Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮಲ್ಲಿ ವ್ಯವಸಾಯ ಹಾಳಾಗುವುದಕ್ಕೂ ರಾಜಕಾರಣಿಗಳು ಕಾರಣ: ಎಸ್.ಎಲ್ ಭೈರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಮ್ಮಲ್ಲಿ ವ್ಯವಸಾಯ ಹಾಳಾಗುವುದಕ್ಕೂ ರಾಜಕಾರಣಿಗಳು ಕಾರಣ: ಎಸ್.ಎಲ್ ಭೈರಪ್ಪ

Districts

ನಮ್ಮಲ್ಲಿ ವ್ಯವಸಾಯ ಹಾಳಾಗುವುದಕ್ಕೂ ರಾಜಕಾರಣಿಗಳು ಕಾರಣ: ಎಸ್.ಎಲ್ ಭೈರಪ್ಪ

Public TV
Last updated: September 29, 2019 1:06 pm
Public TV
Share
3 Min Read
s.l bhairappa
SHARE

– ಚಾಮುಂಡಿ ಬೆಟ್ಟ ಟೂರಿಸ್ಟ್ ಸ್ಪಾಟಾ ಅಥವಾ ಧಾರ್ಮಿಕ ಕೇಂದ್ರವೇ?
– ಸಮಾಜದಲ್ಲಿ ಹೆಣ್ಣಿಗೆ ವಿಶೇಷ ಸ್ಥಾನ ಕೊಟ್ಟಿದ್ದೇವೆ ಎಂದರು.

ಮೈಸೂರು: ನಮ್ಮಲ್ಲಿ ವ್ಯವಸಾಯ ಹಾಳಾಗುವುದಕ್ಕೂ ರಾಜಕಾರಣಿಗಳು ಎಂದು ಎಸ್.ಎಲ್ ಭೈರಪ್ಪ ಹೇಳಿದ್ದಾರೆ.

ದಸರಾ ಮಹೋತ್ಸವಕ್ಕೆ ಚಾಲನೆ ನೀಡಿ ಉದ್ಘಾಟನಾ ಭಾಷಣ ಮಾಡಿದ ಅವರು, ಹಳ್ಳಿ ಕಡೆಯಲ್ಲಿ ಸ್ಪಲ್ಪ ತಂಪು ಇರುವಾಗ ಹೊಲದ ಕೆಲಸ ಮಗಿಸುತ್ತಾರೆ. ಆದರೆ ಚುನಾವಣೆ ಬಂದ ಮೇಲೆ ಆ ವ್ಯವಸ್ಥೆ ಬಹುತೇಕ ಕಡೆ ಮರೆಯಾಗಿದೆ. ಕಾಯಕ ನಿಷ್ಠೆ ಕಡಿಮೆಯಾಗುತ್ತಿದೆ. ಆದ್ದರಿಂದ ನಮ್ಮಲ್ಲಿ ವ್ಯವಸಾಯ ಹಾಳಾಗುತ್ತಿರುವುದಕ್ಕೆ ರಾಜಕಾರಣಿಗಳು ಕಾರಣ ಎಂದು ಹೇಳಿದರು. ಇದನ್ನೂ ಓದಿ: ಸಾಹಿತಿ ಎಸ್.ಎಲ್ ಭೈರಪ್ಪ ಅವರಿಗೆ ಅಗೌರವ

mys dasara 2 1

ಬಸವಣ್ಣನವರು ಕಾಯಕ ನಿಷ್ಠೆ, ಜಾತಿ ವಿನಾಶ ಬಗ್ಗೆ ಮಾತಾಡಿದರು. ಅನ್ಯ ಜಾತಿ ನಡುವೆ ಮದುವೆ ಮಾಡಿದರು. ಜಾತಿ ವಿನಾಶದ ಕಲ್ಪನೆ ಬಹಳ ಒಳ್ಳೆಯದು. ಆದರೆ ಅವತ್ತಿನ ಕಾಲಕ್ಕೆ ಜನ ಅದನ್ನು ಒಪ್ಪಿಕೊಳ್ಳುವ ಸ್ಥಿತಿ ಇರಲಿಲ್ಲ. ಅವತ್ತು ಸಮಾಜ ಅದಕ್ಕೆ ಪಕ್ವ ಇರಲಿಲ್ಲ. ಆಗ ಗಂಡು ಹೆಣ್ಣಿನ ನಡುವೆ ಆರ್ಥಿಕ ಸಮಾನತೆ ಬಂದಿದೆ. ಈಗ ಜಾತಿ ಮೀರಿ ಪ್ರೀತಿಸಿ ಮದುವೆಗಳು ನಡೆಯುತ್ತಿವೆ. ಬಸವಣ್ಣನವರ ಜಾತಿ ವಿನಾಶದ ತತ್ವ ಪರಿಪಾಲನೆಗೆ ಈಗ ಕಾಲ ಪಕ್ವ ಆಗಿದೆ. ಹಾಗಂತ ಬಲವಂತವಾಗಿ ಅಂತರ್ಜಾತಿ ವಿವಾಹ ಮಾಡಿಸುತ್ತೇನೆ ಎಂದು ಯಾರು ಹೋಗಬಾರದು. ಸಾಹಿತಿಗಳು ಬಸವಣ್ಣನವರು ಆಲೋಚನೆ ಜಾರಿಗೆ ತರುವುದಕ್ಕೆ ಪ್ರಯತ್ನ ಮಾಡಬೇಕು. ಅದನ್ನು ಬಿಟ್ಟು ಲಿಂಗಾಯತ, ವೀರಶೈವ ಎಂದು ಚರ್ಚೆಗೆ ಇಳಿಯಬಾರದು ಎಂದು ಕಿವಿ ಮಾತು ಹೇಳಿದರು.

mys dasara 3 1

ಚಾಮುಂಡಿ ಬೆಟ್ಟಕ್ಕೆ ಬರೋದು ದೇವರ ದರ್ಶನಕ್ಕೋ ಶಾಂಪಿಂಗ್‍ಗೋ? ಚಾಮುಂಡಿ ಬೆಟ್ಟ ಟೂರಿಸ್ಟ್ ಸ್ಪಾಟಾ ಅಥವಾ ಧಾರ್ಮಿಕ ಕೇಂದ್ರವಾ? ಶಾಂಪಿಂಗ್ ಮಾಡಲು ಮೈಸೂರು ನಗರದ ಒಳಗೆ ವ್ಯವಸ್ಥೆ ಇಲ್ವಾ ಎಂದು ಪ್ರಶ್ನಿಸಿದರು. ಶಾಂತಿಯಿಂದ ದೇವರನ್ನು ಪ್ರಾರ್ಥಿಸಲು ಅನುಕೂಲವಾಗಲಿ, ಮನಸ್ಸಿಗೆ ಶಾಂತಿ ಸಿಗಲಿ ಎಂದು ದೇವಸ್ಥಾನ, ಗುಡಿಗಳನ್ನು ಮಾಡಿದ್ದಾರೆ. ಆದರೆ ಈಗ ಹಲವಾರು ಕಡೆ ಧಾರ್ಮಿಕ ಕ್ಷೇತ್ರಗಳನ್ನು ಪ್ರವಾಸಿ ತಾಣವಾಗಿ ಮಾಡಿಬಿಟ್ಟಿದ್ದಾರೆ. ವಾಣಿಜ್ಯ ಮಳಿಗೆಗಳು, ಅದು, ಇದು ಎಂದು ಸಾಕಷ್ಟು ಅಂಗಡಿಗಳು, ಪ್ರವಾಸಿಗರು ಬರುತ್ತಾರೆ. ಈ ಗಲಾಟೆಯ ಮಧ್ಯೆ ಶಾಂತಿ ಎಲ್ಲಿ ಸಿಗುತ್ತೆ ಎಂದು ಚಾಮುಂಡಿ ಬೆಟ್ಟದಲ್ಲಿ ಹೊಸ ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ ಭೈರಪ್ಪ ಅಸಮಾಧಾನ ವ್ಯಕ್ತಪಡಿಸಿದರು.

mys sl byrappa

ಕೆಲವರು ನೀವು ವಿಚಾರವಾದಿಗಳು ದೇವರ ಮೇಲೆ ನಂಬಿಕೆ ಇಲ್ಲ ಎಂದಿದ್ದರು. ಆದರೆ ದೇವರ ಮೇಲೆ ನಂಬಿಕೆ ಇಲ್ಲ ಎಂದು ನಾನು ಎಂದೂ ಹೇಳಿಲ್ಲ. ದೇವರು ಇದ್ದನಾ? ಇಲ್ಲವಾ? ಎಂದು ತಿಳಿಸಲು ಒಂದು ಬಾಲಕ ಹಾಗೂ ಸೂಜಿಯ ಕಥೆ ಹೇಳಿದರು. ಬಳಿಕ ದೇವರಿಗೆ ಎಂದು ಲಿಂಗ ಭೇದ ಮಾಡಬಾರದು. ದೇವರು ಇದ್ದಾನೆಯೇ? ಇದ್ದಾಳೇಯೇ? ಎನ್ನುವುದಕ್ಕಿಂತ ದೇವರು ಇದೇಯೇ ಎಂದು ಕೇಳಬೇಕಿದೆ. ವಿಚಾರವಾದಿಗಳಿಗೆ ಕೇಳಿದರೆ ಇಲ್ಲ ಎಂದು ಹೇಳುತ್ತಾರೆ. ವಿಚಾರವಾದಿಗಳು ದೇವರು ಇಲ್ಲ ಅನ್ನೋದು ಉದ್ಧಟತನದ ಮಾತು ಎಂದು ದಸರಾ ಉದ್ಘಾಟಿಸಿ, ಭೈರಪ್ಪ ಅವರು ದೇವರ ಬಗ್ಗೆ ಉಲ್ಲೇಖಿಸಿದರು.

 s.l bhairappa 1

ನಮ್ಮ ಸಂಸ್ಕೃತಿಯಲ್ಲಿ ಹೆಣ್ಣು ದೇವತೆ ಪ್ರಧಾನವಾದದ್ದು, ಪ್ರತಿ ಊರಲ್ಲೂ ಗ್ರಾಮದೇವತೆ ಇರುತ್ತೆ. ಹೆಣ್ಣನ್ನು ದೇವರ ರೂಪದಲ್ಲಿ ನೋಡುತ್ತೇವೆ ಎನ್ನುವುದು ಇದರ ಅರ್ಥ. ಮೊದಲು ತಾಯಿಗೆ ನಮಸ್ಕರಿಸಿ ನಂತರ ತಂದೆಗೆ ನಮಸ್ಕರಿಸುವ ಪದ್ಧತಿ ಇದೆ. ಆದರೂ, ನಮ್ಮ ದೇಶದಲ್ಲಿ ಹೆಣ್ಣಿಗೆ ಗೌರವ ಇಲ್ಲ ಎಂದು ಕೆಲವರು ಹೇಳುತ್ತಾರೆ. ಹೆಣ್ಣನ್ನು ತುಳಿಯುವ ಸಮಾಜವಿದು ಎಂದು ವಿನಾಃಕಾರಣ ಹೇಳುತ್ತಾರೆ. ಆದರೆ ನಮ್ಮಲ್ಲಿ ಪುರುಷ ದಬ್ಬಾಳಿಕೆ ಇಲ್ಲ. ನಮ್ಮ ಸಮಾಜದಲ್ಲಿ ಹೆಣ್ಣಿಗೆ ವಿಶೇಷ ಸ್ಥಾನ ಕೊಟ್ಟಿದ್ದೇವೆ ಎಂದರು.

ಇದೇ ವೇಳೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶವಿಲ್ಲ ಎಂಬ ವಿಚಾರವಾಗಿ ಮಾತನಾಡಿ, ಅದು ಆ ದೇವಸ್ಥಾನದ ಆಚಾರ-ವಿಚಾರ. ಇದನ್ನು ಪ್ರಶ್ನಿಸಿ ಕೆಲವು ವಿಚಾರವಾದಿಗಳು ನ್ಯಾಯಾಲಯಕ್ಕೆ ಹೋದರು. ಕೆಲವರು ಬಲವಂತವಾಗಿ ಕೆಲ ಮಹಿಳೆಯರನ್ನು ದೇವಸ್ಥಾನದ ಒಳಗೆ ನುಗ್ಗಿಸಿದರು. ಆ ನುಗ್ಗಿಸಿದ ಮಹಿಳೆಯರಲ್ಲಿ ಒಬ್ಬ ಮುಸ್ಲಿಂ ಇದ್ದರು. ನಂತರ, ಆಕೆಗೆ ಆ ಧರ್ಮದಿಂದ ಹೊರಗೆ ಹಾಕ್ತಿವಿ ಎಂದು ಎಚ್ಚರಿಸಿದ್ದರು. ಸರ್ಕಾರ ಧಾರ್ಮಿಕ ವಿಚಾರಕ್ಕೆ ಏಕೆ ಹೋಗಬೇಕು? ಸಮಾನತೆ ಕಲ್ಪನೆ ಯಾವತ್ತೂ ಒಂದೇ ಥರದಲ್ಲಿ ಇರುವುದಿಲ್ಲ ಎಂದು ಹೇಳಿದರು.

TAGGED:chamundi bettaDasara 2019Dasara inaugurationmysuruPublic TVS.L Bhairappaಎಸ್.ಎಲ್ ಭೈರಪ್ಪಚಾಮುಂಡಿ ಬೆಟ್ಟದಸರಾ 2019ದಸರಾ ಉದ್ಘಾಟನೆಪಬ್ಲಿಕ್ ಟಿವಿಮೈಸೂರು
Share This Article
Facebook Whatsapp Whatsapp Telegram

Cinema news

Pavithra Gowda 1
ಪವಿತ್ರಗೌಡಗೆ ಮನೆ ಊಟ ನಿರಾಕರಿಸಿದ್ದು ಒಳ್ಳೆಯದು – ಅಲೋಕ್ ಕುಮಾರ್
Cinema Districts Karnataka Latest Sandalwood Shivamogga States Top Stories
CM Siddaramaiah congratulates Gilli Nata on winning Kannada Bigg Boss
ಬಿಗ್‌ಬಾಸ್‌ ಗೆದ್ದ ಗಿಲ್ಲಿಯನ್ನು ಅಭಿನಂದಿಸಿದ ಸಿಎಂ
Bengaluru City Cinema Districts Karnataka Latest Top Stories TV Shows
Payal Changappa
ʻಅಮೃತ ಅಂಜನ್‌ʼ ಸಿನಿಮಾದ ಫೀಲಿಂಗ್‌ ಸಾಂಗ್‌ ರಿಲೀಸ್‌
Cinema Latest Sandalwood
Life Ellind Ellige
`ಲೈಫ್ ಎಲ್ಲಿಂದ ಎಲ್ಲಿಗೆ’ ಅಂತ ಹಾಡಿದ ಟೀಮ್
Cinema Latest Sandalwood Top Stories

You Might Also Like

01 21
Big Bulletin

ಬಿಗ್‌ ಬುಲೆಟಿನ್‌ 22 January 2026 ಭಾಗ-1

Public TV
By Public TV
3 hours ago
Rajeshwari Gayakwad
Cricket

ಕನ್ನಡತಿ ರಾಜೇಶ್ವರಿ ಮ್ಯಾಜಿಕ್‌, 45 ರನ್‌ಗಳ ಜಯ – ಕೊನೆಯಲ್ಲಿದ್ದ ಗುಜರಾತ್‌ 2ನೇ ಸ್ಥಾನಕ್ಕೆ ಜಂಪ್‌

Public TV
By Public TV
3 hours ago
02 18
Big Bulletin

ಬಿಗ್‌ ಬುಲೆಟಿನ್‌ 22 January 2026 ಭಾಗ-2

Public TV
By Public TV
3 hours ago
03 15
Big Bulletin

ಬಿಗ್‌ ಬುಲೆಟಿನ್‌ 22 January 2026 ಭಾಗ-3

Public TV
By Public TV
3 hours ago
Leopard
Chamarajanagar

ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತನ ಕೊಂದಿದ್ದ ಚಿರತೆ ಸೆರೆ – ಮೃತನ ಕುಟುಂಬಕ್ಕೆ 5 ಲಕ್ಷ ಪರಿಹಾರ ವಿತರಣೆ

Public TV
By Public TV
3 hours ago
let recruitment case nia court sentences key accused to 10 years ri
Crime

ಉಗ್ರ ಸಂಘಟನೆಗೆ ಯುವಕರ ನೇಮಕಾತಿ ಪ್ರಕರಣ – ಶಿರಸಿಯ ವ್ಯಕ್ತಿಗೆ 10 ವರ್ಷ ಕಠಿಣ ಶಿಕ್ಷೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?