತಿದ್ದಾರೆ. ಗ್ಯಾಸ್ ಸಬ್ಸಿಡಿ ಹಣದಿಂದ ಹಳ್ಳಿ ಬಡವರಿಗೆ ಗ್ಯಾಸ್ ನೀಡುತ್ತಿದ್ದಾರೆ. ಪ್ರತಿಯೊಂದಕ್ಕೂ ಲೆಕ್ಕ ನೀಡುತ್ತಿರೋರು ಮೋದಿ. ನಮ್ಮದು ಏನಿದ್ರು ಮಾಡು ಇಲ್ಲವೇ ಮಡಿ ಸಿದ್ಧಾಂತ ಎಂದರು.

ಅಭಿವೃದ್ಧಿ ಮಾಡಬೇಕು ಎಂದು ಹೇಳುತ್ತೇವೆ. ಆದರೆ ಹೇಗೆ ಅಭಿವೃದ್ಧಿ ಮಾಡಬೇಕು ಎನ್ನುವುದು ಗೊತ್ತಿಲ್ಲ. ಸೋಗಲಾಡಿ ವಿಷಯಗಳನ್ನು ಇಟ್ಟುಕೊಂಡು ಇಂದು ಚರ್ಚೆ ಮಾಡಲಾಗುತ್ತಿದೆ. ದುಡ್ಡು-ಜಾತಿ ನೋಡಿ ಇವತ್ತು ಓಟ್ ನೀಡುತ್ತಿದ್ದಾರೆ. ಸರ್ಕಾರ ಕಾಮಗಾರಿಗಳನ್ನು ಕೊಡುವುದೇ ಅಭಿವೃದ್ಧಿ ಅಂದುಕೊಂಡವರು 100ಕ್ಕೆ 99 ಜನ ಇದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಅಪ್ಪ-ಅಮ್ಮನ ಗುರುತು ಇಲ್ಲದೇ ಇರೋ ರಕ್ತವನ್ನು ಹೊಂದಿರುವವರು ಜಾತ್ಯತೀತರು: ಅನಂತಕುಮಾರ ಹೆಗ್ಡೆ

ಕಾಮಗಾರಿಗಳನ್ನು ಇಟ್ಟುಕೊಂಡು ಚರ್ಚೆ ಮಾಡುವವರು ವಿಚಾರವಾದಿಗಳು. ಜಾತಿ, ದುಡ್ಡಿನ ಹೆಸರು ಹೇಳಿಕೊಂಡು ಗೆದ್ದು ಬಂದವರು ನಿಮ್ಮನ್ನ ಅಭಿವೃದ್ಧಿ ಮಾಡ್ತಾರೆ ಎನ್ನುವುದು ನಿಮ್ಮ ಮೂರ್ಖತನ. ಜಾತಿ, ಧರ್ಮ, ಹಣ ಬಿಟ್ಟು ಆಡಳಿತ ನಡೆಸುವವನು ನಿಜವಾಗಿ ಉತ್ತಮ ಆಡಳಿತ ನೀಡುತ್ತಾನೆ. ಈ ಕೆಲಸವನ್ನ ನರೇಂದ್ರ ಮೋದಿ ಮಾಡ್ತಿದ್ದಾರೆ. ಇಡೀ ವಿಶ್ವ ಪ್ರಧಾನಿ ಮೋದಿಯವರ ಕಾರ್ಯವೈಖರಿಗೆ ಗೌರವ ನೀಡುತ್ತಿದೆ ಎಂದು ಹೇಳಿದರು.

ನನಗೆ ಪ್ರಧಾನಿಯವರು ಕೌಶಲ್ಯಾಭಿವೃದ್ಧಿ ಇಲಾಖೆಯನ್ನು ನೀಡಿದ್ದಾರೆ. ಈ ಹೊಣೆ ನೀಡುವ ವೇಳೆ ನನಗೆ ಈ ಇಲಾಖೆ ಬಗ್ಗೆ ಗೊತ್ತಿರಲಿಲ್ಲ. ಆದರೆ ಜವಾಬ್ದಾರಿ ಸಿಕ್ಕಿದ ಮೇಲೆ ತಿಳಿದುಕೊಳ್ಳುತ್ತಾ ಹೋದಾಗ ನನಗೆ ನೀಡಿರುವ ಕೌಶಲ್ಯಾಭಿವೃದ್ಧಿ ಇಲಾಖೆ ನೀರಿಲ್ಲದ ಬಾವಿ ಇದ್ದ ಹಾಗೆ ಎನ್ನುವುದು ಅರಿವಿಗೆ ಬಂತು. ನಮ್ಮ ಯುವಕರು ಸರ್ಟಿಫಿಕೇಟ್ ಮಾತ್ರ ಸಂಪಾದಿಸುತ್ತಾರೆ. ಆದರೆ ಅದಕ್ಕೆ ತಕ್ಕ ಯೋಗ್ಯತೆಗಳು ಅವರಲ್ಲಿ ಇಲ್ಲ. ಶ್ರಮ ಇಲ್ಲದೇ ಇಂದಿನ ಯುವಕರು ದೊಡ್ಡ ಕನಸು ಕಾಣುತ್ತಿದ್ದಾರೆ. ಬದುಕಿನಲ್ಲಿ ಯಶಸ್ವಿಯಾದವರ ಬದುಕಿನ ಹಿಂದೆ ಪರಿಶ್ರಮ ಇರುತ್ತದೆ. ಬೆವರನ್ನು ಚೆಲ್ಲದೇ ಸಾಧನೆ ಸಾಧ್ಯವಿಲ್ಲ. ಬದುಕು ಲಾಟರಿ ಟಿಕೆಟ್ ಅಲ್ಲ. ಪರಿಶ್ರಮ ಇಲ್ಲದೆ ಬದುಕು ಕಟ್ಟಲು ಸಾಧ್ಯವಿಲ್ಲ. ಈ ಸ್ವಭಾವ ಯುವ ಜನತೆಯಲ್ಲಿ ಇಲ್ಲ ಎಂದರು. ಇದನ್ನೂ ಓದಿ: ತಪರಾಕಿ ಸಿದ್ದರಾಮಯ್ಯನವರೇ ಸಾಕಾ, ಬೇಕಾ?-ಸಿಎಂ ವಿರುದ್ಧ ಅನಂತ್ ಕುಮಾರ್ ಹೆಗಡೆ ಕಿಡಿ

ದೇಶದ ಬದಲಾವಣೆ ಪ್ರಾರಂಭವಾಗಿದೆ. 120 ಕೋಟಿ ಜನರ ಬದಲಾವಣೆ ದಿಢೀರ್ ಅಂತ ಸಾಧ್ಯವಿಲ್ಲ. ದಿನಕ್ಕೆ 18 ಗಂಟೆ ಕೆಲಸ ಮಾಡುವ ಪ್ರಧಾನಿಗಳು ಸಿಕ್ಕಿರೋದು ನಮ್ಮ ಪುಣ್ಯ ಎಂದು ಹೇಳಿ ಮೋದಿ ಕಾರ್ಯವನ್ನು ಹೊಗಳಿದರು.

ಪ್ರತಿಕ್ರಿಯೆ ನೀಡಲ್ಲ: ಅನಂತ್ ಕುಮಾರ್ ಹೆಗ್ಡೆ ನಾಲಾಯಕ್ ಮಂತ್ರಿ ಎಂದು ಸಿದ್ದರಾಮಯ್ಯ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ಕೇಳಲು ಮುಂದಾದಾಗ, ನಾನು ಯಾವುದಕ್ಕೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿ ಭಾಷಣ ಮುಗಿದ ಕೂಡಲೇ ಅವರು ತೆರಳಿದರು.

TAGGED:ananth kumar hegdebengalurubjpministerpoliticsprime minister modiPublic TVಅನಂತ್ ಕುಮಾರ್ ಹೆಗ್ಡೆಪಬ್ಲಿಕ್ ಟಿವಿಪ್ರಧಾನಿ ಮೋದಿಬಿಜೆಪಿಬೆಂಗಳೂರುರಾಜಕೀಯಸಚಿವ
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

Bhuvaneshwar Kumar RCB Fast Bowler
Cricket

ಐಪಿಎಲ್‌ನಲ್ಲಿ 200 ವಿಕೆಟ್ – ಭುವಿ ಮೊದಲ ವೇಗಿ

Public TV
By Public TV
29 seconds ago
RCB vs CSK
Bengaluru City

ಚೆನ್ನೈ ಮಾನ ಕಾಪಾಡಿದ ಆಲ್‌ರೌಂಡರ್ಸ್‌ – ಆರ್‌ಸಿಬಿಗೆ ಟರ್ನಿಂಗ್‌ ಕೊಟ್ಟ 19ನೇ ಓವರ್‌!

Public TV
By Public TV
31 minutes ago
Mojtaba Khamenei Donald Trump
Latest

ನಷ್ಟ ಪರಿಹಾರವಿಲ್ಲದೇ ಹಾರ್ಮುಜ್ ತೆರೆಯಲ್ಲ – ಟ್ರಂಪ್ ಡೆಡ್‌ಲೈನ್‌ಗೆ ಇರಾನ್ ಕೌಂಟರ್

Public TV
By Public TV
33 minutes ago
Tim David 03
Cricket

18 ವರ್ಷಗಳ ಇತಿಹಾಸ ಬದಲಿಸಿದ ಆರ್‌ಸಿಬಿ ಬಾಯ್ಸ್‌ – ಒಂದೇ ಮ್ಯಾಚ್‌ ಹಲವು ದಾಖಲೆ ನುಚ್ಚುನೂರು

Public TV
By Public TV
50 minutes ago
Tim David
Cricket

ಆರ್‌ಸಿಬಿ ಬ್ಯಾಟರ್‌ಗಳ ಆರ್ಭಟಕ್ಕೆ ಸಿಎಸ್‌ಕೆ ಸುಸ್ತು – 106 ಮೀಟರ್‌ ಸಿಕ್ಸರ್‌ ಬಾರಿಸಿ ಬೈಬೈ ಹೇಳಿದ ಡೇವಿಡ್‌

Public TV
By Public TV
1 hour ago
Auto Gas Problem
Bengaluru City

ಸರ್ಕಾರದ ನಡೆಗೆ ಆಟೋ ಸಂಘಟನೆಗಳ ಆಕ್ರೋಶ – ಇದೇ ವಾರ ಸಿಎಂ, ಸಚಿವರ ಭೇಟಿಗೆ ನಿರ್ಧಾರ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?