ಪೇಜಾವರ ಶ್ರೀಗಳ ಪೂಜಾ ಸಾಮಾಗ್ರಿಗಳು ಬೆಂಗ್ಳೂರಿಗೆ ಶಿಫ್ಟ್

Public TV
1 Min Read
pejawara pooja items

ಉಡುಪಿ: ಪೇಜಾವರ ಮಠದ ಆವರಣದಲ್ಲಿರುವ ಅಧೋಕ್ಷಜ ಮಠದಲ್ಲಿ ಸದ್ಯ ವಿಶ್ವೇಶತೀರ್ಥ ಸ್ವಾಮೀಜಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಪೂಜಾ ಸಾಮಾಗ್ರಿಗಳನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತಿದೆ.

ಪೇಜಾವರ ಶ್ರೀಗಳ ಪೂಜಾ ಸಾಮಾಗ್ರಿ, ಅವರ ಪೀಠ, ಶ್ರೀ ಕೃಷ್ಣನ ಪೂಜೆಗೆ ಉಪಯೋಗಿಸುತ್ತಿದ್ದ ಪೂಜಾ ಪರಿಕರವನ್ನು ಸಿಬ್ಬಂದಿ ವಾಹನದೊಳಗೆ ತುಂಬಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಬೆಂಗಳೂರಿನ ವಿದ್ಯಾಪೀಠಕ್ಕೆ ಈ ಸಾಮಾಗ್ರಿಗಳು ಶಿಫ್ಟ್ ಆಗಲಿವೆ. ಕಿರಿಯ ಸ್ವಾಮೀಜಿಗಳು ಕೂಡ ಸಂಜೆ ವಿದ್ಯಾ ಪೀಠಕ್ಕೆ ತೆರಳಲಿದ್ದಾರೆ ಎಂದು ಮಠದ ಸಿಬ್ಬಂದಿ ತಿಳಿಸಿದ್ದಾರೆ.

pejawara pooja items 1 1

ಈಗಾಗಲೇ ಶ್ರೀಗಳ ಸುಮಾರು 30 ಮಂದಿ ಶಿಷ್ಯರು ಶಿಫ್ಟ್ ಆಗಿದ್ದಾರೆ. 6 ಟಿಟಿಯಲ್ಲಿ ಪೂಜಾ ಸಾಮಾಗ್ರಿ ಹಾಗೂ ಶಿಷ್ಯವೃಂದದವರು ತೆರಳಿದ್ದಾರೆ. ಕಿರಿಯ ಶ್ರೀಗಳ ಪೂಜಾ ಸಾಮಾಗ್ರಿಗಳನ್ನು ಕೂಡ ಶಿಫ್ಟ್ ಮಾಡಲಾಗಿದೆ. ಸಂಜೆಯ ವೇಳೆಯ ಪೂಜೆ ವಿದ್ಯಾಪೀಠದಲ್ಲಿ ನಡೆಯುವ ಹಿನ್ನೆಲೆಯಲ್ಲಿ ಪೂಜಾ ಸಾಮಾಗ್ರಿಗಳನ್ನು ಶಿಫ್ಟ್ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *