Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ತಬ್ಧಚಿತ್ರ ರಾಜಕಾರಣ ಸಿಎಂಗೆ ಶೋಭೆ ತರಲ್ಲ: ಪ್ರಹ್ಲಾದ್ ಜೋಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸ್ತಬ್ಧಚಿತ್ರ ರಾಜಕಾರಣ ಸಿಎಂಗೆ ಶೋಭೆ ತರಲ್ಲ: ಪ್ರಹ್ಲಾದ್ ಜೋಶಿ

Bengaluru City

ಸ್ತಬ್ಧಚಿತ್ರ ರಾಜಕಾರಣ ಸಿಎಂಗೆ ಶೋಭೆ ತರಲ್ಲ: ಪ್ರಹ್ಲಾದ್ ಜೋಶಿ

Public TV
Last updated: January 11, 2024 1:35 pm
Public TV
Share
2 Min Read
SIDDARAMAIAH PRALHAD JOSHI
SHARE

– ಸಿಎಂ ಆರೋಪಕ್ಕೆ ಜೋಶಿ ಪ್ರತ್ಯುತ್ತರ

ಬೆಂಗಳೂರು: ಗಣರಾಜ್ಯೋತ್ಸವಕ್ಕೆ (Republic Day) ಕರುನಾಡಿನ ಸ್ತಬ್ಧಚಿತ್ರ ಆಯ್ಕೆ ಆಗದಿರುವುದನ್ನೇ ಮುಂದಿಟ್ಟುಕೊಂಡು ಕೀಳುಮಟ್ಟದ ರಾಜಕಾರಣ ಮಾಡುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶೋಭೆ ತರುವುದಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಕಿವಿಮಾತು ಹೇಳಿದ್ದಾರೆ.

ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಸ್ತಬ್ಧಚಿತ್ರವನ್ನು (Tableau) ಆಯ್ಕೆ ಮಾಡದೆ ಕರುನಾಡಿಗೆ ಕೇಂದ್ರ ಸರ್ಕಾರ (Central Govt) ಅವಮಾನ ಮಾಡಿದೆ ಎಂಬ ಸಿದ್ದರಾಮಯ್ಯ (Siddaramaih) ಟೀಕೆಗೆ ಜೋಶಿ ಅವರು ಎಕ್ಸ್‌ ಮೂಲಕ ಪ್ರತ್ಯುತ್ತರ ಕೊಟ್ಟಿದ್ದಾರೆ.

ಮಾನ್ಯ ಸಿದ್ದರಾಮಯ್ಯನವರೇ,

ರಾಜಕೀಯ ಮಾಡಬೇಕು ನಿಜ, ಆದರೆ ಎಲ್ಲದರಲ್ಲೂ ರಾಜಕೀಯ ಮಾಡುವುದು, ಅದೂ ಸುಳ್ಳು ಹೇಳಿಕೊಂಡು ಜನರನ್ನು ಮೂರ್ಖರನ್ನಾಗಿಸುವುದು ನಿಮಗಾಗಲಿ ನಿಮ್ಮ ಸ್ಥಾನಕ್ಕಾಗಲಿ ಶೋಭೆ ತರುವುದಿಲ್ಲ.

2015 ರಿಂದ 2023 ವರೆಗೆ ಕರ್ನಾಟಕವು ಪ್ರತಿ ವರ್ಷವೂ ಗಣರಾಜ್ಯೋತ್ಸವದ ಸ್ತಬ್ಧಚಿತ್ರ ಪ್ರದರ್ಶನ ಮಾಡಿದೆ.

26 ಜನವರಿ 2024 ರ ವರೆಗೆ… https://t.co/Ct6ZpSP55w

— Pralhad Joshi (@JoshiPralhad) January 10, 2024

ಎಕ್ಸ್‌ನಲ್ಲೇನಿದೆ..?: ಸಿದ್ದರಾಮಯ್ಯನವರೇ ರಾಜಕೀಯ ಮಾಡಬೇಕು ನಿಜ. ಆದರೆ ಎಲ್ಲದರಲ್ಲೂ ರಾಜಕೀಯ ಮಾಡುವುದು, ಸುಳ್ಳು ಹೇಳಿಕೊಂಡು ಜನರನ್ನು ಮೂರ್ಖರನ್ನಾಗಿಸುವುದು ನಿಮಗಾಗಲಿ, ನಿಮ್ಮ ಸ್ಥಾನಕ್ಕಾಗಲಿ ಶೋಭೆ ತರದು ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾವು ಶ್ರೀರಾಮಚಂದ್ರನನ್ನು ಪೂಜಿಸ್ತೀವಿ, ಬಿಜೆಪಿ ರಾಜಕೀಯಕ್ಕೆ ನಮ್ಮ ವಿರೋಧ: ಸಿಎಂ

Siddaramaiah 13

2015 ರಿಂದ 2023 ರವರೆಗೆ ಕರ್ನಾಟಕ ಪ್ರತಿ ವರ್ಷ ಗಣರಾಜ್ಯೋತ್ಸವ ವೇಳೆ ಸ್ತಬ್ಧಚಿತ್ರ ಪ್ರದರ್ಶನ ಮಾಡಿದೆ. ಅದನ್ನರಿತು ರಾಜಕಾರಣ ಮಾಡಿ ಎಂದು ಸಲಹೆ ನೀಡಿದ್ದಾರೆ. ಜೊತೆಗೆ ಗಣರಾಜ್ಯೋತ್ಸವ ಸಂದರ್ಭದಲ್ಲಿ ಈವರೆಗೆ ಕರ್ನಾಟಕಕ್ಕೆ ಸ್ತಬ್ಧಚಿತ್ರ ಪ್ರದರ್ಶಿಸಲು ಬರೋಬ್ಬರಿ 14 ಅವಕಾಶಗಳಿದ್ದವು. ಅಂದರೆ ಕೇಂದ್ರದಲ್ಲಿ ಬಿಜೆಪಿ (BJP) ಇದ್ದಾಗಲೇ 10 ಬಾರಿ ಕರುನಾಡಿನ ಸ್ತಬ್ಧಚಿತ್ರ ಪ್ರದರ್ಶನವಾಗಿದೆ. ಸಿಎಂ ಇದನ್ನು ಮರೆತಂತೆ ಇದೆ ಎಂದು ಜೋಶಿ ಲೇವಡಿ ಮಾಡಿದ್ದಾರೆ.

2007, 2009 ಹಾಗೂ 2010 ರಲ್ಲಿ ಕರ್ನಾಟಕಕ್ಕೆ ಸ್ತಬ್ಧಚಿತ್ರ ಪ್ರದರ್ಶಿಸಲು ಅವಕಾಶ ಸಿಗಲಿಲ್ಲವಲ್ಲ. ಆಗ ಎಲ್ಲಿ ಹೋಗಿತ್ತು ನಿಮ್ಮ ನಾಡಪ್ರೇಮ? ಆಗ ಏಕೆ ಪ್ರಶ್ನಿಸಲಿಲ್ಲ? ಆ ಅವಧಿಯಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ಆಗ ಕರ್ನಾಟಕಕ್ಕೆ ಅವಮಾನ ಆಗಿರಲಿಲ್ಲವೇ? ಎಂದು ಸಚಿವ ಜೋಶಿ ಅವರು ಪ್ರಶ್ನಿಸಿದ್ದಾರೆ. ಅಲ್ಲದೆ ಆಗಿಲ್ಲದ ಅವಮಾನ ಪದ ಈಗೇಕೆ? ಎಂಬುದು ಜನರಿಗೆ ಅರ್ಥವಾಗುತ್ತದೆ. ಜನರೇನು ಮೂರ್ಖರಲ್ಲ ಎಂದು ಕೇಂದ್ರ ಸಚಿವರು ಕಿಡಿಕಾರಿದ್ದಾರೆ.

ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ…

— Siddaramaiah (@siddaramaiah) January 9, 2024

ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ಕೊಡುವುದು ನಮ್ಮ ಕೈಯಲಿಲ್ಲ. ಎಲ್ಲವೂ ನ್ಯಾಯ ಬದ್ಧವಾಗಿಯೇ ನಡೆದಿದೆ. ಆಯ್ಕೆಗಾಗಿ ಆಯಾ ಕ್ಷೇತ್ರದ ಹೆಸರಾಂತ ಕಲಾವಿದರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿತ್ತು. ಅದರಂತೆ ಆಯ್ಕೆ ನಡೆದಿದೆ. ಸಂಸ್ಕ್ರತಿ, ಕಲೆ, ದೇಶ- ರಾಜ್ಯದ ಗೌರವ ಬಿಂಬಿಸುವ, ಸಾದರಪಡಿಸುವ ವಿಷಯದಲ್ಲಿ ಬಿಜೆಪಿ ಎಂದೂ ರಾಜಕಾರಣ ಮಾಡುವುದಿಲ್ಲ. ಅದೇನಿದ್ದರೂ ಕಾಂಗ್ರೆಸ್ ನ (Congress) ಚಾಳಿ ಎಂದು ಪ್ರಹ್ಲಾದ್ ಜೋಶಿ ಸಿಎಂಗೆ ಛಾಟಿ ಬೀಸಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯಗಳ ವಿಷಯದಲ್ಲಿ ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಎಂಬಂತೆ ಮಾಡುವುದಿಲ್ಲ. ಸಿದ್ದರಾಮಯ್ಯ ಅವರು ಒಬ್ಬ ಮುಖ್ಯಮಂತ್ರಿ ಆಗಿ ನಮ್ಮ ಸ್ತಬ್ಧಚಿತ್ರವನ್ನು ಮೊದಲು ಪ್ರದರ್ಶನ ಮಾಡಲು ಬಿಡಲಿಲ್ಲ. ಅವಮಾನವಾಯಿತು ಎನ್ನುವುದು ತರವಲ್ಲ ಎಂದು ಖಂಡಿಸಿದ್ದಾರೆ.

TAGGED:bengaaluruPralhad Joshirepublic daysiddaramaiahಕಾಂಗ್ರೆಸ್ಗಣರಾಜ್ಯೋತ್ಸವಪ್ರಹ್ಲಾದ್ ಜೋಶಿಬಿಜೆಪಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Benjamin Netanyahu 1
Latest

ಪಾಕಿಗೆ ಮುಖಭಂಗ – ಲೆಬನಾನ್‌ ಮೇಲೆ ದಾಳಿ ಮುಂದುವರಿಯಲಿದೆ ಎಂದ ಇಸ್ರೇಲ್‌

Public TV
By Public TV
3 minutes ago
10th student from Kerala Missing In Chikkamagaluru Mullayanagiri
Chikkamagaluru

ಕೇರಳದಿಂದ ಪ್ರವಾಸ ಬಂದಿದ್ದ 10ನೇ ತರಗತಿ ವಿದ್ಯಾರ್ಥಿನಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನಾಪತ್ತೆ

Public TV
By Public TV
53 minutes ago
Bengaluru Mallathahalli Wife Kills Husband
Bengaluru City

ಚಾಕುವಿನಿಂದ ಇರಿದು ಹೆಂಡತಿಯಿಂದಲೇ ಗಂಡನ ಕೊಲೆ

Public TV
By Public TV
1 hour ago
Pakistan PM Shehbaz Sharif gets trolled over post on US Iran ceasefire Donald Trump
Latest

ಕದನ ವಿರಾಮ ಘೋಷಣೆಯಲ್ಲೂ ಎಡವಟ್ಟು – ಈಗ ಪಾಕ್‌ ಪ್ರಧಾನಿ ಫುಲ್‌ ಟ್ರೋಲ್‌

Public TV
By Public TV
1 hour ago
Tehran Ceasefire Victory
Latest

ಕದನ ವಿರಾಮ ಘೋಷಣೆ – ಟೆಹ್ರಾನ್‌ನ ಪ್ರಮುಖ ಬೀದಿಗಳಲ್ಲಿ ರಾಷ್ಟ್ರಧ್ವಜ ಹಿಡಿದು ವಿಜಯೋತ್ಸವ ಆಚರಣೆ

Public TV
By Public TV
2 hours ago
oil price fall
Latest

ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಕಚ್ಚಾ ತೈಲ ದರ ದಿಢೀರ್‌ ಭಾರೀ ಕುಸಿತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?