ಬೆಂಗಳೂರು: ಸಚಿವ ಕೃಷ್ಣ ಬೈರೇಗೌಡ(Krishna Byre Gowda) ಅವರ ಕಾರ್ಯವೈಖರಿಯನ್ನು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು( HD Deve Gowda) ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.
ಇಂದು ಬಿಡದಿ ಟೌನ್ಶಿಪ್ (Bidadi Township) ವಿಚಾರದ ಬಗ್ಗೆ ಜೆಪಿ ಭವನದಲ್ಲಿ ಹೆಚ್ಡಿಡಿ ತುರ್ತು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಕೇಳಲಾದ ಪ್ರಶ್ನೆಗೆ, “ರಾಜಕೀಯವೇ ಬೇರೆ, ಮಾಡುವ ಕೆಲಸವೇ ಬೇರೆ. ಕೃಷ್ಣ ಬೈರೇಗೌಡ ಅವರು ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಅಧಿಕಾರ ವಹಿಸಿಕೊಂಡಾಗಿನಿಂದಲೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಇಳಿಸಲು ಹೈಕಮಾಂಡ್ಗೆ ಕೊಟ್ಟ ಭರವಸೆ ಈಡೇರಿಸಲು ಟೌನ್ಶಿಪ್ – ಡಿಕೆಶಿ ವಿರುದ್ಧ ಹೆಚ್ಡಿಡಿ ಸ್ಫೋಟಕ ಆರೋಪ
ವಿಶೇಷವಾಗಿ ಬೀದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಮತ್ತು ಅವರನ್ನು ಸೂಕ್ತ ಜಾಗಕ್ಕೆ ಸ್ಥಳಾಂತರಿಸುವ ನಿಟ್ಟಿನಲ್ಲಿ ಅವರು ಮಾಡುತ್ತಿರುವ ಕೆಲಸಗಳು ಶ್ಲಾಘನೀಯ ಎಂದು ಹೇಳಿದರು.
ಸಾಮಾನ್ಯವಾಗಿ ಆಡಳಿತ ಪಕ್ಷದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸುವ ದೇವೇಗೌಡರು, ವಿಪಕ್ಷದಲ್ಲಿದ್ದರೂ ಸಚಿವರೊಬ್ಬರ ಸಾರ್ವಜನಿಕ ಹಿತಾಸಕ್ತಿಯ ಕೆಲಸವನ್ನು ಗುರುತಿಸಿ ಬೆನ್ನುತಟ್ಟಿರುವುದು ವಿಶೇಷ.
